ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಂಬ್ಯುಲೆನ್ಸ್ ಗಾಗಿ ಪ್ರತಿಭಟನೆ; ಮದ್ದೂರಿನಲ್ಲಿ ಪೊಲೀಸರಿಂದ ಲಾಠಿ ಪ್ರಹಾರ

|
Google Oneindia Kannada News

ಮೈಸೂರು, ಜುಲೈ 1: ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಕರೆದೊಯ್ಯಲು ಆಂಬ್ಯುಲೆನ್ಸ್ ಚಾಲಕ ಇಲ್ಲದ ಕಾರಣ ಆಕ್ರೋಶಗೊಂಡ ಸಾರ್ವಜನಿಕರು ಆಂಬುಲೆನ್ಸ್ ಜಖಂಗೊಳಿಸಲು ಯತ್ನಿಸಿದ ಘಟನೆ ಮದ್ದೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

 ಅಕ್ರಮವೆಸಗುವ ಪ್ರವೃತ್ತಿಗೆ ತಡೆ: ಹೊಸ ರೂಪದಲ್ಲಿ 108 ಆಂಬ್ಯುಲೆನ್ಸ್ ಅಕ್ರಮವೆಸಗುವ ಪ್ರವೃತ್ತಿಗೆ ತಡೆ: ಹೊಸ ರೂಪದಲ್ಲಿ 108 ಆಂಬ್ಯುಲೆನ್ಸ್

ಸಾರ್ವಜನಿಕರು ಆಂಬ್ಯುಲೆನ್ಸ್ ಜಖಂಗೊಳಿಸಲು ಮುಂದಾದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಮದ್ದೂರು ಸಮೀಪದ ಶಿವಪುರ ಮೇಲ್ಸೇತುವೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದೇಶಹಳ್ಳಿ ಗ್ರಾಮದ ಸುರೇಶ್ ಸಾವನ್ನಪ್ಪಿದ್ದರು. ದಾಸ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದಲ್ಲಿ ಗಾಯಗೊಂಡ ದಾಸ ಅವರನ್ನು ಸಾರ್ವಜನಿಕರು ತಕ್ಷಣ ಮದ್ದೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುವನ್ನು ತಕ್ಷಣ ಮಂಡ್ಯದ ಮಿಮ್ಸ್ ಗೆ ಕರೆದೊಯ್ಯಲು ಸೂಚನೆ ನೀಡಿದ ಹಿನ್ನೆಲೆ, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ.

People protested because there was no ambulance driver in madduru hospital

ಈ ವೇಳೆ ಆಂಬುಲೆನ್ಸ್ ಇದ್ದರೂ ಚಾಲಕ ಇಲ್ಲದಿರುವುದಕ್ಕೆ ಆಕ್ರೋಶಗೊಂಡ ಸಾರ್ವಜನಿಕರು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು. ಸಿಟ್ಟಿಗೆದ್ದ ಪ್ರತಿಭಟನಾಕಾರರು ಆಂಬುಲೆನ್ಸನ್ನು ಜಖಂಗೊಳಿಸಲು ಮುಂದಾಗಿದ್ದಾರೆ. ಕೆಲವರು ಕಲ್ಲು ತೂರಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ಗಂಭೀರ ಸ್ವರೂಪ ಬೆಳೆಯುತ್ತಿದ್ದಂತೆ ಲಾಠಿ ಬೀಸಿ ಪ್ರತಿಭಟನಾಕಾರರನ್ನು ಚದುರಿಸಿದರು. ನಂತರ ಸ್ಥಳಕ್ಕೆ ಬಂದ ಚಾಲಕ, ಗಾಯಾಳುವನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಿದರು. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
People protested because there was no ambulance driver in madduru hospital. People trying to shift the injured from madduru to mandya hospital. By that time, ambulance driver was not there.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X