ಮೈಸೂರು ಜಿಲ್ಲೆಯಾದ್ಯಂತ ಆರಂಭವಾಯ್ತು ಸಾಕು ಪ್ರಾಣಿಗಳ ಗಣತಿ ಕಾರ್ಯ
ಮೈಸೂರು, ನವೆಂಬರ್. 13: ಪ್ರತೀ 5 ವರ್ಷಕ್ಕೊಮ್ಮೆ ನಡೆಸಲಾಗುವ ಸಾಕು ಪ್ರಾಣಿಗಳ ಗಣತಿ ಕಾರ್ಯ ಮೈಸೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ನವೆಂಬರ್ 1ರಿಂದ ಆರಂಭವಾಗಿದೆ.
ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ಆಶ್ರಯದಲ್ಲಿ 20ನೇ ರಾಷ್ಟ್ರೀಯ ಪ್ರಾಣಿ ಗಣತಿ ಯೋಜನೆಯಡಿ ಈ ಕಾರ್ಯ ಆರಂಭಿಸಿದ್ದು, 2019ರ ಜನವರಿ 31 ರಂದು ಮುಕ್ತಾಯಗೊಳ್ಳಲಿದೆ.
ಮೈಸೂರು ನಗರದ 65 ವಾರ್ಡು ಗಳಲ್ಲಿ ಪ್ರತೀ 2 ಸಾವಿರ ಕುಟುಂಬಗಳಿಗೊಬ್ಬರಂತೆ 36 ಮಂದಿ ಗಣತಿದಾರರನ್ನು ಪ್ರಾಣಿಗಳ ಗಣತಿ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದೇ ಮೊದಲ ಬಾರಿಗೆ ಜಿಪಿಎಸ್ ಉಪಕರಣ ಹೊಂದಿರುವ ಟಾಬ್ಲೆಟ್ ಗಳನ್ನು ಗಣತಿದಾರರಿಗೆ ಪೂರೈಸಿದ್ದು, ಸಂಪೂರ್ಣ ಡಿಜಿಟಲೀಕರಣದೊಂದಿಗೆ ಗಣತಿ ಕಾರ್ಯ ನಡೆಸಲಾಗುತ್ತಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ತಿಳಿಸಿದ್ದಾರೆ.

ಗಣತಿದಾರರಿಗೆ ಗುರುತಿನ ಕಾರ್ಡ್ ನೀಡ ಲಾಗಿದ್ದು, ಅವರು ತಮ್ಮ ಮನೆಗಳಿಗೆ ಬಂದಾಗ ಸಾಕು ಪ್ರಾಣಿಗಳ ಮಾಹಿತಿ ಗಳನ್ನು ನೀಡಿ ಸಹಕರಿಸಬೇಕೆಂದು ಆಯುಕ್ತರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಗಣತಿ ನಡೆಸಿದ ಮನೆ ಬಾಗಿಲ ಬಳಿ ಇಲಾಖೆ ನೀಡಿರುವ ಸ್ಟಿಕ್ಕರ್ ಗಳನ್ನು ಗಣತಿದಾರರು ಅಂಟಿಸಬೇಕು. ನಾಯಿ, ಬೆಕ್ಕು, ಕುರಿ, ಕೋಳಿ, ಹಸು, ಎಮ್ಮೆ, ಹಂದಿ, ಮೊಲ ಸೇರಿದಂತೆ ಎಲ್ಲಾ ರೀತಿಯ ಸಾಕು ಪ್ರಾಣಿಗಳ ಬಗ್ಗೆ ಸಂಪೂರ್ಣ ವಿವರ ಕಲೆ ಹಾಕಿ ಪೂರೈಸಲು ಸೂಚಿಸಲಾಗಿದೆ.
ಮಾಹಿತಿ ಕಲೆ ಹಾಕಲು ತೆರಳಿದಾಗ ಅಪಾರ್ಟ್ ಮೆಂಟ್ ಗಳ ಕೆಲ ನಿವಾಸಿಗಳು ತಾವು ಸಾಕಿರುವ ಪ್ರಾಣಿಗಳ ಮಾಹಿತಿ ನೀಡಲು ಹಿಂದೇಟು ಹಾಕುತ್ತಿರುವುದರಿಂದ ಗಣತಿ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ಇದರಿಂದ ಸಾಕು ಪ್ರಾಣಿಗಳೆಷ್ಟಿವೆ ಎಂಬುದರ ನಿಖರ ಮಾಹಿತಿ ತಿಳಿಯುವುದಿಲ್ಲವಾದ್ದರಿಂದ ನಾಗರಿಕರು, ಗಣತಿದಾರರು ಬಂದಾಗ ಅವರ ಗುರುತಿನ ಚೀಟಿ ನೋಡಿ ಸಹಕರಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ಕೋರಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications