ಮೈಸೂರಿನಲ್ಲಿ ಧರಂ ಸಿಂಗ್, ವಿಶ್ವನಾಥ್ ಫೋಟೋ ತಿಪ್ಪೆಗೆಸೆದಿದ್ದೇಕೆ?!
ಮಾಜಿ ಸಿಎಂ ಧರಂ ಸಿಂಗ್ ಹಾಗೂ ಮಾಜಿ ಸಂಸದ ಎಚ್. ವಿಶ್ವನಾಥ್ ಅವರ ಭಾವಚಿತ್ರಗಳನ್ನು ಮೈಸೂರಿನ ಜಿಲ್ಲಾ ಪಂಚಾಯತ್ ಆವರಣದ ಹಿಂಭಾಗದ ಕಸದ ರಾಶಿಯಲ್ಲಿ ಬಿಸಾಡಿರುವುದು ಕಾಕತಾಳೀಯವೋ, ಉದ್ದೇಶಪೂರ್ವಕವೋ ಎಂಬ ಪ್ರಶ್ನೆ ಎದ್ದಿದೆ!
ಮೈಸೂರು, ಏಪ್ರಿಲ್ 25 : ಮಾಜಿ ಸಿಎಂ ಧರಂ ಸಿಂಗ್ ಹಾಗೂ ಮಾಜಿ ಸಂಸದ ಎಚ್. ವಿಶ್ವನಾಥ್ ಅವರ ಭಾವಚಿತ್ರಗಳನ್ನ ಮೈಸೂರಿನ ಜಿಲ್ಲಾ ಪಂಚಾಯತ್ ಆವರಣದ ಹಿಂಭಾಗದ ಕಸದ ರಾಶಿಯಲ್ಲಿ ಬಿಸಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಜಿಲ್ಲಾ ಪಂಚಾಯತ್ ಹೊರ ಆವರಣದಲ್ಲಿರುವ ಕಸದ ರಾಶಿಯಲ್ಲಿ ಮಾಜಿ ಸಿಎಂ ಧರಂ ಸಿಂಗ್, ಮಾಜಿ ಸಂಸದ ವಿಶ್ವನಾಥ್, ಮಾಜಿ ಜಿ.ಪಂ ಅಧ್ಯಕ್ಷರ ಫೋಟೋ ಸಹ ಕಸದ ರಾಶಿಯಲ್ಲಿ ಬಿದ್ದಿದ್ದು, ಇದು ಜಿಲ್ಲಾಡಳಿತದ ಬೇಜವಾಬ್ದಾರಿತನವನ್ನ ಎತ್ತಿ ತೋರಿಸುತ್ತಿದೆ ಎನ್ನಲಾಗುತ್ತಿದೆ.[ಮೈಸೂರು: ಕಳ್ಳರಿಂದ ರಕ್ಷಿಸಲ್ಪಟ್ಟ ಮಕ್ಕಳಿನ್ನೂ ಅನಾಥ]

ಗಣ್ಯರ ಭಾವಚಿತ್ರಗಳನ್ನು ಚರಂಡಿಗೆ ಬಿಸಾಡಬಾರದು. ಅದರಲ್ಲೂ ಎಲ್ಲೆಂದರಲ್ಲಿ ಬಿಸಾಡಬಾರದು ಎಂಬ ನೀತಿ ಇದೆ. ಆದರೆ ಮೈಸೂರು ಜಿಲ್ಲಾ ಪಂಚಾಯತ್ ಈ ನಿಯಮವನ್ನು ಗಾಳಿಗೆ ತೂರಿದೆ. ಹೀಗೆ ನಾಡಿನ ಪ್ರಮುಖ ವ್ಯಕ್ತಿಗಳ ಭಾವಚಿತ್ರಗಳನ್ನು ಎಲ್ಲೆಂದರಲ್ಲಿ ಬಿಸಾಡುವುದು ಗಣ್ಯರಿಗೆ ಮಾಡಿದ ಅಪಮಾನ ಎನ್ನಲಾಗುತ್ತಿದೆ.

ಕಾಂಗ್ರೆಸ್ ಕೆಲ ಪ್ರಮುಖ ನಾಯಕರನ್ನು ಕಡೆಗಾಣಿಸಲಾಗುತ್ತಿದೆ ಎಂಬ ಮಾತಿಗೂ, ಇದೀಗ ಫೋಟೋ ಬಿಸಾಕಿರುವುದಕ್ಕೂ ಸಂಬಂಧವೇನಾದರೂ ಇದೆಯೇ? ಅಥವಾ ಕಾಂಗ್ರೆಸ್ಸಿನಿಂದ ಮೂಲೆಗುಂಪಾಗುತ್ತಿರುವವರ ಚಿತ್ರವನ್ನೇ ಬಿಸಾಕಿರುವುದು ಕಾಕತಾಳೀಯವೇ ಎಂಬುದು ಸದ್ಯಕ್ಕೆ ಉತ್ತರವಿಲ್ಲದ ಪ್ರಶ್ನೆ!
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications