ಮೈಸೂರು ಭಾಗ ಪ್ರವಾಹದಿಂದ ಮುಕ್ತ: ಸಾಂಕ್ರಾಮಿಕ ರೋಗ ವ್ಯಾಪಿಸುವ ಭೀತಿ
ಮೈಸೂರು, ಆಗಸ್ಟ್ 20: ಕಬಿನಿ ಜಲಾಶಯದ ನೀರಿನ ಹೊರ ಹರಿವಿನ ಪ್ರಮಾಣ ಭಾನುವಾರ ಕೊಂಚ ಕಡಿಮೆಯಾಗಿದ್ದು, ನದಿ ಪಾತ್ರದ ರೈತರು ಹಾಗೂ ಗ್ರಾಮಸ್ಥರು ನಿರಾಳರಾಗಿದ್ದಾರೆ.
ಇಟ್ನಾ, ಚಕ್ಕೂರು, ಬೆಳ್ತೂರು, ಮಲಾರ ಕಾಲೊನಿ, ಜಿನ್ನಹಳ್ಳಿ, ಕೋಳಗಾಲ, ಬೊಪ್ಪನಹಳ್ಳಿ ಸೇರಿದಂತೆ ಹಲವು ಗ್ರಾಮಗಳ ಗ್ರಾಮಸ್ಥರು ತಮ್ಮ ತಮ್ಮ ಗ್ರಾಮಗಳಿಗೆ ಮರಳುತ್ತಿದ್ದಾರೆ.
ನದಿ ನೀರಿನ ಹರಿವು ಹೆಚ್ಚಾದ್ದರಿಂದ ಗ್ರಾಮಗಳ ನಿವಾಸಿಗಳು ನೆಂಟರಿಷ್ಟರ ಊರುಗಳಿಗೆ ತೆರಳಿದ್ದರು. ಇತ್ತ ಕಬಿನಿ ಜಲಾಶಯದ ಹೊರ ಹರಿವು ಕಡಿಮೆಯಾದರೂ ಚಕ್ಕೂರು ಸೇತುವೆ ಹಾಗೂ ಹೊಮ್ಮರಗಳ್ಳಿ ಸೇತುವೆ ಮೇಲೆ ನೀರು ಹರಿಯುತ್ತಿದೆ.
ಜಮೀನುಗಳಲ್ಲೂ ನೀರಿನ ಪ್ರಮಾಣ ಕಡಿಮೆಯಾಗಿದ್ದು, ರೈತರಲ್ಲಿ ಸಂತಸ ಮನೆಮಾಡಿದೆ. ಆದರೆ ಕೆಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದೇ ಜನ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ.
ಇದರೊಟ್ಟಿಗೆ ಕೇರಳ ಹಾಗೂ ನಾಗರಹೊಳೆ ಭಾಗಗಳಲ್ಲಿ ಮತ್ತೆ ಭಾರಿ ಮಳೆಯಾದರೆ ಪ್ರವಾಹ ಎದುರಾಗಬಹುದು ಎಂಬ ಆತಂಕದಲ್ಲಿ ಗ್ರಾಮಸ್ಥರಿದ್ದಾರೆ. ನಂಜನಗೂಡು-ಮೈಸೂರು ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದ್ದು, ಯಾತ್ರಿಗಳು ನಿರಾಳರಾಗಿದ್ದಾರೆ. ಅಂದಹಾಗೆ ಇಲ್ಲಿ ಮೈಸೂರು ಭಾಗದಲ್ಲಿ ಎಲ್ಲೆಲ್ಲಿ ಏನಾಗಿದೆ? ಎಂಬುದರ ಸಂಪೂರ್ಣ ವಿವರವಿದೆ.

ಸಹಜ ಸ್ಥಿತಿಯತ್ತ ಜನಜೀವನ
ನಂಜನಗೂಡು ತಾಲೂಕಿನ ಸುತ್ತೂರು ಸೇತುವೆಯಲ್ಲಿ ಪ್ರವಾಹ ನೀರು ಚಾಚಿಕೊಂಡಿರುವುದರಿಂದ ಮೂರನೇ ದಿನವೂ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ನಗರದ ಸರಸ್ವತಿ ಕಾಲನಿಯ ತಗ್ಗು ಪ್ರದೇಶದಲ್ಲಿ ಮುಳುಗಡೆಯಾಗಿದ್ದ 10 ಮನೆಗಳು ಸಹಜ ಸ್ಥಿತಿಗೆ ಮರಳಿವೆ.
ಇನ್ನೂ ನಾಲ್ಕೈದು ಮನೆಗಳು ಜಲಾವೃತದಿಂದ ಮುಕ್ತಿ ಪಡೆದಿಲ್ಲ. ಹಳ್ಳದಕೇರಿಯ ಐದು ಮನೆಗಳು ಮುಳುಗಡೆ ಪ್ರಮಾಣ ಕುಗ್ಗಿದರೂ ಯಥಾಸ್ಥಿತಿ ಮುಂದುವರೆದಿದೆ. ಚರಂಡಿ ಪೈಪ್ಲೈನ್ ಮೂಲಕ ಹಿಮ್ಮುಖವಾಗಿ ಪ್ರವಾಹ ನುಗ್ಗಿ ಅವಾಂತರ ಸೃಷ್ಟಿಸಿದ್ದ ತೋಪಿನ ಬೀದಿ ಬಡಾವಣೆಯ 25ಕ್ಕೂ ಹೆಚ್ಚು ಮನೆಗಳು ಪ್ರವಾಹದಿಂದ ಮುಕ್ತವಾಗಿವೆ.

ಕ್ಷೀಣಿಸಿದ ಪ್ರವಾಹ
ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಆವರಣ ಸುತ್ತುವರೆದಿದ್ದ ಪ್ರವಾಹ ಮರೆಯಾಗಿದೆ. ಇನ್ನು ಸಂಗಮ ಸುಕ್ಷೇತ್ರ ಮಹದೇವ ತಾತಾ ಗದ್ದುಗೆ ಆವರಣ, ಮಲ್ಲನಮೂಲೆ ಮಠ, ಚಾಮುಂಡೇಶ್ವರಿ, ಅಯ್ಯಪ್ಪಸ್ವಾಮಿ, ದತ್ತಾತ್ರೇಯ ಗುಡಿ ದೇವಾಲಯಗಳಲ್ಲಿ ಪ್ರವಾಹ ಕ್ಷೀಣಿಸಿದ್ದು, ಗರ್ಭಗುಡಿಯನ್ನು ಶುಚಿಗೊಳಿಸುವ ಕಾರ್ಯದಲ್ಲಿ ಅರ್ಚಕರು ನಿರತರಾಗಿದ್ದಾರೆ.

ಮುಂದಾದ ಅಧಿಕಾರಿಗಳು
ಸಂತ್ರಸ್ತರಿಗಾಗಿ ಗಿರಿಜಾಕಲ್ಯಾಣ ಮಂಟಪ, ಸರಸ್ವತಿ ಕಾಲನಿ ಹಾಗೂ ಬೊಕ್ಕಹಳ್ಳಿ ಗ್ರಾಮದಲ್ಲಿ ತೆರೆದಿರುವ ಗಂಜಿಕೇಂದ್ರವನ್ನು ಮುಂದುವರೆಸಲಾಗಿದ್ದು, ಆಹಾರ ಪೂರೈಕೆ ಮಾಡಲಾಗುತ್ತಿದೆ.
ನಂಜನಗೂಡು, ಗುಂಡ್ಲುಪೇಟೆ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಜಲಾಗಾರ ಘಟಕಗಳು ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಸರಬರಾಜು ಮಾಡುವ ಪಂಪ್ ಹೌಸ್ಗಳಲ್ಲಿ ನೀರಿನ ಮಟ್ಟ ಇಳಿಮುಖವಾಗಿದ್ದು, ನೀರು ಪೂರೈಕೆ ಮಾಡಲು ಅಗತ್ಯ ವಿದ್ಯುತ್ ಸಂಪರ್ಕ ಸೇರಿದಂತೆ ಇನ್ನಿತರ ದುರಸ್ತಿ ಕಾರ್ಯ ಕೈಗೊಳ್ಳುವಲ್ಲಿ ಅಧಿಕಾರಿಗಳು ಮುಂದಾಗಿದ್ದಾರೆ.

ಗಂಜಿಕೇಂದ್ರ ಮುಂದುವರಿಕೆ
ಕಪಿಲೆಯ ಅಬ್ಬರದ ಪ್ರವಾಹಕ್ಕೆ ಸಿಲುಕಿದ ಜನತೆ ಮಾತ್ರ ಸಹಜ ಸ್ಥಿತಿಗೆ ಮರಳಲು ಹಲವು ವರ್ಷಗಳೇ ಬೇಕಾಗಬಹುದು. 8 ದಿನಗಳ ಕಾಲ ತಗ್ಗು ಪ್ರದೇಶಗಳನ್ನೆಲ್ಲ ಆವರಿಸಿಕೊಂಡಿದ್ದ ನೀರುತಗ್ಗು ಪ್ರದೇಶಗಳನ್ನೆಲ್ಲ ಆವರಿಸಿಕೊಂಡಿದ್ದ ನೀ ಈಗ ಗಬ್ಬೆದ್ದು ನಾರತೊಡಗಿದ್ದು, ಅನೇಕ ಸಾಂಕ್ರಾಮಿಕ ರೋಗಗಳ ಹರಡುವ ಆತಂಕ ಎದುರಾಗಿದೆ.
ತಾಲೂಕಿನ ಬೊಕ್ಕಳ್ಳಿ, ಗಿರಿಜಾಕಲ್ಯಾಣ ಮಂದಿರ, ಸರಸ್ವತಿ ಕಾಲೋನಿಗಳ ನಿರಾಶ್ರಿತರ ಶಿಬಿರವನ್ನು ತಾತ್ಕಾಲಿಕ ಆಸ್ಪತ್ರೆಯೊಂದಿಗೆ ಮುಂದುವರಿಸಲಾಗಿದ್ದು, ಜಿಲ್ಲಾಧಿಕಾರಿಗಳ ಮುಂದಿನ ಆದೇಶಕ್ಕಾಗಿ ತಾಲೂಕು ಆಡಳಿತ ಕಾಯುತ್ತಿದೆ.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications