ವಿಷ ಪ್ರಸಾದ ಆರೋಪಿಗಳು ರಾತ್ರೋರಾತ್ರಿ ಮೈಸೂರು ಜೈಲಿಗೆ ಶಿಫ್ಟ್
ಮೈಸೂರು, ಡಿಸೆಂಬರ್ 22 : ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನ ವಿಷ ಪ್ರಸಾದ ದುರಂತ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಆರೋಪಿಗಳನ್ನು ಶುಕ್ರವಾರ ರಾತ್ರಿ ಮೈಸೂರಿನ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದರು.
ಕಳೆದ ಬುಧವಾರ ಬಂಧಿಸಲ್ಪಟ್ಟ ಶ್ರೀ ಇಮ್ಮಡಿ ಮಹದೇವಸ್ವಾಮೀಜಿ, ಅಂಬಿಕಾ, ಈಕೆಯ ಗಂಡ ಮಾದೇಶ್ ಹಾಗೂ ದೊಡ್ಡಯ್ಯ ಅವರನ್ನು ಪೊಲೀಸರು ಹೆಚ್ಚಿನ ವಿಚಾರಣೆಗಾಗಿ 4 ದಿನಗಳವರೆಗೆ ತಮ್ಮ ಕಸ್ಟಡಿಗೆ ಪಡೆದಿದ್ದರು.
ಎರಡು ದಿನಗಳಲ್ಲಿ ಆರೋಪಿಗಳನ್ನು ಸ್ಥಳಕ್ಕೆ ಮಹಜರು ನಡೆಸಿದ್ದಲ್ಲದೆ, ತೀವ್ರ ವಿಚಾರಣೆಗೆ ಒಳಪಡಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಗಳನ್ನು ಸಂಗ್ರಹಸಿರುವ ಪೊಲೀಸರು, ಶುಕ್ರವಾರ ರಾತ್ರಿ 11.30ಕ್ಕೆ ಕೊಳ್ಳೇಗಾಲ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಟಿ.ಶ್ರೀಕಾಂತ್ ಅವರ ಮುಂದೆ ಹಾಜರುಪಡಿಸಿದರು.

ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಪೊಲೀಸರು ಕೋರದ ಕಾರಣ ಆರೋಪಿಗಳನ್ನು 2019ರ ಜ.3ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶಿಸಿದರು. ನಂತರ ಚಾಮರಾಜನಗರ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪಸನ್ನ, ಡಿವೈಎಸ್ಪಿ ಪುಟ್ಟಮಾದಯ್ಯ ಹಾಗೂ ಸಿಬ್ಬಂದಿ ನಾಲ್ವರೂ ಆರೋಪಿಗಳನ್ನು ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದರು.
ಇತ್ತ ಸಿಎಫ್ಟಿಆರ್ಐ ವರದಿಯೂ ಬಂತು, ಎಫ್ಎಸ್ಎಲ್ ವರದಿಯಿಂದ ಪ್ರಸಾದಕ್ಕೆ ಬಳಸಿರುವುದು ಕ್ರಿಮಿ ನಾಶಕ ಎಂದು ಈಗಾಗಲೇ ಗೊತ್ತಾಗಿದ್ದು, ಇದೀಗ ಅಂದರೆ ಮೈಸೂರು ಸಿಎಫ್ಟಿಆರ್ಐನಿಂದಲೂ ವರದಿ ಬಂದಿದೆ. ಪ್ರಸಾದ 'ಸೇವಿಸಲು ಯೋಗ್ಯವಾಗಿರಲಿಲ್ಲ' ಎಂದು ಸಿಎಫ್ಟಿಆರ್ಐನಿಂದ ವರದಿ ಬಂದಿದೆ ಎಂದು ಡಿಎಚ್ಒ ಡಾ.ಪ್ರಸಾದ್ ತಿಳಿಸಿದ್ದಾರೆ.
ವಿಷದುರಂತದ ನಂತರ ಭಕ್ತರು ಸೇವಿಸಿದ್ದ ರೈಸ್ಬಾತ್ನ(ಪ್ರಸಾದ) ಮಾದರಿ ಮತ್ತು ಇದಕ್ಕೆ ಬಳಸಿದ್ದ ನೀರನ್ನು ಸಿಎಫ್ಟಿ ಆರ್ಐಗೆ ಕಳುಹಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications