ಸೌದೆ ತರಲೆಂದು ಬಂಡೀಪುರ ಅರಣ್ಯಕ್ಕೆ ಹೋದವ ಮತ್ತೆ ಬರಲೇ ಇಲ್ಲ!
ಮೈಸೂರು, ಜನವರಿ 17:ಸಂಕ್ರಾಂತಿ ಹಬ್ಬದ ಹಿನ್ನಲೆಯಲ್ಲಿ ಸೌದೆ ತರಲೆಂದು ಕಾಡಿಗೆ ಹೋದ ವ್ಯಕ್ತಿಯೊಬ್ಬ ಕಾಡಾನೆ ದಾಳಿಗೆ ಮೃತಪಟ್ಟಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಮೊಳೆಯೂರು ವಲಯದ ಕುಣಿಗಲ್ ಸಮೀಪದಲ್ಲಿ ನಡೆದಿದೆ. ಆಲನಹಳ್ಳಿ ಗಿರಿಜನ ಹಾಡಿಯ ನಿವಾಸಿ ಜಡೆಯ(45) ಎಂಬಾತನೇ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ ದುರ್ದೈವಿ.
ಈತ ಹಬ್ಬದ ಹಿನ್ನಲೆಯಲ್ಲಿ ಸೌದೆ ತರಲೆಂದು ತನ್ನ ಹಾಡಿಗೆ ಸಮೀಪದಲ್ಲಿರುವ ಬಂಡಿಪುರ ರಾಷ್ಟ್ರೀಯ ಅಭಯಾರಣ್ಯಕ್ಕೆ ತೆರಳಿದ್ದನು. ಸಾಮಾನ್ಯವಾಗಿ ಸೌದೆಗೆ ಹೋದವರು ಸ್ವಲ್ಪ ಹೊತ್ತಿನಲ್ಲಿಯೇ ಹಿಂತಿರುಗುವುದು ವಾಡಿಕೆ. ಆದರೆ ಈತ ರಾತ್ರಿಯಾದರೂ ಮನೆಗೆ ಸೌದೆಯೊಂದಿಗೆ ಮನೆಗೆ ಬಂದಿರಲಿಲ್ಲ. ಇದು ಮನೆಯವರಲ್ಲಿ ಭಯವನ್ನುಂಟು ಮಾಡಿತ್ತು.
ಸುತ್ತಮುತ್ತಲಿನವರ ಬಳಿ ವಿಚಾರಿಸಿದರೂ ಪ್ರಯೋಜನವಾಗಿರಲಿಲ್ಲ. ಆ ನಂತರ ಮನೆಯವರು ಸೇರಿದಂತೆ ಹಾಡಿವಾಸಿಗಳು ಆರ್ಎಫ್ಓ ಮಂಜುನಾಥ್ ಅವರನ್ನು ಭೇಟಿ ಮಾಡಿ ಕಾಡಿಗೆ ಹೋದ ಜಡೆಯ ಮನೆಗೆ ಮರಳಿ ಬಾರದಿರುವ ಕುರಿತು ವಿಷಯ ತಿಳಿಸಿ ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.

ಕೂಡಲೇ ಕ್ರಮ ಕೈಗೊಂಡ ಆರ್ಎಫ್ಓ ಮಂಜುನಾಥ್ ಅವರು ಸಿಬ್ಬಂದಿಗೆ ನೀಡಿದ ಸೂಚನೆ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಅರಣ್ಯದಲ್ಲಿ ಹುಡುಕಾಟ ನಡೆಸಿದಾಗ ಜಡೆಯ ಶವ ಕಾಡಿನಲ್ಲಿ ದೊರೆತಿದ್ದು, ಈತ ಕಾಡಾನೆ ತುಳಿತಕ್ಕೆ ಸಿಲುಕಿ ಸಾವನ್ನಪ್ಪಿರುವುದು ಖಚಿತಗೊಂಡಿದೆ.
ತಕ್ಷಣ ಮೇಲಾಧಿಕಾರಿ ಎಪಿಎಫ್ ಪರಮೇಶ್ ಸೇರಿದಂತೆ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ನಂತರ ಶವವನ್ನು ಎಚ್.ಡಿ.ಕೋಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಾಸುದಾರರಿಗೆ ಶವವನ್ನು ನೀಡಲಾಯಿತು.
ಶವಸಂಸ್ಕಾರಕ್ಕೆ ಮೃತನ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ಪರಿಹಾರ ನೀಡಲಾಯಿತು. ಕೆಲವು ದಿನಗಳ ಹಿಂದೆಯಷ್ಟೆ ಇದೇ ರೀತಿಯ ಘಟನೆ ನಡೆದಿದ್ದು, ಸೌದೆಗೆ ತೆರಳಿದ್ದ ಗಿರಿಜನ ವ್ಯಕ್ತಿಯ ಮೇಲೆ ಹುಲಿ ದಾಳಿ ಮಾಡಿತ್ತು. ಇದೀಗ ಕಾಡಾನೆ ದಾಳಿಗೆ ವ್ಯಕ್ತಿ ಸಾವನ್ನಪ್ಪುವಂತಾಗಿದೆ. ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿರುವುದರಿಂದ ಕಾಡಂಚಿನಲ್ಲಿ ಬದುಕು ಕಟ್ಟಿಕೊಂಡಿರುವ ಗಿರಿಜನವಾಸಿಗಳು ಭಯಭೀತರಾಗಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications