Get Updates
Get notified of breaking news, exclusive insights, and must-see stories!

ಮೈಸೂರಿನಲ್ಲಿ ವಿಷ್ಣುವರ್ಧನ್‌ ಪ್ರತಿಮೆ ತೆರವುಗೊಳಿಸಿದ ಪೊಲೀಸರು: ಅಭಿಮಾನಿಗಳ ಆಕ್ರೋಶ

ಮೈಸೂರು, ಸೆಪ್ಟೆಂಬರ್ 18: ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಜನ್ಮದಿನದ ಹಿನ್ನೆಲೆಯಲ್ಲಿ ಅರಮನೆ ಬಳಿಯ ಉದ್ಯಾನದಲ್ಲಿ ರಾತ್ರೋರಾತ್ರಿ ಸ್ಥಾಪಿಸಿದ್ದ ನಟ ವಿಷ್ಣುವರ್ಧನ್‌ ಪ್ರತಿಮೆಯನ್ನು ತೆರವುಗೊಳಿಸಿದ ಪೊಲೀಸರ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶನಿವಾರ ನಡೆಯಿತು.

ಮೈಸೂರು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಉದ್ಯಾನದಲ್ಲಿ ಯಾವುದೇ ಅನುಮತಿ ಪಡೆಯದೇ ಅಭಿಮಾನಿಗಳು ವಿಷ್ಣುವರ್ಧನ್‌ ಪ್ರತಿಮೆ ಸ್ಥಾಪಿಸಿದ್ದರು. ಹೀಗಾಗಿ ಅನಧಿಕೃತವಾಗಿ ಇರಿಸಿದ್ದ ಪ್ರತಿಮೆಯನ್ನು ಪೊಲೀಸರು ತೆರವುಗೊಳಿಸಿದರು. ಪ್ರತಿಮೆ ತೆರವುಗೊಳಿಸಿದ್ದಕ್ಕೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

ಅರಮನೆ ಬಳಿ ಇರುವ ವಿಷ್ಣುವರ್ಧನ್ ಉದ್ಯಾನದಲ್ಲಿ ವಿಷ್ಣು ಪ್ರತಿಮೆ ಸ್ಥಾಪಿಸಬೇಕೆಂದು ಕಳೆದ 10-11 ವರ್ಷಗಳಿಂದ ವಿಷ್ಣು ಅಭಿಮಾನಿಗಳು ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುತ್ತಾರೆ ಬಂದಿದ್ದರೂ, ಪಾಲಿಕೆ ಪ್ರತಿಮೆ ಸ್ಥಾಪನೆ ಸಂಬಂಧ ಯಾವ ಕ್ರಮ ಕೈಗೊಳ್ಳದ ಕಾರಣ ಬೇಸತ್ತ ಅಭಿಮಾನಿಗಳು, ಉದ್ಯಾನದಲ್ಲಿ ರಾತ್ರೋರಾತ್ರಿ ವಿಷ್ಣುವರ್ಧನ್‌ ಪ್ರತಿಮೆ ಸ್ಥಾಪಿಸಿದ್ದರು. ಶನಿವಾರ ಬೆಳಗ್ಗೆ ಇಲ್ಲಿಯೇ ಪೂಜೆ ಸೇರಿದಂತೆ ರಕ್ತದಾನ ಶಿಬಿರ ಸೇರಿದಂತೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Police Clearing Actor Vishnuvardhan Statue In Mysuru: Fans Outrage

ಆದರೆ ಸದರಿ ಕಾರ್ಯಕ್ರಮ ಆರಂಭಿಸುವ ಮುನ್ನ ಅಭಿಮಾನಿಗಳು ಇಲ್ಲದ ಸಮಯದಲ್ಲಿ ಸ್ಥಳಕ್ಕಾಗಮಿಸಿದ ಪಾಲಿಕೆ ಅಧಿಕಾರಿಗಳ ನೇತೃತ್ವದಲ್ಲಿ ಅಭಯ ತಂಡ ಪ್ರತಿಮೆ ಸ್ಥಾಪನೆಗೆ ಅನುಮತಿ ಪಡೆದಿಲ್ಲವೆಂದು ಪ್ರತಿಮೆಯ ಬಿಡಿಭಾಗ ಬಿಚ್ಚಿ ಆಟೋದಲ್ಲಿ ತುಂಬಿಕೊಂಡು ಹೊರಟರು. ಪ್ರತಿಮೆ ತೆರವುಗೊಳಿಸುವ ವೇಳೆ ಅಭಿಮಾನಿಗಳು ಅಧಿಕಾರಿಗಳ ಕಾಲಿಗೆ ಬಿದ್ದು ಮನವಿ ಮಾಡಿದರೂ ಯಾವುದೇ ಸ್ಪಂದನೆ ತೋರದೆ ಪ್ರತಿಮೆ ತೆರವುಗೊಳಿಸಿದರು.

ಅಧಿಕಾರಿಗಳ ಈ ನಡೆಯನ್ನು ಖಂಡಿಸಿದ ವಿಷ್ಣುವರ್ಧನ್‌ ಅಭಿಮಾನಿಗಳು ಅಧಿಕಾರಿಗಳ ವಿರುದ್ಧವಾಗಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ವಿಷ್ಣು ಪ್ರತಿಮೆ ಧ್ವಂಸ ಮಾಡಿ ತೆರವುಗೊಳಿಸಲಾಗಿದೆ ಎಂದು ಭಾವೋದ್ವೇಗಗೊಂಡ ಅಭಿಮಾನಿಗಳು ಇದು ವಿಷ್ಣುವಿನ ಕೊಲೆ ಎಂದು ಕಿಡಿಕಾರುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Police Clearing Actor Vishnuvardhan Statue In Mysuru: Fans Outrage

ಕಾನೂನಾತ್ಮಕವಾಗಿ ಪ್ರತಿಮೆ ನಿರ್ಮಾಣ
ಮೈಸೂರಿನಲ್ಲಿ ಅನಧಿಕೃತ ವಿಷ್ಣು ಸ್ಮಾರಕ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಶಾಸಕ ರಾಮದಾಸ್, ಕಾನೂನು ಮೀರಿ ಯಾರೂ ಈ ರೀತಿ ಪ್ರತಿಮೆ ಸ್ಥಾಪಿಸಬಾರದು. ಡಾ. ವಿಷ್ಣುವರ್ಧನ್ ಯಾವತ್ತೂ ಕಾನೂನು ಮೀರಿದವರಲ್ಲ. ಹೀಗಾಗಿ ಅವರ ಪ್ರತಿಮೆ ವಿಚಾರ ವಿವಾದ ಆಗುವುದು ಬೇಡ. ಸುಪ್ರೀಂ ಕೋರ್ಟ್ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಪ್ರತಿಮೆ ನಿರ್ಮಾಣ ಮಾಡುವುದು ತಪ್ಪು ಎಂದಿದೆ. ಈ ಎಲ್ಲಾ ಕಾರಣದಿಂದ ಭವಿಷ್ಯದಲ್ಲಿ ಕಾನೂನಾತ್ಮಕವಾಗಿಯೇ ವಿಷ್ಣುವರ್ಧನ್ ಅವರ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.

Police Clearing Actor Vishnuvardhan Statue In Mysuru: Fans Outrage

ಪ್ರತಿಮೆ ನಿರ್ಮಾಣ ಬಹುವರ್ಷದ ಬೇಡಿಕೆ
ಮೈಸೂರು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಧಾನದ ಎದುರಿನ ಮೈಸೂರು ಮಹಾನಗರ ಪಾಲಿಕೆ ಉದ್ಯಾನವನದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಪ್ರತಿಮೆ ಸ್ಥಾಪಿಸಬೇಕೆಂಬುದು ವಿಷ್ಣು ಅಭಿಮಾನಿಗಳ ಬಹುದಿನದ ಬೇಡಿಕೆಯಾಗಿದೆ. ನಟ ವಿಷ್ಣುವರ್ಧನ್ ಮೂಲತಃ ಮೈಸೂರಿನವರೇ ಆಗಿದ್ದ ಕಾರಣ ಹಾಗೂ ವಿಷ್ಣುವರ್ಧನ್ ಮೈಸೂರಿನಲ್ಲೇ ಮೃತಪಟ್ಟ ಕಾರಣದಿಂದ ಪಾಲಿಕೆಗೆ ಸೇರಿದ ಈ ಪಾರ್ಕ್‌ನಲ್ಲಿ ವಿಷ್ಣುವರ್ಧನ್ ಪ್ರತಿಮೆ ನಿರ್ಮಿಸುವಂತೆ ಅವರ ಅಭಿಮಾನಿಗಳ ಹಲವು ವರ್ಷಗಳ ಬೇಡಿಕೆಯಾಗಿದೆ.

ಈ ಬಗ್ಗೆ ವಿಷ್ಣು ಅಭಿಮಾನಿಗಳು ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿದ್ದರು ಸಹ ಯಾವುದೇ ಪ್ರಯೋಜನ ಆಗಿರಲಿಲ್ಲ. ಈ ಎಲ್ಲಾ ಕಾರಣದಿಂದ ಬೇಸತ್ತ ಅಭಿಮಾನಿಗಳು ಯಾವುದೇ ಅನುಮತಿ ಪಡೆಯದೆ ಪಾಲಿಕೆಗೆ ಸೇರಿದ ಉದ್ಯಾನವನದಲ್ಲಿ ರಾತ್ರೋರಾತ್ರಿ ವಿಷ್ಣುವರ್ಧನ್ ಪ್ರತಿಮೆ ತಂದಿರಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+