ಸಿಎಂ ಸಿದ್ದರಾಮಯ್ಯರನ್ನು ಭ್ರಷ್ಟ ಎಂದು ಜನ ತೀರ್ಮಾನಿಸಿದ್ದಾರೆ: ಯೋಗೇಶ್ವರ್ ಸೈನಿಕ ಕುಲಕ್ಕೆ ಅಪಮಾನ; ಎಚ್. ವಿಶ್ವನಾಥ್
ಸಿಎಂ ಸಿದ್ದರಾಮಯ್ಯನವರು ತಮ್ಮ ತವರು ಕ್ಷೇತ್ರ ವರುಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾನು ಸತ್ಯವಂತ ಎಂದು ಹೇಳಿಕೊಂಡಿದ್ದಾರೆ. ಆದರೆ ಅವರನ್ನು ಭ್ರಷ್ಟ ಎಂದು ಜನ ಈಗಾಗಲೇ ತೀರ್ಮಾನ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಟೀಕಿಸಿದ್ದಾರೆ.
ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರುಣ ಕ್ಷೇತ್ರದದಲ್ಲಿ ಮಂಗಳವಾರ ನಡೆದ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮ ಸಿಎಂ ಸಿದ್ದರಾಮಯ್ಯ ಅವರ ಸ್ಪಷ್ಟೀಕರಣ ಸಭೆಯಂತಿತ್ತು. ಸಿದ್ದರಾಮಯ್ಯ 16ನೇ ಲೂಯಿ ದೊರೆ ಇದ್ದಂಗೆ. ಲೂಯಿ ತನ್ನ ನಂತರ ಜಲಪ್ರಳಯ ಆಗಲಿ ಎಂದಿದ್ದ. ಅದೇ ರೀತಿ ಸಿದ್ದರಾಮಯ್ಯ ತನ್ನ ನಂತರ ಯಾರೂ ಇರಬಾರದು ಎಂಬ ಮನಸ್ಥಿತಿ ಹೊಂದಿದ್ದಾರೆ ಎಂದರು.

ನನಗೆ ಸ್ವಂತ ಮನೆ ಇಲ್ಲ, ಮರಿಸ್ವಾಮಿ ಮನೆಯಲ್ಲಿ ಇದ್ದೇನೆ ಎನ್ನುತ್ತೀರಿ. ನಿಮ್ಮ ಮಗ ಮತ್ತು ಸೊಸೆ ಹೆಸರಿನಲ್ಲಿ ಮಾಡಿರುವ ಪಬ್ನಿಂದ ಕೋಟ್ಯಂತರ ರೂಪಾಯಿ ಬಾಡಿಗೆ ಬರುತ್ತದೆ. ಇದಕ್ಕೆ ಸಚಿವ ಭೈರತಿ ಸುರೇಶ್ ಮಾಸ್ಟರ್ ಮೈಂಡ್ ಆಗಿದ್ದು, ಅವನ ಕ್ಷೇತ್ರದಲ್ಲೇ ಆ ಪಬ್ ಇದೆ ಎಂದರು.
ಸಿದ್ದರಾಮಯ್ಯ ನಾನು ಒಳ್ಳೆಯವ ಎಂದು ಡಂಗೂರ ಹೊಡೆಯುತ್ತಿದ್ದಾರೆ. ಸಚಿವ ಭೈರತಿ ಸುರೇಶ್ ಅವರನ್ನು ಒಳಗೆ ಹಾಕಿದರೆ ಎಲ್ಲಾ ವಿಚಾರ ಹೊರಗೆ ಬರುತ್ತವೆ. ಕರ್ನಾಟಕ ಫ್ರಾಡ್ಗಳ ಸಂತೆಯಂತಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ನೇರ ಕಾರಣರಾಗಿದ್ದಾರೆ. ಜೈಲಿಗೆ ಹೋಗಿ ಬಂದ ಒಬ್ಬ ಮಂತ್ರಿಗೆ ಮೈಸೂರು ಪೇಟ, ಹಾರ ಹಾಕಿ ಸ್ವಾಗತ ಮಾಡಿದ್ದೀರಿ. ನಿಮ್ಮನ್ನು ವಾಲ್ಮೀಕಿ ಸಮುದಾಯದ ಜನರು ನಂಬುವುದಿಲ್ಲ ಎಂದರು.
ಸೈನಿಕ ಕುಲಕ್ಕೆ ಯೋಗೇಶ್ವರ್ ಅಪಮಾನ
ಯಾಕೆ ಈಗ ಹಿಂದುಳಿದ ಕಾರ್ಡ್ ಅನ್ನು ಪ್ಲೇ ಮಾಡುತ್ತಿದ್ದಾರೆ? ಹಿಂದುಳಿದವರ ಮೂಗಿಗೆ ಸಿದ್ದರಾಮಯ್ಯ ಬೆಣ್ಣೆ ಸವರಿದ್ದಾರೆ. ಪ್ರದೇಶ ಕುರುಬರ ಸಂಘ ಒಡೆದಿದ್ದು ಯಾರು? ನಾನು ಕಟ್ಟಿದ ಕುರುಬರ ಮಠ ಒಡೆದಿದ್ದು ಯಾರು? ಇದೇ ಸಿದ್ದರಾಮಯ್ಯ ಎಂದು ಆರೋಪಿಸಿದರು. ಸೈನಿಕ ಕುಲಕ್ಕೆ ಯೋಗೇಶ್ವರ್ ಅಪಮಾನ. ಅವನನ್ನು ಸೈನಿಕ ಎಂದು ಕರೆಯಬೇಡಿ. ಹುಣಸೂರು ಉಪ ಚುನಾವಣೆ ವೇಳೆ ಪಾರ್ಟಿ ಕೊಟ್ಟ ಹಣ ತೆಗೆದುಕೊಂಡು ಓಡಿ ಹೋದರು. ಅಂತಹ ವ್ಯಕ್ತಿಯನ್ನು ಕಾಂಗ್ರೆಸ್ ಸೇರ್ಪಡೆ ಮಾಡಿಕೊಂಡು ಟಿಕೆಟ್ ಕೊಟ್ಟಿದೆ ಎಂದು ಟೀಕಿಸಿದರು.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಯೋಗೇಶ್ವರ್ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ರಾತ್ರೋರಾತ್ರಿ ಕಾಂಗ್ರೆಸ್ನಿಂದ ಟಿಕೆಟ್ ಪಡೆದುಕೊಂಡರು. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದಾರೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications