ಹನಿಟ್ರ್ಯಾಪ್ ಜಾಲ; ಹೆದರದೇ ಮಾಹಿತಿ ನೀಡಿ ಎಂದ ಡಿಸಿಪಿ
ಮೈಸೂರು, ನವೆಂಬರ್ 21: ಈಚೆಗೆ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ, ಬ್ಲ್ಯಾಕ್ ಮೇಲ್ ಮಾಡಿ ಶ್ರೀಮಂತರಿಂದ ಹಣ ಕೀಳುವ ಪ್ರಕರಣ ಹೆಚ್ಚಾಗುತ್ತಿದ್ದು, ಈ ಜಾಲಕ್ಕೆ ಸಿಲುಕಿದವರು ಭಯಪಡದೇ ಪೊಲೀಸರಿಗೆ ಮಾಹಿತಿ ನೀಡಿ. ಇಲ್ಲವೆಂದರೆ ಇದೇ ರೀತಿ ನಡೆಯುತ್ತಲೇ ಇರುತ್ತದೆ ಎಂದು ಡಿಸಿಪಿ ಡಾ. ಎ.ಎನ್. ಪ್ರಕಾಶ್ ಗೌಡ ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿರಿಯಾಪಟ್ಟಣದ ವೈದ್ಯರೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಅವರಿಂದ 31.30 ಲಕ್ಷ ರೂ ವಸೂಲಿ ಮಾಡಿದ್ದಾರೆ. ಅವರು ಮುಂಚೆಯೇ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ಹಣ ಕಳೆದುಕೊಳ್ಳುತ್ತಿರಲಿಲ್ಲ. ಇಂತಹ ಘಟನೆಗಳಿಗೆ ಹೆದರದೇ ಮಾಹಿತಿ ನೀಡಿ ಎಂದು ಹೇಳಿದರು.
ಶುಕ್ರವಾರ ಮೈಸೂರಿನಲ್ಲಿ ಸುಲಭದಲ್ಲಿ ಹಣ ಗಳಿಸುವ ಉದ್ದೇಶದಿಂದ ಯುವತಿಯರನ್ನು ಮುಂದಿಟ್ಟುಕೊಂಡು ಹನಿಟ್ರ್ಯಾಪ್ ನಲ್ಲಿ ತೊಡಗಿದ್ದ ಐವರನ್ನು ಇಲ್ಲಿನ ಕುವೆಂಪು ನಗರ ಪೊಲೀಸರು ಬಂಧಿಸಿದ್ದರು. ಬಂಧಿತರು ಶ್ರೀಮಂತ ವ್ಯಕ್ತಿಗಳಾಗಿದ್ದು, ಎಲ್ಲರೂ ಪಿರಿಯಾಪಟ್ಟಣದವರು ಎಂದು ತಿಳಿದುಬಂದಿತ್ತು. ಇವರ ಜಾಲಕ್ಕೆ ಸಿಲುಕಿ ಕಿರುಕುಳ ತಾಳಲಾರದ ವೈದ್ಯರೊಬ್ಬರು ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ವ್ಯಕ್ತಿಯ ವಿಡಿಯೋ ಇಟ್ಟುಕೊಂಡು ಆರೋಪಿಗಳು 31 ಲಕ್ಷ ರೂ. ಹಣ ವಸೂಲಿ ಮಾಡಿದ್ದರು.

ಮೊಕದ್ದಮೆ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಬಂಧನಕ್ಕೆ ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ಮಾರ್ಗದರ್ಶನದಲ್ಲಿ ತಂಡ ರಚಿಸಿದ್ದರು. ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ನಡೆಯುತ್ತಿದೆ. ಈ ಗ್ಯಾಂಗ್ ನಿಂದ ಬ್ಲ್ಯಾಕ್ ಮೇಲ್ ಆದವರು ಪೊಲೀಸರಿಗೆ ಮಾಹಿತಿ ನೀಡಿ ಎಂದು ತಿಳಿಸಿದರು.
-
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications