ಭಕ್ತರ ಇಷ್ಟಾರ್ಥ ನೆರವೇರಿಸುವ ಪಿರಿಯಾಪಟ್ಟಣದಮ್ಮ
ಮೈಸೂರು, ಮಾರ್ಚ್ 14: ಪ್ರತಿಯೊಂದು ಊರಿನಲ್ಲಿ ಶಕ್ತಿ ದೇವತೆಗಳು ಒಂದೊಂದು ರೂಪದಲ್ಲಿ ನೆಲೆಗೊಂಡು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾ ಬರುತ್ತಿರುವುದನ್ನು ನಾವು ಕಾಣಬಹುದಾಗಿದೆ. ಇಂತಹ ಶಕ್ತಿದೇವತೆಗಳ ಪೈಕಿ ಪಿರಿಯಾಪಟ್ಟಣದಲ್ಲಿ ನೆಲೆನಿಂತಿರುವ ಮಸಣೀಕಮ್ಮ ಅರ್ಥಾತ್ ಪಿರಿಯಾಪಟ್ಟಣದಮ್ಮ ಕೂಡ ಒಂದಾಗಿದೆ.
7 ಜನ ಹೆಣ್ಣು ಮಕ್ಕಳಲ್ಲಿ ಹಿರಿಯಳಾಗಿದ್ದು, ಈಕೆಗೆ ಮೈಯೆಲ್ಲಾ ಕಣ್ಣುಗಳಿತ್ತು ಮತ್ತು ಚಾಮುಂಡಿ ಕಿರಿಯ ಸಹೋದರಿ ಎಂದು ಹೇಳಲಾಗುತ್ತಿದೆ. ಪಿರಿಯಾಪಟ್ಟಣವನ್ನಾಳಿದ ಚಂಗಾಳ್ವ ರಾಜ ವಂಶಸ್ಥರ ಕುಲ ದೇವತೆಯಾಗಿದ್ದ ಈಕೆಗೆ ಪಟ್ಟಣದಲ್ಲಿ ನೆಲೆ ನೀಡಿ ಪೂಜಿಸುತ್ತಾ ಬರಲಾಗುತ್ತಿತ್ತು.
ಇಲ್ಲಿರುವ ದೇಗುಲ ಸುಮಾರು 12ನೇ ಶತಮಾನದಲ್ಲಿ ಆದಿಭಾಗದಲ್ಲಿ ಹೊಯ್ಸಳ ಶೈಲಿಯಲ್ಲಿ ನಿರ್ಮಾಣಗೊಂಡಿದೆ. ಚಂಗಾಳ್ವರ ನಂತರದ ಪಿರಿಯಾ ರಾಜನ ಆಳ್ವಿಕೆಯಲ್ಲಿ ಮೈಸೂರು ಅರಸರಿಗೂ ಪಿರಿಯಾಪಟ್ಟಣ ಅರಸರಿಗೂ ಯುದ್ದ ನಡೆದ ಸಂದರ್ಭ ಮಸಣೀಕಮ್ಮ ದೇವಿಯು ಪಿರಿಯಾಪಟ್ಟಣದ ಅರಸ ವೀರರಾಜನಿಗೆ ಜಯ ದೊರಕಿಸಿಕೊಟ್ಟಿದ್ದಳು ಎಂಬ ದಂತಕತೆಯಿದೆ.

ಈ ದೇವತೆಗೆ ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು ಹಾಗೂ ನೆರೆ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿಯೂ ಭಕ್ತರಿದ್ದು, ಇಲ್ಲಿಗೆ ಆಗಮಿಸಿ ಪೂಜೆ, ಪ್ರಾರ್ಥನೆಗಳನ್ನು ಮಾಡಿಕೊಂಡು ಹೋಗುತ್ತಾರೆ. ಜತೆಗೆ ಹಲವು ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸಿದ ಕೀರ್ತಿಯೂ ಇದೆ.
ಈಗಿರುವ ಮೂಲ ದೇಗುಲ ಸುಮಾರು1500 ವರ್ಷಗಳ ಹಿಂದಿನದು ಎನ್ನಲಾಗಿದೆ. ದೇಗುಲವನ್ನು ಇತ್ತೀಚಿಗಿನ ವರ್ಷಗಳಲ್ಲಿ ಒಂದಷ್ಟು ಅಭಿವೃದ್ಧಿಯನ್ನು ಮಾಡಲಾಗಿದೆ. ಆದರೆ ದೇಗುಲ ಶಿಥಿಲಾವಸ್ಥೆಗೆ ತಲುಪಿದ್ದು, ಗೋಡೆಗಳು ಬಿರುಕು ಬಿಟ್ಟಿವೆ, ಮೇಲ್ಛಾವಣಿ ದುಸ್ಥಿತಿಗೀಡಾಗಿದೆ. ಮುಖ್ಯ ಗೋಪುರ ವಾಲಿದೆ.

ಹೀಗಾಗಿ 12 ಕೋಟಿ ವೆಚ್ಚದಲ್ಲಿ ದೇಗುಲದ ಜೀರ್ಣೋದ್ಧಾರ ಕಾರ್ಯಕ್ಕೆ ಮಸಣೀಕಮ್ಮ ದೇವಸ್ಥಾನ ಅಭಿವೃದ್ದಿ ಸಮಿತಿ ಮುಂದಾಗಿದ್ದು, ದೇಗುಲದ ನೀಲ ನಕ್ಷೆ ಕೂಡ ತಯಾರಾಗಿದೆ. ಇನ್ನೊಂದೆಡೆ ಮಸಣೀಕಮ್ಮ ದೇವರ ವಾರ್ಷಿಕ ರಥೋತ್ಸವ ಪ್ರತಿ ವರ್ಷದಂತೆ ನಡೆಸಲಾಗುತ್ತಿದ್ದು, ಅದರಂತೆ ಈ ಬಾರಿ ಮಾ.14 ರಂದು ನಡೆಯುತ್ತಿದೆ. ಈ ರಥೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ನೆರೆದು ರಥವನ್ನು ಎಳೆದು, ಹಣ್ಣು ಜವನ ಎಸೆದು ಪುನೀತರಾಗುತ್ತಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications