ಚಾಮುಂಡಿ ಬೆಟ್ಟದಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ
ಮೈಸೂರು, ಜುಲೈ 26: ಚಾಮುಂಡಿ ಬೆಟ್ಟದಿಂದ ವಾಪಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸೊಂದರ ಬ್ರೇಕ್ ಏರ್ ಪೈಪ್ ತುಂಡಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಆಗಬಹುದಾದ ಭಾರಿ ಅನಾಹುತವೊಂದು ತಪ್ಪಿದೆ.
ಮೂರನೇ ಆಷಾಢ ಶುಕ್ರವಾರ: ಬೆಟ್ಟದ ತಾಯಿಗೆ ವಿಶೇಷ ಪೂಜೆ
ಕಡೆಯ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಈ ನಡುವೆ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನ ಬ್ರೇಕ್ ಏರ್ ಪೈಪ್ ತುಂಡಾಗಿದೆ. ಇದನ್ನು ಅರಿತ ಚಾಲಕ ತಕ್ಷಣ ಬಸ್ಸನ್ನು ತಡೆಗೋಡೆಗೆ ತಗಲುವಂತೆ ಮಾಡಿ ನಿಯಂತ್ರಿಸಿದ್ದಾರೆ. ಈ ಮೂಲಕ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಿದ್ದಾರೆ.
ಬಸ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಶ್ಲಾಘಿಸಿದ್ದಾರೆ.
Comments
English summary
The brake air pipe of a KSRTC bus has broke while returning from the Chamundi Hills. With the timesense of driver, a people escaped from a big accident.
Story first published: Friday, July 26, 2019, 18:19 [IST]