ಮೈಸೂರಿನಲ್ಲಿ ವಿಷ್ಣುವರ್ಧನ್ ಪ್ರತಿಮೆ ತೆರವುಗೊಳಿಸಿದ ಪೊಲೀಸರು: ಅಭಿಮಾನಿಗಳ ಆಕ್ರೋಶ
ಮೈಸೂರು, ಸೆಪ್ಟೆಂಬರ್ 18: ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಜನ್ಮದಿನದ ಹಿನ್ನೆಲೆಯಲ್ಲಿ ಅರಮನೆ ಬಳಿಯ ಉದ್ಯಾನದಲ್ಲಿ ರಾತ್ರೋರಾತ್ರಿ ಸ್ಥಾಪಿಸಿದ್ದ ನಟ ವಿಷ್ಣುವರ್ಧನ್ ಪ್ರತಿಮೆಯನ್ನು ತೆರವುಗೊಳಿಸಿದ ಪೊಲೀಸರ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶನಿವಾರ ನಡೆಯಿತು.
ಮೈಸೂರು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಉದ್ಯಾನದಲ್ಲಿ ಯಾವುದೇ ಅನುಮತಿ ಪಡೆಯದೇ ಅಭಿಮಾನಿಗಳು ವಿಷ್ಣುವರ್ಧನ್ ಪ್ರತಿಮೆ ಸ್ಥಾಪಿಸಿದ್ದರು. ಹೀಗಾಗಿ ಅನಧಿಕೃತವಾಗಿ ಇರಿಸಿದ್ದ ಪ್ರತಿಮೆಯನ್ನು ಪೊಲೀಸರು ತೆರವುಗೊಳಿಸಿದರು. ಪ್ರತಿಮೆ ತೆರವುಗೊಳಿಸಿದ್ದಕ್ಕೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.
ಅರಮನೆ ಬಳಿ ಇರುವ ವಿಷ್ಣುವರ್ಧನ್ ಉದ್ಯಾನದಲ್ಲಿ ವಿಷ್ಣು ಪ್ರತಿಮೆ ಸ್ಥಾಪಿಸಬೇಕೆಂದು ಕಳೆದ 10-11 ವರ್ಷಗಳಿಂದ ವಿಷ್ಣು ಅಭಿಮಾನಿಗಳು ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುತ್ತಾರೆ ಬಂದಿದ್ದರೂ, ಪಾಲಿಕೆ ಪ್ರತಿಮೆ ಸ್ಥಾಪನೆ ಸಂಬಂಧ ಯಾವ ಕ್ರಮ ಕೈಗೊಳ್ಳದ ಕಾರಣ ಬೇಸತ್ತ ಅಭಿಮಾನಿಗಳು, ಉದ್ಯಾನದಲ್ಲಿ ರಾತ್ರೋರಾತ್ರಿ ವಿಷ್ಣುವರ್ಧನ್ ಪ್ರತಿಮೆ ಸ್ಥಾಪಿಸಿದ್ದರು. ಶನಿವಾರ ಬೆಳಗ್ಗೆ ಇಲ್ಲಿಯೇ ಪೂಜೆ ಸೇರಿದಂತೆ ರಕ್ತದಾನ ಶಿಬಿರ ಸೇರಿದಂತೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಆದರೆ ಸದರಿ ಕಾರ್ಯಕ್ರಮ ಆರಂಭಿಸುವ ಮುನ್ನ ಅಭಿಮಾನಿಗಳು ಇಲ್ಲದ ಸಮಯದಲ್ಲಿ ಸ್ಥಳಕ್ಕಾಗಮಿಸಿದ ಪಾಲಿಕೆ ಅಧಿಕಾರಿಗಳ ನೇತೃತ್ವದಲ್ಲಿ ಅಭಯ ತಂಡ ಪ್ರತಿಮೆ ಸ್ಥಾಪನೆಗೆ ಅನುಮತಿ ಪಡೆದಿಲ್ಲವೆಂದು ಪ್ರತಿಮೆಯ ಬಿಡಿಭಾಗ ಬಿಚ್ಚಿ ಆಟೋದಲ್ಲಿ ತುಂಬಿಕೊಂಡು ಹೊರಟರು. ಪ್ರತಿಮೆ ತೆರವುಗೊಳಿಸುವ ವೇಳೆ ಅಭಿಮಾನಿಗಳು ಅಧಿಕಾರಿಗಳ ಕಾಲಿಗೆ ಬಿದ್ದು ಮನವಿ ಮಾಡಿದರೂ ಯಾವುದೇ ಸ್ಪಂದನೆ ತೋರದೆ ಪ್ರತಿಮೆ ತೆರವುಗೊಳಿಸಿದರು.
ಅಧಿಕಾರಿಗಳ ಈ ನಡೆಯನ್ನು ಖಂಡಿಸಿದ ವಿಷ್ಣುವರ್ಧನ್ ಅಭಿಮಾನಿಗಳು ಅಧಿಕಾರಿಗಳ ವಿರುದ್ಧವಾಗಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ವಿಷ್ಣು ಪ್ರತಿಮೆ ಧ್ವಂಸ ಮಾಡಿ ತೆರವುಗೊಳಿಸಲಾಗಿದೆ ಎಂದು ಭಾವೋದ್ವೇಗಗೊಂಡ ಅಭಿಮಾನಿಗಳು ಇದು ವಿಷ್ಣುವಿನ ಕೊಲೆ ಎಂದು ಕಿಡಿಕಾರುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕಾನೂನಾತ್ಮಕವಾಗಿ ಪ್ರತಿಮೆ ನಿರ್ಮಾಣ
ಮೈಸೂರಿನಲ್ಲಿ ಅನಧಿಕೃತ ವಿಷ್ಣು ಸ್ಮಾರಕ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಶಾಸಕ ರಾಮದಾಸ್, ಕಾನೂನು ಮೀರಿ ಯಾರೂ ಈ ರೀತಿ ಪ್ರತಿಮೆ ಸ್ಥಾಪಿಸಬಾರದು. ಡಾ. ವಿಷ್ಣುವರ್ಧನ್ ಯಾವತ್ತೂ ಕಾನೂನು ಮೀರಿದವರಲ್ಲ. ಹೀಗಾಗಿ ಅವರ ಪ್ರತಿಮೆ ವಿಚಾರ ವಿವಾದ ಆಗುವುದು ಬೇಡ. ಸುಪ್ರೀಂ ಕೋರ್ಟ್ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಪ್ರತಿಮೆ ನಿರ್ಮಾಣ ಮಾಡುವುದು ತಪ್ಪು ಎಂದಿದೆ. ಈ ಎಲ್ಲಾ ಕಾರಣದಿಂದ ಭವಿಷ್ಯದಲ್ಲಿ ಕಾನೂನಾತ್ಮಕವಾಗಿಯೇ ವಿಷ್ಣುವರ್ಧನ್ ಅವರ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.

ಪ್ರತಿಮೆ ನಿರ್ಮಾಣ ಬಹುವರ್ಷದ ಬೇಡಿಕೆ
ಮೈಸೂರು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಧಾನದ ಎದುರಿನ ಮೈಸೂರು ಮಹಾನಗರ ಪಾಲಿಕೆ ಉದ್ಯಾನವನದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಪ್ರತಿಮೆ ಸ್ಥಾಪಿಸಬೇಕೆಂಬುದು ವಿಷ್ಣು ಅಭಿಮಾನಿಗಳ ಬಹುದಿನದ ಬೇಡಿಕೆಯಾಗಿದೆ. ನಟ ವಿಷ್ಣುವರ್ಧನ್ ಮೂಲತಃ ಮೈಸೂರಿನವರೇ ಆಗಿದ್ದ ಕಾರಣ ಹಾಗೂ ವಿಷ್ಣುವರ್ಧನ್ ಮೈಸೂರಿನಲ್ಲೇ ಮೃತಪಟ್ಟ ಕಾರಣದಿಂದ ಪಾಲಿಕೆಗೆ ಸೇರಿದ ಈ ಪಾರ್ಕ್ನಲ್ಲಿ ವಿಷ್ಣುವರ್ಧನ್ ಪ್ರತಿಮೆ ನಿರ್ಮಿಸುವಂತೆ ಅವರ ಅಭಿಮಾನಿಗಳ ಹಲವು ವರ್ಷಗಳ ಬೇಡಿಕೆಯಾಗಿದೆ.
ಈ ಬಗ್ಗೆ ವಿಷ್ಣು ಅಭಿಮಾನಿಗಳು ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿದ್ದರು ಸಹ ಯಾವುದೇ ಪ್ರಯೋಜನ ಆಗಿರಲಿಲ್ಲ. ಈ ಎಲ್ಲಾ ಕಾರಣದಿಂದ ಬೇಸತ್ತ ಅಭಿಮಾನಿಗಳು ಯಾವುದೇ ಅನುಮತಿ ಪಡೆಯದೆ ಪಾಲಿಕೆಗೆ ಸೇರಿದ ಉದ್ಯಾನವನದಲ್ಲಿ ರಾತ್ರೋರಾತ್ರಿ ವಿಷ್ಣುವರ್ಧನ್ ಪ್ರತಿಮೆ ತಂದಿರಿಸಿದ್ದರು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications