ಮೈಸೂರಿನಲ್ಲಿ ವರದಕ್ಷಿಣೆ ಸಾವು: ಆರೋಪಿ ಪೊಲೀಸ್ ಕಾನ್ಸ್ ಟೆಬಲ್ ಪರಾರಿ
ಮೈಸೂರು, ಜೂನ್ 1: ರಕ್ಷಣೆ ನೀಡುವುದು ಮತ್ತು ಕಾನೂನನ್ನು ಪಾಲಿಸಬೇಕಾದ ಪೊಲೀಸ್ ಕಾನ್ಸ್ ಟೆಬಲ್ ಒಬ್ಬಾತ ಕಾನೂನು ಉಲ್ಲಂಘನೆ ಮಾಡಿದ ಪ್ರಕರಣವೊಂದು ವರದಿಯಾಗಿದೆ. ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ, ಕೊಲೆ ಮಾಡಿರುವ ಆರೋಪ ಇದೀಗ ಕೆ.ಆರ್ ನಗರದ ಡಿಎಆರ್ ಪೊಲೀಸ್ ಕಾನ್ಸ್ ಟೆಬಲ್ ಮೇಲೆ ಬಂದಿದೆ.
Recommended Video
ಪಿರಿಯಾಪಟ್ಟಣ ತಾಲ್ಲೂಕಿನ ತಮ್ಮಡಹಳ್ಳಿ ಗ್ರಾಮದ ಭಾರತಿ ಹಾಗೂ ಕೆ.ಆರ್ ನಗರ ತಾಲ್ಲೂಕಿನ ಹೆಬ್ಬಾಳು ಗ್ರಾಮದ ಶ್ರೀಧರ್ ಜೋಡಿಯ ಮದುವೆ 6 ವರ್ಷಗಳ ಹಿಂದೆ ನೆರವೇರಿತ್ತು. ಮದುವೆಯಾದ 4 ವರ್ಷ ಚೆನ್ನಾಗಿದ್ದ ಕಾನ್ಸ್ ಟೆಬಲ್ ಶ್ರೀಧರ್ ಹಾಗೂ ಆತನ ಪೋಷಕರು ನಂತರ ತಮ್ಮ ಮಗಳು ಭಾರತಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಭಾರತಿಯ ಪೋಷಕರು ಆರೋಪಿಸಿದ್ದಾರೆ.

ಆತ್ಮಹತ್ಯೆ ಅಲ್ಲ ಇದೊಂದು ಕೊಲೆ ಎಂದು ಭಾರತಿ ಪೋಷಕರು
ನಿವೇಶನ ಕೊಡಿಸುವಂತೆ ಪತಿರಾಯ ಶ್ರೀಧರ್ (32) ಹಾಗೂ ತಂದೆ ಶಂಕರ್, ತಾಯಿ ನಿಂಗಾಜಮ್ಮ ಸಿಕ್ಕಾಪಟ್ಟೆ ಕಿರುಕುಳ ಕೊಟ್ಟಿದ್ದರು ಎನ್ನಲಾಗಿದೆ. ಗಂಡನ ಮನೆಯ ಕಿರುಕುಳಕ್ಕೆ ಬೇಸತ್ತ ಭಾರತಿ, ಸೀಮೆಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಮ್ಮ ಮಗಳ ಸಾವು ಆತ್ಮಹತ್ಯೆ ಅಲ್ಲ ಇದೊಂದು ಕೊಲೆ ಎಂದು ಮೃತ ಭಾರತಿ ಪೋಷಕರು ದೂರು ನೀಡಿದ್ದಾರೆ.

ನಿವೇಶನ ಖರೀದಿಸಿ ಕೊಡಬೇಕೆಂದು ಪೀಡಿಸುತ್ತಿದ್ದ
ಮದುವೆ ಸಮಯದಲ್ಲಿ 200 ಗ್ರಾಂ ಚಿನ್ನ, 2 ಲಕ್ಷ ನಗದು ಹಾಗೂ ಒಂದು ಬೈಕ್ ವರದಕ್ಷಿಣೆಯಾಗಿ ನೀಡಲಾಗಿತ್ತು. ಪ್ರಾರಂಭದಲ್ಲಿ ಅನ್ಯೋನ್ಯ ದಾಂಪತ್ಯ ಜೀವನ ಸಾಗಿಸಿದ್ದ ದಂಪತಿಗೆ ಗಂಡು ಮಗುವಾಗಿತ್ತು.
ಎರಡು ವರ್ಷಗಳಿಂದ ಪತಿ ಶ್ರೀಧರ್ ನಡವಳಿಕೆಯಲ್ಲಿ ಬದಲಾವಣೆ ಆಗಿದೆ. ನಿನ್ನ ತವರು ಮನೆಯವರಿಗೆ ಹೇಳಿ ನನಗೆ ಮನೆ ನಿವೇಶನ ಖರೀದಿಸಿ ಕೊಡಬೇಕೆಂದು ಪೀಡಿಸುತ್ತಿದ್ದ.

ಗಂಡನ ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಭಾರತಿ ಪತ್ತೆ
ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಸೈಟ್ ಕೊಡದೇ ಹೋದರೆ ಬೇರೆ ಮದುವೆ ಆಗುವುದಾಗಿ ಬೆದರಿಕೆ ಹಾಕಿದ್ದ ಶ್ರೀಧರ್, ಪತ್ನಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದ. ಕಳೆದ ಮೇ 25 ರಂದು ಕೆ.ಆರ್ ನಗರದ ಗಂಡನ ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಭಾರತಿ ಪತ್ತೆಯಾಗಿದ್ದಳು.

ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಭಾರತಿ ಸಾವು
ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದ ಭಾರತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಭಾರತಿ ಸಾವನ್ನಪ್ಪಿದ್ದಾರೆ. ಭಾರತಿ ಸಾವಿಗೆ ಪತಿ ಶ್ರಿಧರ್, ಮಾವ ಶಂಕರ್, ಅತ್ತೆ ನಿಂಗಾಜಮ್ಮ ಕಾರಣ ಎಂದು ಪೋಷಕರು ಆರೋಪ ಮಾಡಿದ್ದಾರೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಕೆ.ಆರ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications