ಮೈಸೂರಿನಲ್ಲಿ ತಂಗಿಯ ಮಾಂಗಲ್ಯ ಸರಕ್ಕೇ ಕೈ ಹಾಕಿದ್ದ ಅಣ್ಣನ ಬಂಧನ
ಮೈಸೂರು, ನವೆಂಬರ್ 13: ಅಣ್ಣನೇ ತಂಗಿಯ ವ್ಯಾನಿಟಿ ಬ್ಯಾಗ್ ನಿಂದ ಚಿನ್ನದ ಮಾಂಗಲ್ಯ ಸರವನ್ನು ಕಳವು ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಹೂಟಗಳ್ಳಿ ಕೆಎಚ್ ಬಿ ಕಾಲೊನಿ ನಿವಾಸಿ ಸಂತೋಷ್ ಕುಮಾರ್ (33) ಬಂಧಿತ ಆರೋಪಿ. ಈತ ತನ್ನ ತಂಗಿಯೊಂದಿಗೆ ಮೈಸೂರಿನ ಮೃಗಾಲಯದ ಮುಂಭಾಗ ಇರುವ ಬಟ್ಟೆ ಅಂಗಡಿಗೆ ಬಂದಿದ್ದು, ಬಟ್ಟೆ ಖರೀದಿ ಮಾಡುವ ವೇಳೆ ತಂಗಿ ತನ್ನ ಬಳಿಯಿದ್ದ 70 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ವ್ಯಾನಿಟಿ ಬ್ಯಾಗಿನಲ್ಲಿಟ್ಟು ಜೋಪಾನವಾಗಿ ನೋಡಿಕೊಳ್ಳುವಂತೆ ಹೇಳಿ ಸಂತೋಷ್ ಕುಮಾರ್ ಬಳಿ ನೀಡಿದ್ದಳು.
ಆದರೆ ಸಮಯ ಸಾಧಿಸಿ ಬ್ಯಾಗಿನಲ್ಲಿದ್ದ ಮಾಂಗಲ್ಯ ಸರವನ್ನು ಸಂತೋಷ್ ಕುಮಾರ್ ಕಳ್ಳತನ ಮಾಡಿ ತನಗೇನೂ ಗೊತ್ತಿಲ್ಲ ಎಂಬಂತೆ ಇದ್ದನು. ಬಟ್ಟೆ ಖರೀದಿ ಬಳಿಕ ಮನೆಗೆ ತೆರಳಿದ ಆಕೆ ಬ್ಯಾಗ್ ನಲ್ಲಿ ಹುಡುಕಿದಾಗ ಮಾಂಗಲ್ಯ ಸರ ಮಾಯವಾಗಿತ್ತು. ಈ ಬಗ್ಗೆ ಕೇಳಿದಾಗ ಆತ ತನಗೇನೂ ಗೊತ್ತಿಲ್ಲ ಎಂಬಂತೆ ನಾಟಕವಾಡಿದ್ದಲ್ಲದೆ, ಯಾರೋ ಕದ್ದಿರಬಹುದು ಎಂದು ಕತೆ ಕಟ್ಟಿದ್ದನು. ಹೀಗಾಗಿ ಆತನ ಸಹೋದರಿ ನಜರ್ ಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ತನಿಖೆ ವೇಳೆ ಮಾಂಗಲ್ಯ ಸರವನ್ನು ಸಂತೋಷ್ ಕುಮಾರ್ ಕಳ್ಳತನ ಮಾಡಿರುವ ಅನುಮಾನ ಬಂದಿದ್ದು, ಆತನನ್ನು ಹಿನಕಲ್ ಸಿಗ್ನಲ್ ಬಳಿ ಪತ್ತೆ ಮಾಡಿ ಠಾಣೆಗೆ ಕರೆತಂದು ವಿಚಾರಣೆ ಮಾಡಿದಾಗ ತಂಗಿಯ ಚಿನ್ನದ ಮಾಂಗಲ್ಯ ಸರವನ್ನು ತಾನೇ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ 3,50,000 ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications