Plastic Ban: ದಸರಾಗೂ ಮುಂಚೆಯೇ ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಿಸುವ ಪ್ಲಾನ್
ಮೈಸೂರು, ಜುಲೈ, 14: ಈ ಬಾರಿಯ ಮೈಸೂರು ದಸರಾಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆ ದಸರಾ ಪ್ರಾರಂಭವಾಗುವ ಮುಂಚೆ ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಎಲ್ಲಾ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು
ರಾಷ್ಟ್ರೀಯ ಹಸಿರು ನ್ಯಾಯಾಧಿಕಣದ ಮುಖ್ಯಸ್ಥರು ಹಾಗೂ ನ್ಯಾಯಮೂರ್ತಿಗಳಾದ ಸುಭಾಷ್ ಬಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಸ ವಿಲೇವಾರಿ ಕುರಿತು ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಂಧ್ರಕ್ಕೆ ತಿರುಪತಿ ಹೇಗೆ ಪ್ರಮುಖವೋ, ಕರ್ನಾಟಕದಲ್ಲಿ ಚಾಮುಂಡಿ ಬೆಟ್ಟವೂ ಅಷ್ಟೇ ಪ್ರಮುಖವಾಗಿದೆ. ಇಲ್ಲಿನ ಪರಿಸರವನ್ನು ಸಂರಕ್ಷಿಸುವಲ್ಲಿ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಚಾಮುಂಡಿ ಬೆಟ್ಟಕ್ಕೆ ಎಂಟ್ರಿ ಆಗುವ ಪ್ರದೇಶದಲ್ಲಿಯೇ ಪ್ಲಾಸ್ಟಿಕ್ ಕೊಂಡ್ಯೋಯ್ಯದಂತೆ ಪರಿಶೀಲಿಸಬೇಕು. ಪ್ರತಿ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ಗಳ ಬಳಕೆ ನಿಷೇಧಿಸಿ 20 ಲೀಟರ್ನ ಕ್ಯಾನ್ ನೀರನ್ನು ಪೇಪರ್ ಕಪ್ನಲ್ಲಿ ಬಳಸಬೇಕು ಎಂದರು.

ಚಾಮುಂಡಿಬೆಟ್ಟದಲ್ಲಿ ಪ್ಲಾಸ್ಟಿಕ್ ಮುಕ್ತ ಮಾಡಲು ಅಲ್ಲಿನ ಗ್ರಾಮ ಪಂಚಾಯಿತಿ ಹಾಗೂ ದೇವಸ್ಧಾನ ಮಂಡಳಿ ಸೇರಿ ಅಂಗಡಿ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಬಳಸದಂತೆ ಕ್ರಮವಹಿಸಬೇಕು. ಬಳಸಿದರೆ ದಂಡ ವಿಧಿಸುವ ಕೆಲಸ ಆಗಬೇಕು. ಕಾನೂನು ಪಾಲನೆ ಮಾಡದ್ದರೆ ಪರವಾನಗಿ ರದ್ದು ಪಡಿಸಿ, ದೇವಸ್ಧಾನದ ಪ್ರವೇಶದಲ್ಲಿ ಪ್ಲಾಸ್ಟಿಕ್ ತರದಂತೆ ಪರಿಶೀಲಿಸಬೇಕು ಎಂದರು.
ಇನ್ನು ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಸದಂತೆ ಅರಿವು ಮೂಡಿಸಿ. ಬೀದಿ ಬದಿ ವ್ಯಾಪಾರಿಗಳು ಏಕ ಬಳಕೆಯ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸಬೇಕು. ಕಾನೂನು ಪಾಲಿಸದಿದ್ದರೆ ದಂಡ ಹಾಕಿ. ಈ ಮೂಲಕ ಮೈಸೂರನ್ನು ಸ್ವಚ್ಛ ನಗರಿಯಾಗಿ ಇಟ್ಟುಕೊಳ್ಳಬೇಕು. ಹೀಗೆ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಿದ ಮೊದಲ ನಗರ ಮೈಸೂರು ಆಗಿದೆ.
ಎಲ್ಲಾ-ಶಾಲಾ ಕಾಲೇಜುಗಳಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಬೇಕು. ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಕಸ ವಿಲೇವಾರಿ ಸರಿಯಾಗಿ ನಿರ್ವಹಣೆ ಮಾಡಬೇಕು. ಹಸಿ ಕಸವನ್ನು ಘನ ತಾಜ್ಯ ವಿಲೇವಾರಿ ಘಟಕಗಳಲ್ಲಿ ಗೊಬ್ಬರವಾಗಿ ತಯಾರಿಸಿ ಅದನ್ನು ಮರು ಬಳಕೆ ಮಾಡಬೇಕು. ರಸ್ತೆಗಳನ್ನು ಯಾವುದಾದರೂ ಉದ್ದೇಶಕ್ಕೆ ಅನುಮತಿ ಪಡೆದು ಆಗೆದರೆ, ಅವರೇ ರಸ್ತೆಯನ್ನು ದುರಸ್ಥಿ ಮಾಡಬೇಕು ಎಂದರು.
ಮದುವೆ ಹಾಗೂ ಇತರೆ ಮೆರವಣೆಗೆ ಅಥವಾ 100ಕ್ಕಿಂತ ಹೆಚ್ಚಿನ ಜನ ಸೇರುವ ಸಭೆ-ಸಮಾರಂಭಗಳಲ್ಲಿ ಆಗುವ ಕಸ ನಿರ್ವಹಣೆಗೆ ಶುಲ್ಕ ವಿಧಿಸಬೇಕು. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕಸವನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಕೆಮಿಕಲ್ ಹಾಗೂ ಬಾಯೋಮೆಡಿಕಲ್ ವೆಸ್ಟ್ ಅನ್ನು ಸರಿಯಾಗಿ ಏಜೆನ್ಸಿಗಳು ಸಂಗ್ರಹಿಸಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ. ರಾಜೇಂದ್ರ ಅವರು ಮಾತನಾಡಿ, ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಲಾಗಿದ್ದು, ಬಳಕೆದಾರರಿಗೆ ದಂಡ ವಿಧಿಸಲಾಗುತ್ತಿದೆ. ಆಷಾಡ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಭಕ್ತಾದಿಗಳು ಭೇಟಿ ನೀಡುತ್ತಿದ್ದು, ಇದನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಸಿಲಾಗಿದೆ ಎಂದರು.
ಹಾಗೆಯೇ ಚಾಮುಂಡಿ ಬೆಟ್ಟಕ್ಕೆ ಲಲಿತ ಮಹಲ್ ಪ್ಯಾಲೇಸ್ ಬಳಿಯಿಂದ ಉಚಿತ ಬಸ್ ವ್ಯವಸ್ಥೆಯನ್ನೂ ಸಹ ಮಾಡಲಾಗಿದೆ. ಅಲ್ಲದೆ ವಿಶೇಷ 5 ತಂಡಗಳನ್ನು ರಚಿಸಿ ಪ್ಲಾಸ್ಟಿಕ್ ಅನ್ನು ಚಾಮುಂಡಿ ಬೆಟ್ಟಕ್ಕೆ ಏಕ ಬಳಕೆಯ ಪ್ಲಾಸ್ಟಿಕ್ ತೆಗೆದುಕೊಂಡು ಹೋಗದಂತೆ ತಡೆಯಲಾಗಿದೆ. ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರನ್ನು ಬಳಸದೆ ಪೇಪರ್ ಅಥವಾ ಗಾಜಿನ ಲೋಟದಲ್ಲಿ ನೀರನ್ನು ನೀಡಲಾಗುತ್ತಿದೆ ಎಂದರು.
ಚಾಮುಂಡಿ ಬೆಟ್ಟದ ಪ್ರಾಧಿಕಾರವನ್ನು ರಚಿಸಲು ಮಾನ್ಯ ಮುಖ್ಯಮಂತ್ರಿಗಳು ಬಜೆಟ್ನಲ್ಲಿ ಘೋಷಣೆ ಮಾಡಿದ್ದು, ಪ್ರಾಧಿಕಾರ ರಚನೆ ಆದರೆ ಪ್ಲಾಸ್ಟಿಕ್ ಮುಕ್ತ ಚಾಮುಂಡಿ ಬೆಟ್ಟ ಮಾಡಲು ಅನುಕೂಲ ಆಗುತ್ತದೆ. ಮುಂದಿನ ದಸರಾದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಯೋಜನೆ ರೂಪಿಸಲಾಗುವುದು ಎಂದರು.
ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ರಾದ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಾಯತ್ರಿ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ.ಜಿ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications