ಮೈಸೂರಿನಲ್ಲಿ ಶ್ರೀನಿವಾಸ ವೈದ್ಯರ ಪಾರ್ಶ್ವ ಸಂಗೀತ ನಾಟಕ ಪ್ರದರ್ಶನ
ಮೈಸೂರು,ಆಗಸ್ಟ್ 23: ನಗರದ ಕಲಾಮಂದಿರದಲ್ಲಿ ಪಾರ್ಶ್ವಸಂಗೀತ ನಾಟಕ ಪ್ರದರ್ಶನ ಆಗಸ್ಟ್ 25 ಹಾಗೂ 26ರಂದು ಸಂಜೆ 7 ಗಂಟೆಗೆ ನಡೆಯಲಿದೆ.ಸಾಹಿತಿ ಶ್ರೀನಿವಾಸವೈದ್ಯ ಅವರ ಬರಹಗಳನ್ನಾಧರಿಸಿದ ಪಾರ್ಶ್ವ ಸಂಗೀತ ನಾಟಕವನ್ನು ರಂಗವಲ್ಲಿ ನಾಟಕ ತಂಡವು ಪ್ರಸ್ತುತಪಡಿಸುತ್ತಿದೆ.
ರಂಗಾಯಣದ ಹಿರಿಯ ಕಲಾವಿದ ಪ್ರಶಾಂತ್ ಹಿರೇಮಠ ನಾಟಕವನ್ನು ನಿರ್ದೇಶಿಸಿದ್ದಾರೆ.
ನಾಟಕ ಕುರಿತು: ಪಾರ್ಶ್ವ ಸಂಗೀತ ನಾಟಕವು ರ ದಶಕದಿಂದ 70ರ ದಶಕಗಳವರೆಗಿನ ಆದರೆ ಇಂದಿಗೂ ಜನಮಾನಸದಲ್ಲಿ ಉಳಿದಿರುವ ಹಿಂದಿ ಚಿತ್ರಗೀತೆಗಳೊಂದಿಗಿನ ನಮ್ಮ ಅವಿನಾಭಾವ ಸಂಬಂಧವನ್ನು ತೆರೆದಿಡುತ್ತದೆ.

ಅಂದಿನ ಕಾಲದ ಅದ್ಭುತ ಹಾಡುಗಳು, ಸಂಗೀತ ನಮ್ಮನ್ನು ಬೇರೊಂದು ಲೋಕಕ್ಕೆ ಕರೆದೊಯ್ಯುತ್ತದೆ. ಹಿಂದಿ ಗಾನಲೋಕದಲ್ಲಿ ದಂತಕತೆಗಳೆನಿಸಿದ ಕೆ.ಎಲ್.ಸೈಗಲ್, ತಲತ್ ಮಹಮೂದ್, ಮಹಮದ್ ರಫಿ, ಕಿಶೋರ್ಕುಮಾರ್, ಶಂಶಾದ್ ಬೇಗಂ, ಲತಾ ಮಂಗೇಶ್ಕರ್, ಮನ್ನಾಡೇ ಮುಂತಾದವರ ಸುಶ್ರಾವ್ಯ ಕಂಠ ನಮ್ಮ ಹೃದಯದ ತಂತಿಗಳನ್ನು ಮೀಟಿ ಭಾವತರಂಗಗಳನನ್ನು ಎಬ್ಬಿಸುವ ಪರಿಯನ್ನು ಈ ನಾಟಕದ ಮೂಲಕ ಕಟ್ಟಿಕೊಡಲಾಗಿದೆ.
ಈ ನಾಟಕದ ನಿರೂಪಕ ತನ್ನ ಬಾಲ್ಯದ ಅನುಭವದ ಮೂಲಕ ಆ ಕಾಲದ ಹಿಂದಿ ಚಿತ್ರ ಸಂಗೀತದ ಸುವರ್ಣ ಯುಗವನ್ನು ನೆನಪಿಸಿಕೊಳ್ಳುತ್ತಾನೆ. ಸುಮಾರು 25ಕ್ಕೂ ಹೆಚ್ಚು ಕಲಾವಿದರು ಅಭಿನಯಿಸಿರುವ ಈ ನಾಟಕದ ರಂಗರೂಪ-ಬಿ.ಪಿ.ಅರುಣ್. ಸಂಗೀತ ನಿರ್ವಹಣೆ -ವಿಶ್ವಾಸ್ ಕೃಷ್ಣ, ರಂಗವಿನ್ಯಾಸ-ಹೆಚ್.ಕೆ.ದ್ವಾರಕಾನಾಥ್ ಬೆಳಕಿನ ವಿನ್ಯಾಸ-ಕೃಷ್ಣಕುಮಾರ್ ನಾರ್ಣಕಜೆ, ವಸ್ತ್ರವಿನ್ಯಾಸ-ನಂದಿನಿ ಕೆ.ಆರ್., ನೃತ್ಯಸಂಯೋಜನೆ-ಕಾರ್ತಿಕ್ ಉಪಮನ್ಯು, ರಂಗನಿರ್ವಹಣೆ-ಸೀಮಂತಿನಿ ಬಿ., ಮಹೇಶ್ ಕುಮಾರ್ ಸಹ-ನಿರ್ದೇಶನ ನೀಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications