ಹನಗೋಡಿನಲ್ಲಿ ಲಕ್ಷ್ಮಣತೀರ್ಥ ನದಿಯ ಜಲವೈಭವ

ಮೈಸೂರು, ಜೂನ್ 29 : ದಕ್ಷಿಣ ಕೊಡಗಿನಲ್ಲಿ ಮಳೆಯಾಗಿ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿದಾಗಲೆಲ್ಲ ಹುಣಸೂರು ತಾಲೂಕಿನ ಹನಗೋಡುನಲ್ಲಿರುವ ಅಣೆಕಟ್ಟೆಯಲ್ಲಿ ಜಲವೈಭವ ಕಣ್ಣಿಗೆ ತಂಪನ್ನು ನೀಡುತ್ತದೆ.

ಧುಮ್ಮಿಕ್ಕಿ ಹರಿಯುವ ಲಕ್ಷ್ಮಣ ತೀರ್ಥ ನದಿ ಹನಗೋಡುನಲ್ಲಿರುವ ಅಣೆಕಟ್ಟೆ ತುಂಬಿ ಹರಿದಾಗ ಏರ್ಪಡುವ ಸುಂದರ ದೃಶ್ಯವನ್ನು ನೋಡುವುದೇ ಕಣ್ಣಿಗೆ ಆನಂದವನ್ನುಂಟು ಮಾಡುತ್ತದೆ. ಈಗಾಗಲೇ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿಯಲ್ಲಿ ನೀರಿನ ಪ್ರಮಾಣವೂ ಹೆಚ್ಚಾಗಿದ್ದು, ಏರು ತಗ್ಗುಗಳಲ್ಲಿ ನೀರು ಹರಿದು ಬರುವಾಗ ಅದನ್ನು ನೋಡುವುದೇ ಸೊಗಸು.

ಕಳೆದ ನಾಲ್ಕು ವರ್ಷಗಳ ನಂತರ ಜೂನ್ ತಿಂಗಳಿನಲ್ಲಿ ಮೊದಲ ಬಾರಿಗೆ ನದಿಯಲ್ಲಿ ಪ್ರವಾಹ ಕಂಡು ಬರುತ್ತಿದ್ದು, ಇದು ರೈತರಲ್ಲಿ ಸಂತಸ ಮೂಡಿಸಿದೆ. ಅದರಲ್ಲೂ ಹನಗೋಡು ಅಣೆಕಟ್ಟೆ ಮೇಲೆ ಹರಿಯುವಾಗ ಕಂಡು ಬರುತ್ತಿರುವ ದೃಶ್ಯವಂತು ಕಣ್ಣಿಗೆ ಆನಂದ ಉಂಟು ಮಾಡುತ್ತದೆ.

ಈ ದೃಶ್ಯವನ್ನು ನೋಡಲೆಂದೇ ಸ್ಥಳೀಯರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಜತೆಗೆ ನೀರಿನ ಸುಂದರ ದೃಶ್ಯವನ್ನು ಸೆರೆಹಿಡಿಯುವುದು, ಸೆಲ್ಫಿ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.

Lakshmana Theertha

ಲಕ್ಷ್ಮಣತೀರ್ಥ ನದಿಗೆ ಹನಗೋಡಿನಲ್ಲಿ ಪುಟ್ಟದಾದ ಅಣೆಕಟ್ಟೆ ಕಟ್ಟಿರುವುದರಿಂದ ರೈತರಿಗೆ ಅನುಕೂಲವಾಗಿದೆಯಲ್ಲದೆ ಹುಣಸೂರು ಹಾಗೂ ಎಚ್.ಡಿ.ಕೋಟೆ ತಾಲೂಕಿನ 40 ಕೆರೆಗಳಿಗೂ ಇದರ ನೀರು ಹರಿಯುತ್ತಿದೆ. ಇದಕ್ಕೆ ಹನುಮಂತಪುರ ಹಾಗೂ ಉದ್ದೂರು ಮುಖ್ಯ ನಾಲೆಗಳನ್ನು ನಿರ್ಮಿಸುವ ಮೂಲಕ ರೈತರ ಜಮೀನಿಗೆ ನೀರನ್ನು ಹಾಯಿಸಲಾಗುತ್ತಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಕಳೆದ ಕೆಲವು ವರ್ಷಗಳಿಂದ ಲಕ್ಷ್ಮಣತೀರ್ಥ ನದಿ ಉಕ್ಕಿ ಹರಿಯದ ಕಾರಣ ಜನರು ಸುಂದರ ದೃಶ್ಯವನ್ನು ಕಳೆದು ಕೊಂಡಿದ್ದರಾದರೂ ಈ ಬಾರಿ ನೋಡುಗರಿಗೆ ಜಲವೈಭವ ದೊರೆಯುತ್ತಿದ್ದು ಜನ ಮಾತ್ರವಲ್ಲದೆ ರೈತರು ಖುಷಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+