ಭಕ್ತರ ಇಷ್ಟಾರ್ಥ ನೆರವೇರಿಸುವ ಪಿರಿಯಾಪಟ್ಟಣದಮ್ಮ
ಮೈಸೂರು, ಮಾರ್ಚ್ 14: ಪ್ರತಿಯೊಂದು ಊರಿನಲ್ಲಿ ಶಕ್ತಿ ದೇವತೆಗಳು ಒಂದೊಂದು ರೂಪದಲ್ಲಿ ನೆಲೆಗೊಂಡು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾ ಬರುತ್ತಿರುವುದನ್ನು ನಾವು ಕಾಣಬಹುದಾಗಿದೆ. ಇಂತಹ ಶಕ್ತಿದೇವತೆಗಳ ಪೈಕಿ ಪಿರಿಯಾಪಟ್ಟಣದಲ್ಲಿ ನೆಲೆನಿಂತಿರುವ ಮಸಣೀಕಮ್ಮ ಅರ್ಥಾತ್ ಪಿರಿಯಾಪಟ್ಟಣದಮ್ಮ ಕೂಡ ಒಂದಾಗಿದೆ.
7 ಜನ ಹೆಣ್ಣು ಮಕ್ಕಳಲ್ಲಿ ಹಿರಿಯಳಾಗಿದ್ದು, ಈಕೆಗೆ ಮೈಯೆಲ್ಲಾ ಕಣ್ಣುಗಳಿತ್ತು ಮತ್ತು ಚಾಮುಂಡಿ ಕಿರಿಯ ಸಹೋದರಿ ಎಂದು ಹೇಳಲಾಗುತ್ತಿದೆ. ಪಿರಿಯಾಪಟ್ಟಣವನ್ನಾಳಿದ ಚಂಗಾಳ್ವ ರಾಜ ವಂಶಸ್ಥರ ಕುಲ ದೇವತೆಯಾಗಿದ್ದ ಈಕೆಗೆ ಪಟ್ಟಣದಲ್ಲಿ ನೆಲೆ ನೀಡಿ ಪೂಜಿಸುತ್ತಾ ಬರಲಾಗುತ್ತಿತ್ತು.
ಇಲ್ಲಿರುವ ದೇಗುಲ ಸುಮಾರು 12ನೇ ಶತಮಾನದಲ್ಲಿ ಆದಿಭಾಗದಲ್ಲಿ ಹೊಯ್ಸಳ ಶೈಲಿಯಲ್ಲಿ ನಿರ್ಮಾಣಗೊಂಡಿದೆ. ಚಂಗಾಳ್ವರ ನಂತರದ ಪಿರಿಯಾ ರಾಜನ ಆಳ್ವಿಕೆಯಲ್ಲಿ ಮೈಸೂರು ಅರಸರಿಗೂ ಪಿರಿಯಾಪಟ್ಟಣ ಅರಸರಿಗೂ ಯುದ್ದ ನಡೆದ ಸಂದರ್ಭ ಮಸಣೀಕಮ್ಮ ದೇವಿಯು ಪಿರಿಯಾಪಟ್ಟಣದ ಅರಸ ವೀರರಾಜನಿಗೆ ಜಯ ದೊರಕಿಸಿಕೊಟ್ಟಿದ್ದಳು ಎಂಬ ದಂತಕತೆಯಿದೆ.

ಈ ದೇವತೆಗೆ ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು ಹಾಗೂ ನೆರೆ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿಯೂ ಭಕ್ತರಿದ್ದು, ಇಲ್ಲಿಗೆ ಆಗಮಿಸಿ ಪೂಜೆ, ಪ್ರಾರ್ಥನೆಗಳನ್ನು ಮಾಡಿಕೊಂಡು ಹೋಗುತ್ತಾರೆ. ಜತೆಗೆ ಹಲವು ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸಿದ ಕೀರ್ತಿಯೂ ಇದೆ.
ಈಗಿರುವ ಮೂಲ ದೇಗುಲ ಸುಮಾರು1500 ವರ್ಷಗಳ ಹಿಂದಿನದು ಎನ್ನಲಾಗಿದೆ. ದೇಗುಲವನ್ನು ಇತ್ತೀಚಿಗಿನ ವರ್ಷಗಳಲ್ಲಿ ಒಂದಷ್ಟು ಅಭಿವೃದ್ಧಿಯನ್ನು ಮಾಡಲಾಗಿದೆ. ಆದರೆ ದೇಗುಲ ಶಿಥಿಲಾವಸ್ಥೆಗೆ ತಲುಪಿದ್ದು, ಗೋಡೆಗಳು ಬಿರುಕು ಬಿಟ್ಟಿವೆ, ಮೇಲ್ಛಾವಣಿ ದುಸ್ಥಿತಿಗೀಡಾಗಿದೆ. ಮುಖ್ಯ ಗೋಪುರ ವಾಲಿದೆ.

ಹೀಗಾಗಿ 12 ಕೋಟಿ ವೆಚ್ಚದಲ್ಲಿ ದೇಗುಲದ ಜೀರ್ಣೋದ್ಧಾರ ಕಾರ್ಯಕ್ಕೆ ಮಸಣೀಕಮ್ಮ ದೇವಸ್ಥಾನ ಅಭಿವೃದ್ದಿ ಸಮಿತಿ ಮುಂದಾಗಿದ್ದು, ದೇಗುಲದ ನೀಲ ನಕ್ಷೆ ಕೂಡ ತಯಾರಾಗಿದೆ. ಇನ್ನೊಂದೆಡೆ ಮಸಣೀಕಮ್ಮ ದೇವರ ವಾರ್ಷಿಕ ರಥೋತ್ಸವ ಪ್ರತಿ ವರ್ಷದಂತೆ ನಡೆಸಲಾಗುತ್ತಿದ್ದು, ಅದರಂತೆ ಈ ಬಾರಿ ಮಾ.14 ರಂದು ನಡೆಯುತ್ತಿದೆ. ಈ ರಥೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ನೆರೆದು ರಥವನ್ನು ಎಳೆದು, ಹಣ್ಣು ಜವನ ಎಸೆದು ಪುನೀತರಾಗುತ್ತಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications