ಮೈಸೂರು ಜಿಲ್ಲೆಯಾದ್ಯಂತ ಆರಂಭವಾಯ್ತು ಸಾಕು ಪ್ರಾಣಿಗಳ ಗಣತಿ ಕಾರ್ಯ
ಮೈಸೂರು, ನವೆಂಬರ್. 13: ಪ್ರತೀ 5 ವರ್ಷಕ್ಕೊಮ್ಮೆ ನಡೆಸಲಾಗುವ ಸಾಕು ಪ್ರಾಣಿಗಳ ಗಣತಿ ಕಾರ್ಯ ಮೈಸೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ನವೆಂಬರ್ 1ರಿಂದ ಆರಂಭವಾಗಿದೆ.
ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ಆಶ್ರಯದಲ್ಲಿ 20ನೇ ರಾಷ್ಟ್ರೀಯ ಪ್ರಾಣಿ ಗಣತಿ ಯೋಜನೆಯಡಿ ಈ ಕಾರ್ಯ ಆರಂಭಿಸಿದ್ದು, 2019ರ ಜನವರಿ 31 ರಂದು ಮುಕ್ತಾಯಗೊಳ್ಳಲಿದೆ.
ಮೈಸೂರು ನಗರದ 65 ವಾರ್ಡು ಗಳಲ್ಲಿ ಪ್ರತೀ 2 ಸಾವಿರ ಕುಟುಂಬಗಳಿಗೊಬ್ಬರಂತೆ 36 ಮಂದಿ ಗಣತಿದಾರರನ್ನು ಪ್ರಾಣಿಗಳ ಗಣತಿ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದೇ ಮೊದಲ ಬಾರಿಗೆ ಜಿಪಿಎಸ್ ಉಪಕರಣ ಹೊಂದಿರುವ ಟಾಬ್ಲೆಟ್ ಗಳನ್ನು ಗಣತಿದಾರರಿಗೆ ಪೂರೈಸಿದ್ದು, ಸಂಪೂರ್ಣ ಡಿಜಿಟಲೀಕರಣದೊಂದಿಗೆ ಗಣತಿ ಕಾರ್ಯ ನಡೆಸಲಾಗುತ್ತಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ತಿಳಿಸಿದ್ದಾರೆ.

ಗಣತಿದಾರರಿಗೆ ಗುರುತಿನ ಕಾರ್ಡ್ ನೀಡ ಲಾಗಿದ್ದು, ಅವರು ತಮ್ಮ ಮನೆಗಳಿಗೆ ಬಂದಾಗ ಸಾಕು ಪ್ರಾಣಿಗಳ ಮಾಹಿತಿ ಗಳನ್ನು ನೀಡಿ ಸಹಕರಿಸಬೇಕೆಂದು ಆಯುಕ್ತರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಗಣತಿ ನಡೆಸಿದ ಮನೆ ಬಾಗಿಲ ಬಳಿ ಇಲಾಖೆ ನೀಡಿರುವ ಸ್ಟಿಕ್ಕರ್ ಗಳನ್ನು ಗಣತಿದಾರರು ಅಂಟಿಸಬೇಕು. ನಾಯಿ, ಬೆಕ್ಕು, ಕುರಿ, ಕೋಳಿ, ಹಸು, ಎಮ್ಮೆ, ಹಂದಿ, ಮೊಲ ಸೇರಿದಂತೆ ಎಲ್ಲಾ ರೀತಿಯ ಸಾಕು ಪ್ರಾಣಿಗಳ ಬಗ್ಗೆ ಸಂಪೂರ್ಣ ವಿವರ ಕಲೆ ಹಾಕಿ ಪೂರೈಸಲು ಸೂಚಿಸಲಾಗಿದೆ.
ಮಾಹಿತಿ ಕಲೆ ಹಾಕಲು ತೆರಳಿದಾಗ ಅಪಾರ್ಟ್ ಮೆಂಟ್ ಗಳ ಕೆಲ ನಿವಾಸಿಗಳು ತಾವು ಸಾಕಿರುವ ಪ್ರಾಣಿಗಳ ಮಾಹಿತಿ ನೀಡಲು ಹಿಂದೇಟು ಹಾಕುತ್ತಿರುವುದರಿಂದ ಗಣತಿ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ಇದರಿಂದ ಸಾಕು ಪ್ರಾಣಿಗಳೆಷ್ಟಿವೆ ಎಂಬುದರ ನಿಖರ ಮಾಹಿತಿ ತಿಳಿಯುವುದಿಲ್ಲವಾದ್ದರಿಂದ ನಾಗರಿಕರು, ಗಣತಿದಾರರು ಬಂದಾಗ ಅವರ ಗುರುತಿನ ಚೀಟಿ ನೋಡಿ ಸಹಕರಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ಕೋರಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications