ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಳ್ವಾಡಿ ವಿಷಪ್ರಸಾದ ಪ್ರಕರಣ: ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ 6 ಜನರು ಮತ್ತೆ ಅಸ್ವಸ್ಥ

|
Google Oneindia Kannada News

ಮೈಸೂರು, ಜನವರಿ 10: ಹನೂರು ತಾಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ಡಿ.14ರಂದು ವಿಷಮಿಶ್ರಿತ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದವರಲ್ಲಿ 6 ಮಂದಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಿಚ್ಚುಗುತ್ತಿ ಮಾರಮ್ಮ ದೇಗುಲದ ಎದುರು ತಮಿಳುನಾಡಿನ ಭಕ್ತೆ ಕಣ್ಣೀರಿಟ್ಟಿದ್ದೇಕೆ?ಕಿಚ್ಚುಗುತ್ತಿ ಮಾರಮ್ಮ ದೇಗುಲದ ಎದುರು ತಮಿಳುನಾಡಿನ ಭಕ್ತೆ ಕಣ್ಣೀರಿಟ್ಟಿದ್ದೇಕೆ?

ಹನೂರು ತಾಲೂಕಿನ ಎಂ.ಜಿ.ದೊಡ್ಡಿ ಗ್ರಾಮದ ಮಲ್ಲಿಗಾ, ಕಮಲ, ವೀರಮ್ಮ, ರೇಖಾ ಮತ್ತು ಪಳನಿಯಮ್ಮ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ವಿಷಮಿಶ್ರಿತ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

 ವಿಷಪ್ರಸಾದ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಪ್ರತಿಭಟನೆ ವಿಷಪ್ರಸಾದ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಪ್ರತಿಭಟನೆ

ಆದರೆ ಮಂಗಳವಾರ ರಾತ್ರಿ ಕಾಣಿಸಿಕೊಂಡ ತೀವ್ರ ಹೊಟ್ಟೆ ನೋವು ಮತ್ತು ಹೊಟ್ಟೆ ಉರಿಯಿಂದ ಪುನಃ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ 6 ಮಂದಿ ಮಹಿಳೆಯರನ್ನು ಒಂದೇ ಕೊಠಡಿಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Poison Prasada Case:6 people again hospitalized

ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ವೇಣುಗೋಪಾಲ್ ಈ ಕುರಿತು ಮಾತನಾಡಿ, ಸುಳ್ವಾಡಿ ದುರಂತದಲ್ಲಿ ಅಸ್ವಸ್ಥಗೊಂಡಿದ್ದವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆರೋಗ್ಯ ಸುಧಾರಣೆಯಾದ ಬಳಿಕ ಸ್ವಗ್ರಾಮಕ್ಕೆ ಹಿಂತಿರುಗಿದ್ದರು.

 ವಿಷಪ್ರಸಾದ ಆರೋಪಿಗಳಿಂದ ಜಾಮೀನು ಪಡೆದುಕೊಳ್ಳಲು ಪ್ರಯತ್ನ ವಿಷಪ್ರಸಾದ ಆರೋಪಿಗಳಿಂದ ಜಾಮೀನು ಪಡೆದುಕೊಳ್ಳಲು ಪ್ರಯತ್ನ

ಆದರೆ ಮಂಗಳವಾರ ರಾತ್ರಿ ಎಂ.ಜಿ.ದೊಡ್ಡಿಯ 6 ಮಂದಿಗೆ ವಿಪರೀತ ಜ್ವರ, ವಾಂತಿ-ಬೇಧಿ, ಹೊಟ್ಟೆ ನೋವು, ಹೊಟ್ಟೆ ಉರಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆ ದಾಖಲಾಗಿದ್ದು, ಇವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

English summary
6 people are again hospitalized in Kollegala talluk.They consumed Sulwadi Maramma temple Poison Prasada on December 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X