ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ವಾಸ್ತು ಹೆಸರಿನಲ್ಲಿ ಚಿನ್ನಾಭರಣ ದೋಚಿದ್ದವನ ಬಂಧನ

|
Google Oneindia Kannada News

ಮೈಸೂರು, ಜೂನ್ 13: ವಾಸ್ತು ಹೆಸರಿನಲ್ಲಿ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಕುಬೇರನ ಮೂಲೆಯಲ್ಲಿ ಆಮೆ ವಿಗ್ರಹ ಇಟ್ಟರೆ ಒಳ್ಳೆಯದೆಂದು ಹೇಳಿ ಆಮೆ ವಿಗ್ರಹ ಇಡುವ ನೆಪದಲ್ಲಿ 2 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪಿ ಸರಸ್ವತಿಪುರಂನ ಅಕ್ಷಯ್.ಪಿ.ಪದಕಿ (26) ಎಂಬಾತನನ್ನು ಲಕ್ಷ್ಮೀಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

 ಮೈಸೂರಿನಲ್ಲಿ ಬೈಕ್, ಸರ ಕದ್ದವರು ಪೊಲೀಸರ ಸೆರೆಗೆ ಮೈಸೂರಿನಲ್ಲಿ ಬೈಕ್, ಸರ ಕದ್ದವರು ಪೊಲೀಸರ ಸೆರೆಗೆ

ಇದೇ ಜೂನ್ 6ರಂದು ಕೃಷ್ಣಮೂರ್ತಿಪುರಂನಲ್ಲಿ ಇರುವ ವಿಜಯಲಕ್ಷ್ಮೀ ಎಂಬುವರ ಮನೆಯಲ್ಲಿ ಈ ಪ್ರಕರಣ ನಡೆದಿತ್ತು. ನಿಮ್ಮ ಮನೆ ವಾಸ್ತು ಸರಿಯಿಲ್ಲ, ವಾಸ್ತುಪ್ರಕಾರ ವಸ್ತುಗಳನ್ನು ಜೋಡಿಸಿಡುತ್ತೇನೆಂದು ಆಮೆ ವಿಗ್ರಹವನ್ನು ಕುಬೇರನ ಮೂಲೆಯಲ್ಲಿ ಇಡಬೇಕು ಎಂದು ಹೇಳಿ ಬೀರುವಿನ ಬೀಗ ತೆಗೆಸಿದ್ದಾನೆ. ನಂತರ, ಕುಡಿಯಲು ನೀರು ಕೇಳಿ 30 ಗ್ರಾಂ ಚಿನ್ನ, 420 ಗ್ರಾಂ ಬೆಳ್ಳಿಯನ್ನು ಕಳವು ಮಾಡಿದ್ದ.

person stolen jewellery in the name of vastu in Mysuru

ಈತ ಹೋದ ಮೇಲೆ ಕಳುವಾಗಿರುವುದು ಗೊತ್ತಾಗಿದೆ. ನಂತರ, ವಿಜಯಲಕ್ಷ್ಮೀ ಅವರು ದೂರು ದಾಖಲಿಸಿದ್ದರು. ಮೈಸೂರು ಮಾತ್ರವಲ್ಲದೇ ಬೆಂಗಳೂರು, ಮೇಲುಕೋಟೆ ಹಾಗೂ ಇತರ ಕಡೆಗಳಲ್ಲೂ ಈತ ವಾಸ್ತುಪ್ರಕಾರ ಮನೆಯಲ್ಲಿರುವ ಪರಿಕರಗಳನ್ನು ಜೋಡಿಸಿಡುತ್ತೇನೆಂದು ಹೇಳಿ ಇದೇ ರೀತಿ ಕಳ್ಳತನ ಮಾಡಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ ಪೊಲೀಸರು.

English summary
Mysore police have arrested the accused who is cheated in the name of Vastu. Akshay P. Padaki(26), a resident of Saraswatipuram, was arrested by the Lakshmipuram police for stealing Rs 2lakh worth of gold jewellery.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X