Narendra Modi Road Show: ಮೈಸೂರಿನಲ್ಲಿ ಮೋದಿಯತ್ತ ಎಸೆದ ಮೊಬೈಲ್ ವ್ಯಕ್ತಿಗೆ ವಾಪಸ್
ಮೈಸೂರು, ಮೇ, 01: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾನುವಾರ (ಏಪ್ರಿಲ್ 31) ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಅದ್ಧೂರಿಯಾಗಿ ನಡೆಯಿತು. ಈ ವೇಳೆ ಮೋದಿಯತ್ತ ಹೂವಿನ ದಳಗಳೊಂದಿಗೆ ಎಸೆದಿದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಆ ಮೊಬೈಲ್ ಫೋನ್ ಅನ್ನು ಆರ್ಎಸ್ಎಸ್ ಕಾರ್ಯಕರ್ತನಾದ ನಂಜುಡೇ ರಾಜ್ ಅರಸ್ಗೆ ವಾಪಸ್ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ನಂಜುಂಡೇ ರಾಜೇ ಅರಸ್ ಮಾತನಾಡಿ, ಮೋದಿ ರೋಡ್ ಶೋ ವೇಳೆ ಫೋಟೋ ತೆಗೆಯುತ್ತಿದ್ದಾಗ ಹಿಂದಿನಿಂದ ಹೂ ಎಸೆದವರ ಕೈ ತಾಕಿ ಮೊಬೈಲ್ ಪ್ರಚಾರದ ವಾಹನದ ಮೇಲೆ ಬಿದ್ದಿತು. ಆಗ ನಾನು ಕೂಗಿಕೊಂಡೆ. ಸ್ಥಳದಲ್ಲಿದ್ದ ಪೊಲೀಸರು ಮೊಬೈಲ್ ಅನ್ನು ವಾಪಾಸು ನೀಡಿದರು. ಬಳಿಕ ಪೊಲೀಸರು ನನ್ನನ್ನು ಕರೆಯಿಸಿ ಅಗತ್ಯ ಮಾಹಿತಿಯನ್ನು ಪಡೆದು ಕಳುಹಿಸಿದರು ಎಂದು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನೆಲೆ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 4 ಕಿಲೋ ಮೀಟರ್ವರೆಗೆ ರೋಡ್ ಶೋ ನಡೆಸಿ ಗಮನ ಸೆಳೆದಿದ್ದರು. ರೋಡ್ ಶೋ ನಡೆದ ರಸ್ತೆಯ ಇಕ್ಕೆಲಗಳಗಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಮೋದಿ ನೋಡಲು ಕಿಕ್ಕಿರಿದು ಆಗಮಿಸಿದ್ದರು.

ಅಷ್ಟೇ ಅಲ್ಲದೆ ಮೋದಿ, ಮೋದಿ ಎಂದು ಘೋಷಣೆ ಕೂಗಿದರು. ಹಾಗೆಯೆ ದಾರಿಯುದ್ದಕ್ಕೂ ಮೋದಿಗೆ ಹೂ ಮಳೆಯನ್ನೇ ಸುರಿಸಿದರು. ಆದರೆ ಚಿಕ್ಕಗಡಿಯಾರದ ಬಳಿ ಹೂಗಳ ಮಧ್ಯೆ ಕೈತಪ್ಪಿ ಮೊಬೈಲ್ವೊಂದು ತೂರಿ ಬಂದ ಘಟನೆ ನಡೆದಿತ್ತು.
ಮೊಬೈಲ್ ಬಿದ್ದ ಹಿನ್ನೆಲೆಯಲ್ಲಿ ಕೆಲ ಕಾಲ ಆತಂಕ ಸೃಷ್ಟಿ ಆಗಿತ್ತು. ಅದನ್ನು ಸ್ವತಃ ಮೋದಿ ಹಾಗೂ ಎಸ್ಪಿಜಿಯವರು ಗಮನಿಸಿದ್ದರು. ಅಷ್ಟೇ ಅಲ್ಲದೇ ಮೋದಿ ಅವರು ರೋಡ್ ಶೋ ವೇಳೆಯೇ ಮೊಬೈಲ್ ಅನ್ನು ಹಿಂದಿರುಗಿಸುವಂತೆ ಸನ್ನೆಯನ್ನು ಮಾಡಿದ್ದರು. ಆದರೆ ಮೊಬೈಲ್ ಪ್ರಚಾರದ ವಾಹನದ ಮೇಲೆ ಬಿದ್ದಿದ್ದರಿಂದ ಯಾವುದೇ ಅನಾಹುತಗಳು ಆಗಿರಲಿಲ್ಲ. ಆದರೂ ರೋಡ್ ಶೋ ವೇಳೆ ಪ್ರಧಾನಿ ಅವರಿಗೆ ಭದ್ರತಾ ಲೋಪ ಆಗಿದೆಯಾ ಅನ್ನುವ ಚರ್ಚೆಯೂ ಆಗಿತ್ತು.
ಘಟನೆಗೆ ಸಂಬಂಧಿಸಿ ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದು, ಮೊಬೈಲ್ ಫೋನ್ ಎಸೆದವರು ಮಹಿಳಾ ಬಿಜೆಪಿ ಕಾರ್ಯಕರ್ತೆ ಆಗಿದ್ದಾರೆ. ಅವರು ದುರುದ್ದೇಶದಿಂದ ಮೊಬೈಲ್ ಅನ್ನು ಎಸೆದಿಲ್ಲ. ಬದಲಿಗೆ ಹೂ ದಳಗಳನ್ನು ಎಸೆಯುವಾಗ ಆಕಸ್ಮಿಕವಾಗಿ ಬಿದ್ದಿದೆ. ಈ ಹಿನ್ನೆಲೆ ಎಸ್ಪಿಜಿಯವರು ಮೊಬೈಲ್ ಅನ್ನು ಮಹಿಳೆಗೆ ಹಿಂದಿರುಗಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications