ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂತ್ರಸ್ತರ ಹೆಸರಿನಲ್ಲಿ ಅನಧಿಕೃತವಾಗಿ ಹಣ ವಸೂಲಿ ಮಾಡಿದರೆ ಹುಷಾರ್ !

|
Google Oneindia Kannada News

ಮೈಸೂರು, ಆಗಸ್ಟ್ 13 : ಉತ್ತರ ಕರ್ನಾಟಕ ಹಾಗೂ ಕೊಡಗು ಜಿಲ್ಲೆಗಳ ನೆರೆ ಸಂತ್ರಸ್ತರಿಗಾಗಿ ಯಾವುದೇ ಅನಧಿಕೃತ ವ್ಯಕ್ತಿಗಳಿಗೆ ಹಣ ಅಥವಾ ಸಾಮಗ್ರಿಗಳನ್ನು ನೀಡಬಾರದೆಂದು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ರಾಷ್ಟ್ರೀಯ ವಿಪತ್ತು': ಘೋಷಣೆ ಯಾಕೆ? ಕರ್ನಾಟಕಕ್ಕೆ ಏನು ಲಾಭ?ರಾಷ್ಟ್ರೀಯ ವಿಪತ್ತು': ಘೋಷಣೆ ಯಾಕೆ? ಕರ್ನಾಟಕಕ್ಕೆ ಏನು ಲಾಭ?

ಸಂತ್ರಸ್ತರ ನೆರವಿಗಾಗಿ ಹಲವು ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ವಿವಿಧ ಸಾಮಗ್ರಿಗಳು ಹಾಗೂ ಹಣ ಸಂಗ್ರಹಿಸಲಾಗುತ್ತಿದೆ. ಆದರೆ ಕೆಲವು ಅನಧಿಕೃತ ವ್ಯಕ್ತಿಗಳೂ ದೇಣಿಗೆ ಹಣ ಸಂಗ್ರಹಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸಹಾಯ ಮಾಡಬಯಸುವವರು ನೇರ ಮುಖ್ಯಮಂತ್ರಿಗಳ ನಿಧಿಗೆ ವರ್ಗಾವಣೆ ಮಾಡಿ ಎಂದು ಕೋರಿದ್ದಾರೆ.

Police Commissioner gives warning who will collect money in the name of flood
ಮೈಸೂರಿನ ಪುರಭವನದಲ್ಲಿ ತೆರೆಯಲಾಗಿರುವ ಜಿಲ್ಲಾಡಳಿತ ಕೇಂದ್ರಕ್ಕೆ ಅಗತ್ಯ ಸಾಮಗ್ರಿಗಳನ್ನು ನೀಡಿ ರಶೀದಿ ಪಡೆಯುವಂತೆ ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.

ಅನಧಿಕೃತವಾಗಿ ದೇಣಿಗೆ ಹಣ ಮತ್ತು ಸಾಮಗ್ರಿ ಸಂಗ್ರಹಿಸಿ ದುರ್ಬಳಕೆ ಮಾಡುವುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಂತಹ ವ್ಯಕ್ತಿಗಳು ಹಣ ಸಂಗ್ರಹಣೆ ಮಾಡುತ್ತಿದ್ದಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ನಗರ ಪೊಲೀಸ್ ಕಂಟ್ರೋಲ್ ರೂಂಗೆ ದೂರು ನೀಡುವಂತೆಯೂ ತಿಳಿಸಿದ್ದಾರೆ.

English summary
Mysuru City police Commissioner K T Balakrishna has advised the public not to give money or ammunition for unauthorized people in name of Flood.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X