ಇನ್ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ ಅವರಿಗೆ ಗೌರವದ ಮತ್ತೊಂದು ಗರಿ!
ಬೆಂಗಳೂರು, ಅ. 16: ಇನ್ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ ಅವರು ಮತ್ತೊಂದು ಗೌರವಕ್ಕೆ ಭಾಜನರಾಗಿದ್ದಾರೆ. ಶತಮಾನೋತ್ಸವ ಸಂಭ್ರದಲ್ಲಿರುವ ಮೈಸೂರು ವಿಶ್ವವಿದ್ಯಾಲಯದ 100ನೇ ವಾರ್ಷಿಕೋತ್ಸವದಲ್ಲಿ ಸುಧಾ ಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ.
ಇದೇ ಅಕ್ಟೋಬರ್ 19ರಂದು ಬೆಳಗ್ಗೆ 10.30ಕ್ಕೆ ಕ್ರಾಫರ್ಡ್ ಭವನದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಮಾಧ್ಯಮದ ಮೂಲಕ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ವಿ.ಆರ್. ವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ, ಕುಲಾಧಿಪತಿ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಕುಲಪತಿ ಪ್ರೊ.ಜಿ. ಹೇಮಂತಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರು ಮೈಸೂರು ವಿಶ್ವವಿದ್ಯಾಲಯ ನೀಡುವ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದು, ಘಟಿಕೋತ್ಸವದಲ್ಲಿ ಇದನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರೊ.ಜಿ. ಹೇಮಂತಕುಮಾರ್ ಹೇಳಿದರು.

ಈ ವಿಷಯವಾಗಿ ರಚಿಸಲಾಗಿದ್ದ ಸಮಿತಿಯು ಮೂವರು ಹೆಸರನ್ನು ಅಂತಿಮಗೊಳಿಸಿ ರಾಜ್ಯಭವನಕ್ಕೆ ಕಳುಹಿಸಿಕೊಟ್ಟಿತ್ತು. ಇದನ್ನು ಪರಿಶೀಲನೆ ಮಾಡಿದ ರಾಜ್ಯಪಾಲರು, ಗೌರವ ಡಾಕ್ಟರೇಟ್ ಪದವಿಗೆ ಕೇವಲ ಸುಧಾಮೂರ್ತಿ ಹೆಸರನ್ನು ಅನುಮೋದಿಸಿದ್ದಾರೆ. ಉಳಿದ ಇಬ್ಬರ ಹೆಸರನ್ನು ತಿರಸ್ಕರಿಸಿದ್ದು, ಆ ಇಬ್ಬರು ಹೆಸರು ಗೊತ್ತಿಲ್ಲ ಎಂದು ಕುಲಪತಿ ತಿಳಿಸಿದರು.
ಉನ್ನತ ಶಿಕ್ಷಣದಲ್ಲಿಯೂ ಮಹಿಳೆಯರದ್ದೆ ಮೇಲುಗೈ: ಘಟಿಕೋತ್ಸವ ಸಮಾರಂಭದಲ್ಲಿ ವಿವಿಧ ಪದವಿ ಪಡೆದುಕೊಳ್ಳುವವರ ಪೈಕಿ ಈ ಸಲವೂ ಮಹಿಳೆಯರದ್ದೇ ಪಾರುಪತ್ಯ. ಸ್ನಾತಕ, ಸ್ನಾತಕೋತ್ತರ, ಪಿಎಚ್ಡಿ ವಿಭಾಗದಲ್ಲೂ ಮಹಿಳೆಯರೇ ಮೇಲುಗೈ ಸಾಧಿಸಿದ್ದಾರೆ. 29,018 ಅಭ್ಯರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುತ್ತದೆ. ಇದರಲ್ಲಿ 18,344(ಶೇ.63.21) ಮಹಿಳೆಯರು. 10,674(ಶೇ.36.78) ಪುರುಷರು. ವಾಣಿಜ್ಯ ನಿಕಾಯದ ಎಂಬಿಎ ಅಗ್ರಿಬಿಜಿನೆಸ್ ಕೋರ್ಸ್ನ ಒಬ್ಬ ಅಭ್ಯರ್ಥಿಗೆ ಮಾತ್ರ ಡಿ.ಲೀಟ್ ಪದವಿ ನೀಡಲಾಗುತ್ತಿದೆ. ವಿವಿಧ ವಿಷಯಗಳಲ್ಲಿ 654 ಅಭ್ಯರ್ಥಿಗಳಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಗುತ್ತದೆ. ಅವರಲ್ಲಿ 264(ಶೇ.40.36) ಮಹಿಳೆಯರು ಮತ್ತು 390(ಶೇ.59.63) ಪುರುಷರು ಎಂದು ಮಾಹಿತಿ ನೀಡಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications