ಗದ್ದಿಗೆಯ ಗುಂಡಿಬಿದ್ದ ರಸ್ತೆಯಲ್ಲಿ ಸಂಚರಿಸೋಕೆ ಗುಂಡಿಗೆ ಬೇಕು ರೀ..!
ಮೈಸೂರು, ಅಕ್ಟೋಬರ್ 11: ಹುಣಸೂರು ತಾಲೂಕಿನಲ್ಲಿರುವ ಪವಿತ್ರ ಕ್ಷೇತ್ರ ಕೆಂಡಗಣ್ಣಸ್ವಾಮಿ ಗದ್ದಿಗೆಗೆ ಪ್ರತಿದಿನ ವಿವಿಧ ಊರುಗಳಿಂದ ಭಕ್ತಾದಿಗಳು ಮತ್ತು ಪ್ರವಾಸಿಗರು ಬರುತ್ತಿರುತ್ತಾರೆ. ಹೀಗೆ ಬರುವವರು ಇಲ್ಲಿನ ಹಳ್ಳಕೊಳ್ಳಗಳಿಂದ ಕೂಡಿದ ರಸ್ತೆಯಲ್ಲಿ ಸಂಚರಿಸುವಾಗ ಹಿಡಿಶಾಪ ಹಾಕುವುದು ಮಾಮೂಲಿ.
ಗದ್ದಿಗೆಯಿಂದ ಮೈಸೂರು ಹಾಗೂ ಹುಣಸೂರಿಗೆ ತೆರಳುವ ಪ್ರಮುಖ ರಸ್ತೆಯು ಗುಂಡಿಮಯವಾಗಿದ್ದು ಸಂಚರಿಸಲಾಗದಷ್ಟು ದುಸ್ಥಿತಿಯಿಂದ ಕೂಡಿದ್ದು ವಾಹನದಲ್ಲಿ ತೆರಳುವವರು ಅದರಲ್ಲೂ ದ್ವಿಚಕ್ರವಾಹನಗಳಲ್ಲಿ ತೆರಳುವವರು ಸರ್ಕಸ್ ಮಾಡಿಕೊಂಡೇ ಸಾಗುವುದು ಅನಿವಾರ್ಯವಾಗಿದೆ. ಸ್ವಲ್ಪ ಎಚ್ಚರ ತಪ್ಪಿದರೂ ಅಪಘಾತ ಕಟ್ಟಿಟ್ಟ ಬುತ್ತಿ.
ಕೆಂಡಗಣ್ಣಸ್ವಾಮಿ ಗದ್ದಿಗೆಯಿಂದ ಧರ್ಮಾಪುರ ಮಾರ್ಗವಾಗಿ ಹುಣಸೂರಿಗೆ ಸಾಗುವ ರಸ್ತೆ ಹಾಗೂ ಗದ್ದಿಗೆಯಿಂದ ಮೈಸೂರು ಹಾಗೂ ಬಿಳಿಕೆರೆಯನ್ನು ಸಂರ್ಪಕಿಸುವ ಪ್ರಮುಖ ರಸ್ತೆ ಒಟ್ಟು 21 ಕಿ.ಮೀ.ನಲ್ಲಿ 12ಕಿ.ಮೀ. ಮಾತ್ರ ಉತ್ತಮವಾಗಿದ್ದು, ಉಳಿದಂತೆ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದ್ದು ವಾಹನ ಸಂಚರಿಸುವುದೇ ಕಷ್ಟಕರವಾಗಿದೆ. ಈ ರಸ್ತೆಯು 70 ರಿಂದ 80ಕ್ಕೂ ಅಧಿಕ ಹಳ್ಳಿಗಳನ್ನು ಸಂಪರ್ಕಿಸುತ್ತಿದ್ದು, ಇಲ್ಲಿನವರು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಇವರಿಗೆ ಪ್ರತಿದಿನವೂ ಈ ರಸ್ತೆಯಲ್ಲಿ ಸಂಚರಿಸುವುದು ಒಂದು ರೀತಿಯ ಶಿಕ್ಷೆಯಾಗಿ ಪರಿಣಮಿಸಿದೆ.

ಸ್ಥಗಿತಗೊಂಡ ದುರಸ್ತಿಕಾರ್ಯ
ರಸ್ತೆಯ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆಯೇ ನಿರ್ವಹಿಸುತ್ತಿದ್ದರೂ ಅನುದಾನದ ಹಾಗೂ ಮಳೆಗಾಲದ ನೆಪವೊಡ್ಡಿ ಸ್ಥಗಿತಗೊಳಿಸಿದ್ದಾರೆ. ಇದರಿಂದ ದುಸ್ಥಿತಿಯ ರಸ್ತೆಯಲ್ಲಿ ಸಂಚರಿಸುವ ದೌರ್ಭಾಗ್ಯ ಜನರದ್ದಾಗಿದೆ.

ನಿಗಾ ವಹಿಸದಿದ್ದರೆ ಅವಘಡ ನಿಶ್ಚಿತ
ಗದ್ದಿಗೆಯಿಂದ ಹುಣಸೂರಿಗೆ ತೆರಳುವ ರಸ್ತೆಯು ಧರ್ಮಾಪುರದಿಂದ ಸಂತೆಕೆರೆಕೊಡಿವರೆಗೆ, ಗದ್ದಿಗೆ-ಮೈಸೂರು ಕಡೆಗೆ ಹೊಗುವ ರಸ್ತೆಯು ಗದ್ದಿಗೆಯಿಂದ ಆಸ್ವಾಳು ಗ್ರಾಮದವರೆಗೂ ರಸ್ತೆಯು ಅಲ್ಲಲ್ಲಿ ಗುಂಡಿಗಳಾಗಿದ್ದು, ಮಳೆಬಂದರೆ ಈ ಹೊಂಡಗಳಲ್ಲಿ ಕೆಸರು ತುಂಬಿ ಗದ್ದೆಯಂತಾಗಿದ್ದು, ವಾಹನದಲ್ಲಿ ತೆರಳುವವರು ಅದರಲ್ಲೂ ಬೈಕ್, ಸ್ಕೂಟರ್ ನಲ್ಲಿ ತೆರಳುವವರ ಸ್ಥಿತಿಯಂತೂ ಹೇಳತೀರದ್ದಾಗಿದೆ. ರಸ್ತೆಯತ್ತ ನಿಗಾ ವಹಿಸದೆ ಸಾಗಿದರೆ ಅವಘಡವಂತೂ ನಿಶ್ಚಿತ.

ಅಧಿಕಾರಿಗಳ ಸಮಜಾಯಿಷಿ
ಲೋಕೋಪಯೋಗಿ ಇಲಾಖೆಯೇ ರಸ್ತೆಯನ್ನು ನಿರ್ವಹಿಸುತ್ತಿದ್ದು, ಈಗಾಗಲೇ ಗದ್ದಿಗೆಯಿಂದ ಅಸ್ವಾಳು ಗ್ರಾಮದವರೆಗೆ, ಧರ್ಮಾಪುರದಿಂದ ಸಂತೆಕೆರೆಕೋಡಿವರೆಗೆ, ವಡ್ಡರಗುಡ್ಡಿ-ಹಳ್ಳದಕೊಪ್ಪಲಿನ 2 ಕಿ.ಮೀ ನಷ್ಟು ಮಣ್ಣಿನ ಅಡ್ಡರಸ್ತೆ ಸೇರಿದಂತೆ ರಸ್ತೆಯ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೆಲವು ಕಡೆ ಅನುದಾನ ಬಿಡುಗಡೆಯಾಗಿದ್ದು ಮಳೆ ಕಾರಣ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ, ಮಳೆನಿಂತ ಕಾಮಗಾರಿ ಮುಂದುವರೆಸಲಾಗುವುದು ಎಂಬುದು ಅಧಿಕಾರಿಗಳ ಸಮಜಾಯಿಷಿಯಾಗಿದೆ.

ತೊಂದರೆ ತಪ್ಪಿದ್ದಲ್ಲ
ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಲು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪರವರ ಬಳಿ ಮಾತನಾಡಿದ್ದು, ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆಗೊಂಡ ತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಮಂಜುನಾಥ್ ಹೇಳುತ್ತಿದ್ದಾರೆ. ಒಟ್ಟಾರೆ ಅಲ್ಲಿ ತನಕ ಈ ರಸ್ತೆಯಲ್ಲಿ ಸಂಚರಿಸುವವರಿಗೆ ತೊಂದರೆಯಂತೂ ತಪ್ಪಿದಲ್ಲ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications