Narendra Modi Road Show: ಮೈಸೂರಿನಲ್ಲಿ ಮೋದಿಯತ್ತ ಎಸೆದ ಮೊಬೈಲ್ ವ್ಯಕ್ತಿಗೆ ವಾಪಸ್
ಮೈಸೂರು, ಮೇ, 01: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾನುವಾರ (ಏಪ್ರಿಲ್ 31) ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಅದ್ಧೂರಿಯಾಗಿ ನಡೆಯಿತು. ಈ ವೇಳೆ ಮೋದಿಯತ್ತ ಹೂವಿನ ದಳಗಳೊಂದಿಗೆ ಎಸೆದಿದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಆ ಮೊಬೈಲ್ ಫೋನ್ ಅನ್ನು ಆರ್ಎಸ್ಎಸ್ ಕಾರ್ಯಕರ್ತನಾದ ನಂಜುಡೇ ರಾಜ್ ಅರಸ್ಗೆ ವಾಪಸ್ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ನಂಜುಂಡೇ ರಾಜೇ ಅರಸ್ ಮಾತನಾಡಿ, ಮೋದಿ ರೋಡ್ ಶೋ ವೇಳೆ ಫೋಟೋ ತೆಗೆಯುತ್ತಿದ್ದಾಗ ಹಿಂದಿನಿಂದ ಹೂ ಎಸೆದವರ ಕೈ ತಾಕಿ ಮೊಬೈಲ್ ಪ್ರಚಾರದ ವಾಹನದ ಮೇಲೆ ಬಿದ್ದಿತು. ಆಗ ನಾನು ಕೂಗಿಕೊಂಡೆ. ಸ್ಥಳದಲ್ಲಿದ್ದ ಪೊಲೀಸರು ಮೊಬೈಲ್ ಅನ್ನು ವಾಪಾಸು ನೀಡಿದರು. ಬಳಿಕ ಪೊಲೀಸರು ನನ್ನನ್ನು ಕರೆಯಿಸಿ ಅಗತ್ಯ ಮಾಹಿತಿಯನ್ನು ಪಡೆದು ಕಳುಹಿಸಿದರು ಎಂದು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನೆಲೆ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 4 ಕಿಲೋ ಮೀಟರ್ವರೆಗೆ ರೋಡ್ ಶೋ ನಡೆಸಿ ಗಮನ ಸೆಳೆದಿದ್ದರು. ರೋಡ್ ಶೋ ನಡೆದ ರಸ್ತೆಯ ಇಕ್ಕೆಲಗಳಗಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಮೋದಿ ನೋಡಲು ಕಿಕ್ಕಿರಿದು ಆಗಮಿಸಿದ್ದರು.

ಅಷ್ಟೇ ಅಲ್ಲದೆ ಮೋದಿ, ಮೋದಿ ಎಂದು ಘೋಷಣೆ ಕೂಗಿದರು. ಹಾಗೆಯೆ ದಾರಿಯುದ್ದಕ್ಕೂ ಮೋದಿಗೆ ಹೂ ಮಳೆಯನ್ನೇ ಸುರಿಸಿದರು. ಆದರೆ ಚಿಕ್ಕಗಡಿಯಾರದ ಬಳಿ ಹೂಗಳ ಮಧ್ಯೆ ಕೈತಪ್ಪಿ ಮೊಬೈಲ್ವೊಂದು ತೂರಿ ಬಂದ ಘಟನೆ ನಡೆದಿತ್ತು.
ಮೊಬೈಲ್ ಬಿದ್ದ ಹಿನ್ನೆಲೆಯಲ್ಲಿ ಕೆಲ ಕಾಲ ಆತಂಕ ಸೃಷ್ಟಿ ಆಗಿತ್ತು. ಅದನ್ನು ಸ್ವತಃ ಮೋದಿ ಹಾಗೂ ಎಸ್ಪಿಜಿಯವರು ಗಮನಿಸಿದ್ದರು. ಅಷ್ಟೇ ಅಲ್ಲದೇ ಮೋದಿ ಅವರು ರೋಡ್ ಶೋ ವೇಳೆಯೇ ಮೊಬೈಲ್ ಅನ್ನು ಹಿಂದಿರುಗಿಸುವಂತೆ ಸನ್ನೆಯನ್ನು ಮಾಡಿದ್ದರು. ಆದರೆ ಮೊಬೈಲ್ ಪ್ರಚಾರದ ವಾಹನದ ಮೇಲೆ ಬಿದ್ದಿದ್ದರಿಂದ ಯಾವುದೇ ಅನಾಹುತಗಳು ಆಗಿರಲಿಲ್ಲ. ಆದರೂ ರೋಡ್ ಶೋ ವೇಳೆ ಪ್ರಧಾನಿ ಅವರಿಗೆ ಭದ್ರತಾ ಲೋಪ ಆಗಿದೆಯಾ ಅನ್ನುವ ಚರ್ಚೆಯೂ ಆಗಿತ್ತು.
ಘಟನೆಗೆ ಸಂಬಂಧಿಸಿ ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದು, ಮೊಬೈಲ್ ಫೋನ್ ಎಸೆದವರು ಮಹಿಳಾ ಬಿಜೆಪಿ ಕಾರ್ಯಕರ್ತೆ ಆಗಿದ್ದಾರೆ. ಅವರು ದುರುದ್ದೇಶದಿಂದ ಮೊಬೈಲ್ ಅನ್ನು ಎಸೆದಿಲ್ಲ. ಬದಲಿಗೆ ಹೂ ದಳಗಳನ್ನು ಎಸೆಯುವಾಗ ಆಕಸ್ಮಿಕವಾಗಿ ಬಿದ್ದಿದೆ. ಈ ಹಿನ್ನೆಲೆ ಎಸ್ಪಿಜಿಯವರು ಮೊಬೈಲ್ ಅನ್ನು ಮಹಿಳೆಗೆ ಹಿಂದಿರುಗಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications