ಮೈಸೂರಿನಲ್ಲಿ ಶ್ರೀಗಂಧ ಮರ ಕಳ್ಳರನ್ನು ಬಂಧಿಸಿದ ಪೊಲೀಸರು
ಮೈಸೂರು, ಜನವರಿ 08: ಅಕ್ರಮವಾಗಿ ಶ್ರೀಗಂಧ ಮರ ತುಂಡುಗಳನ್ನು ಹಿಡಿದುಕೊಂಡು ನಿಂತಿದ್ದ ಮೂವರು ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.
ಮೈಸೂರು ನಗರದ ಕೃಷ್ಣರಾಜ ಪೊಲೀಸ್ ಠಾಣಾ ಸರಹದ್ದಿನ ಗೌರಿಶಂಕರ ನಗರದ ಬಸ್ ಸ್ಟ್ಯಾಂಡ್ ಮುಂಭಾಗ ಕಾರ್ಯಾಚರಣೆ ನಡೆಸಿ, ಎರಡು ಪ್ಲಾಸ್ಟಿಕ್ ಚೀಲಗಳಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಇಟ್ಟುಕೊಂಡಿದ್ದ ಮೂವರು ಕಳ್ಳರು ಪೊಲೀಸ್ ವಶದಲ್ಲಿದ್ದಾರೆ.
ಬಂಧಿತರನ್ನು ಸಂಪತ್ ಕುಮಾರ್ ಬಿನ್ ಲೇಟ್ ಸುಬ್ರಮಣ್ಯ(32), ವಿದ್ಯಾರಣ್ಯಪುರಂ ಮೈಸೂರು, ಪರಶುರಾಂ ಬಿನ್ ವರದರಾಜ್( 38) ಬೊಂಬು ಬಜಾರ್, ಮೈಸೂರು, ಸೈಯದ್ ಬಾಬು( 26), ಶಾಂತಿ ನಗರ ಮೈಸೂರು ನಿವಾಸಿಗಳೆಂದು ಗುರುತಿಸಲಾಗಿದೆ.

ಈ ಮೂವರು ಕಳ್ಳರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಇವರು ಮೈಸೂರಿನ ಜೆ.ಎಸ್.ಎಸ್ ಮಠದ ಅವರಣದಲ್ಲಿ ಶ್ರೀಗಂಧದ ಮರ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದು, ಇವರಿಂದ 4,00,000 ರೂ. ಮೌಲ್ಯದ 40 ಕೆ.ಜಿ. ತೂಕದ 07 ಶ್ರೀಗಂಧದ ಮರದ ತುಂಡುಗಳು ಹಾಗೂ ತೊಗಟೆ ತೆಗೆದಿದ್ದ ಶ್ರೀಗಂಧದ ಸಣ್ಣ ಸಣ್ಣ ಪೀಸುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಆರೋಪಿಗಳ ವಿರುದ್ಧ ಮೈಸೂರು ಜಿಲ್ಲೆಯ ಹುಣಸೂರು ಮತ್ತು ಕೊಡಗು ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಶ್ರೀಗಂಧದ ಮರಗಳ ಕಳ್ಳತನ ಪ್ರಕರಣಗಳು ದಾಖಲಾಗಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಈ ಕಾರ್ಯಚರಣೆಯಿಂದ ಮೈಸೂರು ನಗರ ಕೃಷ್ಣರಾಜ ಪೊಲೀಸ್ ಠಾಣೆಯ 1 ಶ್ರೀಗಂಧ ಮರ ಕಳ್ಳತನ ಪ್ರಕರಣ ಪತ್ತೆಯಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications