ದಸರೆಯೇನೋ ಮುಗಿಯಿತು, ಕಸಮಯವಾಯ್ತು ಅಂಬಾವಿಲಾಸ ಅರಮನೆ
ಮೈಸೂರು, ಅಕ್ಟೋಬರ್ 20 : ನಾಡಹಬ್ಬದ ಸಂಭ್ರಮದಲ್ಲಿ ಕಳೆದ ಹತ್ತು ದಿನಗಳಿಂದ ನವವಧುವಿನಂತೆ ಸಿಂಗಾರಗೊಂಡಿದ್ದ ಮೈಸೂರು ಇಂದು ಮತ್ತೆ ಯಥಾಸ್ಥಿತಿಗೆ ಮರಳಿದೆ. ಜಂಬೂಸವಾರಿಯನ್ನು ಆರಂಭಗೊಳಿಸುವ ಸ್ಥಳ ಅರಮನೆಯ ಆವರಣವನ್ನು ಕಸವೇ ಆವರಿಸಿದಂತಿದೆ.
ಜಂಬೂಸವಾರಿ ಮೆರವಣಿಗೆ ಹೊರಡುವ ಮೂಲಕ ಹತ್ತುದಿನಗಳ ಕಾಲ ನಡೆದ ಸಂಭ್ರಮದ ದಸರಾಕ್ಕೆ ತೆರೆ ಬಿತ್ತು. ದಸರಾ ಜಂಬೂ ಸವಾರಿ ಮೆರವಣಿಗೆಯನ್ನು ವೀಕ್ಷಿಸಲು ಅರಮನೆಯ ಆವರಣದೊಳಗೆ ಜನರಿಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಆದರೆ ಜನತೆ ಮಾತ್ರ ಸ್ವಚ್ಛತೆಯ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲದಿರುವುದು ಮಾತ್ರ ವಿಪರ್ಯಾಸ.

ಇಂದು ಅರಮನೆಯ ಆವರಣದಲ್ಲಿಂದು ಎತ್ತ ನೋಡಿದರೂ ಕಸದ ರಾಶಿಯೇ ಕಂಡು ಬರುತ್ತಿದೆ. ಕುರುಕಲು ತಿಂಡಿ ತಿಂದು ಬಿಸಾಡಿದ ಪ್ಲಾಸ್ಟಿಕ್ ಕವರ್ ಗಳು, ತಂಪು ಪಾನೀಯಗಳ ಪ್ಯಾಕೇಟ್ ಗಳು, ನೀರಿನ ಬಾಟಲ್ ಗಳು ಎಲ್ಲೆಂದರಲ್ಲಿ ಬಿದ್ದು ಗಾಳಿಗೆ ಹಾರಾಡುತ್ತಿವೆ.

ನಿಗದಿತ ಸ್ಥಳದಲ್ಲಿ ಕಸದ ಡಬ್ಬವನ್ನಾದರೂ ಇಟ್ಟಿದ್ದರೆ ಈ ಪರಿಸ್ಥಿತಿ ಉಂಟಾಗುತ್ತಿರಲಿಲ್ಲವೇನೋ. ಆದರೆ ಸಮೀಪದಲ್ಲಿ ಎಲ್ಲೂ ಕಸದ ಡಬ್ಬಿಗಳು ಇಲ್ಲದ ಕಾರಣ ಜನರು ತಾವು ತಂದ ಕಸಗಳನ್ನು ಎಲ್ಲೆಂದರಲ್ಲಿ ಬಿಸಾಡಿದ್ದರು. ಅಕ್ಷರಸ್ಥರೇ ಈ ರೀತಿ ಕಸ ಬಿಸಾಡಿ ಹೊರಟರೆ ಇನ್ನು ಏನೂ ಅರಿಯದವರ ಪಾಡೇನು?

ಆಗಮಿಸುವ ಜನತೆ ತಾವೇ ಒಂದು ಕವರ್ ತಂದು ತಾವು ತಿನ್ನುವ, ಕುಡಿಯುವ ವಸ್ತುಗಳನ್ನು ಬಳಿಕ ತಮ್ಮ ಜೊತೆಯೇ ಕೊಂಡೊಯ್ದು ವ್ಯವಸ್ಥಿತವಾಗಿ ಕಸದ ಡಬ್ಬಕ್ಕೆ ಹಾಕುವ ಬದಲು ಈ ರೀತಿ ಇಲ್ಲಿಯೇ ಸುರಿದಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.
ಇನ್ನಾದರೂ ನಮ್ಮ ಜನರು ಎಚ್ಚೆತ್ತುಕೊಂಡು ಮುಂದಿನ ದಿನಗಳಲ್ಲಿ ಈ ತೆರನಾದ ಘಟನೆಗಳು ಮರುಕಳಿಸದಂತೆ ನೋಡಿಕೊಂಡರೆ ಒಳಿತು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications