ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟಾಯ್ಲೆಟ್ ಗೆಂದು ಕರೆದುಕೊಂಡು ಹೋಗಿ ದುಡ್ಡು ದೋಚುತ್ತಿದ್ದವರ ಬಂಧನ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 14: ಅಮಾಯಕರನ್ನು ಸುಲಿಗೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ಮೂವರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಅವರಿಂದ 1.80 ಲಕ್ಷ ರೂಪಾಯಿ ಮೌಲ್ಯದ ಮೂರು ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ಮೈಸೂರಿನ ವಿಜಯನಗರ ನಿವಾಸಿ ಕಾರ್ತಿಕ್ (23), ಪಡುವಾರಹಳ್ಳಿ ನಿವಾಸಿ ಆನಂದ್ (22), ಬೆಳವಾಡಿಯ ಅಮೃತೇಶ್ವರನಗರದ ನಿವಾಸಿ ಶಿವಕುಮಾರ್ (19) ಎಂದು ಗುರುತಿಸಲಾಗಿದೆ.

ನೀರು ಕೇಳುವ ನೆಪದಲ್ಲಿ ಬಂದು ಇವರು ಮಾಡಿದ್ದು ಈ ಕೆಲಸ!ನೀರು ಕೇಳುವ ನೆಪದಲ್ಲಿ ಬಂದು ಇವರು ಮಾಡಿದ್ದು ಈ ಕೆಲಸ!

ಮಂಜುನಾಥ್ ಎಂಬುವರು ಡಿಸೆಂಬರ್‌ 12ರಂದು ಬೆಂಗಳೂರಿನಿಂದ ಮೈಸೂರು ರೈಲ್ವೆ ನಿಲ್ದಾಣಕ್ಕೆ ಬಂದು ಹೊಳೆನರಸೀಪುರಕ್ಕೆ ಹೋಗುವ ರೈಲು ತಡವಾಗುತ್ತಿದ್ದರಿಂದ ಊಟ ಮಾಡುವ ಸಲುವಾಗಿ ದಾಸಪ್ಪ ಸರ್ಕಲ್‌ಗೆ ಬಂದರು. ಆಗ ಅವರನ್ನು ತಾವೂ ಹೊಳೆನರಸೀಪುರದವರು ಎಂದು ಪರಿಚಯ ಮಾಡಿಕೊಂಡ ಆರೋಪಿಗಳು, ಮೂತ್ರ ವಿಸರ್ಜನೆ ಮಾಡಿ ಬರುವ ಎಂದು ಹೇಳಿ ದಾಸಪ್ಪ ಸರ್ಕಲ್‌ನ ರೈಲ್ವೆ ಬ್ರಿಡ್ಜ್ ಬಳಿ ಇರುವ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ.

Police Arrested Three Robbers In Mysuru

ಅನಂತರ ಮಂಜುನಾಥ್ ಅವರ ಕುತ್ತಿಗೆ ಅದುಮಿ ಹಿಡಿದು ಮುಖದ ಮೇಲೆ ಹೊಡೆದಿದ್ದಾರೆ. ಚಾಕು ತೋರಿಸಿ ಹೆದರಿಸಿ, ಜೇಬಿನಲ್ಲಿದ್ದ ರೂ.2400 ರೂಪಾಯಿ ನಗದು ಮತ್ತು ಕತ್ತಿನಲ್ಲಿದ್ದ ಒಂದು ಸರವನ್ನು ಕಿತ್ತುಕೊಂಡು ಹೋಗಿದ್ದರು. ಈ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಚಿತ್ರದುರ್ಗದಲ್ಲಿ 'ಪಾನ್ ಮಸಾಲ'ಕ್ಕಾಗಿ ಲಾರಿ ಚಾಲಕನೇ ಕಿಡ್ನಾಪ್! ಚಿತ್ರದುರ್ಗದಲ್ಲಿ 'ಪಾನ್ ಮಸಾಲ'ಕ್ಕಾಗಿ ಲಾರಿ ಚಾಲಕನೇ ಕಿಡ್ನಾಪ್!

ತನಿಖೆ ಕೈಗೊಂಡ ದೇವರಾಜ ಠಾಣೆ ಪೊಲೀಸರು ಕೃತ್ಯ ನಡೆದಿರುವ ಸ್ಥಳದ ಅಕ್ಕಪಕ್ಕದಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ, ಇಬ್ಬರನ್ನು ಸೆರೆಹಿಡಿದಿದ್ದರು. ಈ ಆರೋಪಿಗಳು ನಜರ್ ‌ಬಾದ್ ಠಾಣೆ, ನರಸಿಂಹರಾಜ ಠಾಣೆ ಮತ್ತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳನ್ನೂ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

English summary
Mysuru police arrested three persons who were robbing innocent peopole in mysuru. Three bikes worth Rs 1.80 lakh were seized by the police,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X