ಮೈಸೂರಿನಲ್ಲಿಇನ್ಮುಂದೆ ರಾತ್ರಿ 8ರ ಬಳಿಕ ಬಾಗಿಲು ಮುಚ್ಚುತ್ತವೆ ಪೆಟ್ರೋಲ್ ಬಂಕ್ ಗಳು?
Recommended Video

ಮೈಸೂರು, ಡಿಸೆಂಬರ್ 20 : ಕಳೆದ ಕೆಲವು ದಿನಗಳಿಂದ ರಾತ್ರಿಯ ವೇಳೆ ಪೆಟ್ರೋಲ್ ಬಂಕ್ ಸಿಬ್ಬಂದಿಗಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆ ಬಳಿಕ ಮೈಸೂರು ನಗರದಲ್ಲಿ ಪೆಟ್ರೋಲ್ ಬಂಕ್ ಗಳನ್ನು ಮುಚ್ಚಲಾಗುವುದು ಎಂಬ ಎಚ್ಚರಿಕೆ ಸಂದೇಶವನ್ನು ಫೆಡರೇಷನ್ ಆಫ್ ಇಂಡಿಯಾ ಪೆಟ್ರೋಲಿಯಂ ಟ್ರೇಡರ್ಸ್ ನೀಡಿದೆ.
ಪೆಟ್ರೋಲಿಯಂ ಟ್ರೇಡರ್ಸ್ ಸಂಘದ ಅಧ್ಯಕ್ಷ ಬಸವೇಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಮಾಜಘಾತುಕ ಕಿಡಿಗೇಡಿಗಳಿಂದ ಪೆಟ್ರೋಲ್ ಬಂಕ್ ಗಳ ಮೇಲೆ ಪದೇ ಪದೆ ಹಲ್ಲೆ ನಡೆಯುತ್ತಿದೆ. ತಮ್ಮ ಜೀವಕ್ಕೆ ಭದ್ರತೆ ಇಲ್ಲದ ಕಾರಣ ಇನ್ನೂ ಮುಂದೆ ಸಂಜೆ 8 ಗಂಟೆಗೆ ಪೆಟ್ರೋಲ್ ಬಂಕ್ ಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದರು.
ಡಿ.15ರ ಮಧ್ಯರಾತ್ರಿ ಸುಮಾರು 12.45ಕ್ಕೆ ಹಿನಕಲ್ ಬಳಿಯ ಅನ್ನಪೂರ್ಣ ಸರ್ವಿಸ್ ಸ್ಟೇಷನ್ ನ ಸಿಬ್ಬಂದಿ ಮತ್ತು ಮಾಲೀಕರ ಮೇಲೆ ಕಿಡಿಗೇಡಿಗಳ ತಂಡವೊಂದು ಹಲ್ಲೆ ನಡೆಸಿದ್ದು, ಬಂಕ್ ಮಾಲೀಕ ವಿನೋದ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಮಾಡಲಾಗಿತ್ತು.

ಮತ್ತೊಂದು ಪ್ರಕರಣದಲ್ಲಿ ಹೂಟಗಳ್ಳಿಯ ಹೇಮಂತ್ ಎಂಬುವವರು ಅಂದು ರಾತ್ರಿ ಪೆಟ್ರೋಲ್ ಭರಿಸಲು ಆಗಮಿಸಿದ್ದು, ಬಂಕ್ ವ್ಯಾಪ್ತಿಯಲ್ಲಿ ಸಿಗರೇಟ್ ಸೇದಲು ಮುಂದಾದರು, ಅದನ್ನು ತಡೆದು ಹೊರ ಕಳಿಸಲಾಯಿತು, ಇದರಿಂದ ಕೂಪಿತರಾದ ಅವರು, ತಂಡವೊಂದನ್ನು ಕಟ್ಟಿಕೊಂಡು ಬಂದು ತಮ್ಮ ಮೇಲೆ ಏಕಾ ಏಕಿ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ, ಹಲ್ಲೆಯಿಂದ ಕಣ್ಣು, ತಲೆ, ಸೇರಿದಂತೆ ದೇಹದ ಇತರೆ ಭಾಗಗಳಿಗೆ ಗಾಯವಾಗಿದೆ. ಈ ಘಟನೆಯಿಂದ ಭಯ ಮೂಡಿದೆ ಎಂದು ಹಲ್ಲೆಗೊಳಗಾದ ವಿನೋದ್ ಅವರು ಬೇಸರ ವ್ಯಕ್ತಪಡಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿಗಳಿಗೆ ಪ್ರಭಾವಿಗಳ ಶ್ರೀರಕ್ಷೆಯಿದೆ. ಆರೋಪಿಗಳ ಮೇಲೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 506, 143, 149, 323,324 ಮೇಲೆ ದೂರು ದಾಖಲಾಗಿದೆ, ಇದೊಂದು ಜಾಮೀನು ರಹಿತ ಪ್ರಕರಣವಾಗಿದ್ದರೂ ಪ್ರಭಾವಿಗಳ ಕೃಪಾಕಟಾಕ್ಷದಿಂದ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ ಎಂದು ಆಕ್ರೋಶ ಪಡಿಸಿದರು.
ಇಂತಹ ದುರ್ಘಟನೆಗಳು ಬಂಕ್ ಗಳಲ್ಲಿ ಪದೇ ಪದೆ ನಡೆಯುತ್ತಿದೆ ಇದರಿಂದ ಭಯದ ವಾತಾವರಣ ಮೂಡಿದೆ ಎಂದು ತಿಳಿಸಿದರು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ಉದ್ಯಮಕ್ಕೆ ಹಾಗೂ ತಮಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಜಿಲ್ಲಾ ಪೊಲೀಸ್ ಆಯುಕ್ತರಾದ ಡಾ.ಸುಬ್ರಮಣ್ಯೇಶ್ವರ ರಾವ್ ಅವರಿಗೆ ಸಂಘದಿಂದ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
-
Pakistan Crisis: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಪಾಕಿಸ್ತಾನ: ಪೆಟ್ರೋಲ್ - ಡೀಸೆಲ್ ಬೆಲೆ ಶೇ.20ರಷ್ಟು ಹೆಚ್ಚಳ, ಕಾರಣವೇನು -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್












Click it and Unblock the Notifications