ಎಚ್.ಡಿ.ಕೋಟೆಯಲ್ಲಿ ಕಣ್ಮನ ಸೆಳೆದ ಎತ್ತಿನಗಾಡಿ ಓಟ
ಮೈಸೂರು, ಅಕ್ಟೋಬರ್ 21: ದೀಪಾವಳಿ ಹಬ್ಬದ ಅಂಗವಾಗಿ ಎಚ್.ಡಿ.ಕೋಟೆ ವ್ಯಾಪ್ತಿಯಲ್ಲಿ ನಡೆದ ಎತ್ತಿನಗಾಡಿ ಓಟ ಗಮನಸೆಳೆಯಿತು.
ಹೆಚ್ಚಿನ ಎತ್ತಿನಗಾಡಿಗಳು ಕಂಡು ಬರಲಿಲ್ಲವಾದರೂ ಒಂದಷ್ಟು ಎತ್ತಿನಗಾಡಿಗಳು ಭಾಗವಹಿಸುವ ಮೂಲಕ ಸಂಪ್ರದಾಯಕ್ಕೆ ಒತ್ತು ನೀಡಿದ್ದು ಕಂಡು ಬಂತು. ಇತ್ತೀಚೆಗೆ ಎತ್ತುಗಳನ್ನು ಸಾಕಿ ಸಲಹುವುದು ಕಷ್ಟಕರವಾಗಿದ್ದರಿಂದ ಮತ್ತು ಹೆಚ್ಚಿನವರ ಬಳಿ ವಾಹನಗಳು ಇರುವುದರಿಂದ ಗಾಡಿಗಳು ಕಣ್ಮರೆಯಾಗುತ್ತಿವೆ. ಹಳ್ಳಿಗಳಲ್ಲಿ ಕೆಲವೇ ಕೆಲವು ಗಾಡಿಗಳಷ್ಟೆ ಉಳಿದುಕೊಂಡಿದ್ದು ಅವುಗಳು ಎತ್ತಿನಗಾಡಿ ಓಟದಲ್ಲಿ ಪಾಲ್ಗೊಂಡವು.

ತಾಲೂಕಿನ ಹೆಗ್ಗನೂರು, ಎಚ್.ಮಟಕೆರೆ ಮುಂತಾದ ಗ್ರಾಮಗಳಿಂದ ಎತ್ತಿನಗಾಡಿಯೊಂದಿಗೆ ಮಾಲೀಕರು ಬಂದಿದ್ದರು. ಮರದಚಕ್ರದ ಗಾಡಿಗಳಿಗಷ್ಟೆ ಸ್ಪರ್ಧೆಯಲ್ಲಿ ಆದ್ಯತೆ ನೀಡಲಾಗಿತ್ತು. ಉಳಿದಂತೆ ಟಯರ್ ಗಾಡಿಗಳು ಭಾಗವಹಿಸಿದ್ದರೂ ಬಹುಮಾನಕ್ಕೆ ಪರಿಗಣಿಸಿರಲಿಲ್ಲ.
ಹಬ್ಬದ ಸಂದರ್ಭ ಗಾಡಿಎತ್ತುಗಳ ಓಟ ಹಿಂದಿನಿಂದಲೂ ನಡೆದುಕೊಂಡು ಬಂದಿದ್ದು, ಇದೊಂದು ಮನೋರಂಜನೆಯ ಸ್ಪರ್ಧೆಯಾಗಿತ್ತು. ಬದಲಾದ ಕಾಲಘಟ್ಟದಲ್ಲಿ ಎಲ್ಲವೂ ಬದಲಾಗಿದೆ. ಮೊದಲಿನಂತೆ ಆಸಕ್ತಿಯೂ ಜನರಲ್ಲಿ ಇಲ್ಲದಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳದಿದ್ದರೂ ಸ್ಥಳದಲ್ಲಿ ನೆರೆದವರು ಎತ್ತಿನಗಾಡಿ ಓಟ ನೋಡಿ ಸಂಭ್ರಮಿಸಿದರು.

ಕಳೆದ ಕೆಲವು ವರ್ಷಗಳಿಂದ ಬರ ಕಾಣಿಸಿಕೊಂಡು ಜನ ಬೆಳೆ ಬೆಳೆಯಲಾರದೆ ಸಂಕಷ್ಟಕ್ಕೀಡಾಗಿದ್ದರು. ಜತೆಗೆ ಮುಂಗಾರಿನಲ್ಲಿ ಸರಿಯಾಗಿ ಮಳೆ ಬಾರದೆ ಯಾವುದೇ ಬೆಳೆಯಲು ಸಾಧ್ಯವಾಗಿರಲಿಲ್ಲ. ಈಗ ಮಳೆ ಬಂದರೂ ಪ್ರಯೋಜನವಾಗಿಲ್ಲ. ಮಳೆ ಬೆಳೆಯಾಗಿ ಎಲ್ಲವೂ ಸಮೃದ್ಧಿಯಾಗಿದ್ದರೆ ಹಬ್ಬಗಳನ್ನು ಸಂಭ್ರಮಿಸಲು ಸಾಧ್ಯವಾಗುತ್ತದೆ.
ಇಂತಹ ಕಷ್ಟದ ನಡುವೆಯೂ ಗ್ರಾಮೀಣ ಜನ ಹಳೆಯ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications