ಪ್ರತಿಪಕ್ಷಗಳು ನನ್ನನ್ನು ಜೀವಂತ ಸಮಾಧಿ ಮಾಡಲು ಬಯಸುತ್ತವೆ ಎಂಬ ಪ್ರಧಾನಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
ಮೈಸೂರು , ಮೇ. 11: 'ಪ್ರತಿಪಕ್ಷಗಳು ನನ್ನನ್ನು ಜೀವಂತ ಸಮಾಧಿ ಮಾಡಲು ಬಯಸುತ್ತವೆ, ಆದರೆ ಜನರೇ ನನ್ನ ಭದ್ರತಾ ಗುರಾಣಿ. ನನಗೆ ಯಾವುದೇ ಹಾನಿಯಾಗಲು ಅವರು ಬಿಡುವುದಿಲ್ಲ' ಎಂದು ಪ್ರಧಾನಿ ಮೋದಿ ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ವಿರೋಧಪಕ್ಷಗಳು ನನ್ನನ್ನು ಸಮಾಧಿ ಮಾಡಲು ಹೊರಟಿವೆ. ನೀವು ನನ್ನನ್ನು ಕಾಪಾಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ದುರಂತವೇ ಸರಿ. ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ, ಮೋದಿ ಅವರನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ ಅಷ್ಟೆ" ಎಂದು ಟೀಕಿಸಿದ್ದಾರೆ.

ವಿರೋಧ ಪಕ್ಷಗಳ ಮೇಲೆ ಪ್ರಧಾನಿ ಆರೋಪ
ಮಹಾರಾಷ್ಟ್ರದಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ವಿರೋಧಪಕ್ಷಗಳು ನನ್ನನ್ನು ಸಮಾಧಿ ಮಾಡಲು ಹೊರಟಿವೆ. ಆದರೆ, ಭಾರತದ ಜನರು ನನ್ನ ಭದ್ರತಾ ಗುರಾಣಿ. ಅವರು ನನ್ನನ್ನು ಜೀವಂತವಾಗಿ ಅಥವಾ ಸಾಯಿಸಿ ಹೂಳಲು ಸಾಧ್ಯವಿಲ್ಲ" ಎಂದು ಹೇಳಿದ್ದರು. ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರ ಹೇಳಿಕೆಗಳನ್ನು ಟೀಕಿಸುತ್ತಾ ಇಂತಹ ಕಾಮೆಂಟ್ಗಳನ್ನು ಮಾಡಿದ್ದರು.
ಈ ಹೇಳಿಕೆಗಳಿಗೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ, ಪ್ರಧಾನಿ ಮೋದಿ ಅವರನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ ಅಷ್ಟೆ ಎಂದು ಸ್ಪಷ್ಟಪಡಿಸಿದ್ದಾರೆ.

"ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಗಳಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗು ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಭರವಸೆಗಳನ್ನು ಈಡೇರಿಸಿಲ್ಲ. ರಾಜಕೀಯವಾಗಿ ಅವರನ್ನು ಸೋಲಿಸಬೇಕೆನ್ನುವುದು ವಿರೋಧ ಪಕ್ಷಗಳ ಗುರಿ. ಏಕೆಂದರೆ ಈ ದೇಶದ ಆರ್ಥಿಕತೆ ಸುಧಾರಣೆಯಾಗಬೇಕು, ಬಡವರು ಉಳಿಯಬೇಕು" ಎಂದಿದ್ದಾರೆ.
"ಪ್ರಧಾನಿಗಳು ತಾವು ಸೋಲುತ್ತೇವೆಂದು ಹತಾಶರಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಅವರ ಭಾವನಾತ್ಮಕ ಆಟ ಜನರಿಗೆ ಗೊತ್ತಾಗಿದೆ. ಜನರಿಗೆ ಗೊತ್ತಾದ ಮೇಲೆ ಪುನಃ ಅದೇ ತಪ್ಪನ್ನು ಜನತೆ ಮಾಡುವುದಿಲ್ಲ. ರಾಜಕೀಯದಲ್ಲಿ ಮೇಲಕ್ಕೇರಿದವರು ಕೆಳಕ್ಕೆ ಇಳಿಯಲೇಬೇಕು, ಕೆಳಗಿದ್ದವನು ಮೇಲೇರಬೇಕು" ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications