ಪೊಲೀಸ್ ಪೇದೆಗಳಿಗೆ ಮದುವೆ ಮಾಡಿಸಿದ ಮೈಸೂರಿನ ಒಡನಾಡಿ ಸಂಸ್ಥೆ
ಮೈಸೂರು, ಫೆಬ್ರವರಿ 12: ಪ್ರೇಮಿಗಳ ದಿನಾಚರಣೆಗೆ ಎರಡು ದಿನ ಇರುವಾಗಲೇ ನಗರದ ಒಡನಾಡಿ ಸಂಸ್ಥೆಯು ಪ್ರೇಮಿಗಳ ವಿವಾಹಕ್ಕೆ ವೇದಿಕೆ ಕಲ್ಪಿಸಿದೆ. ಹೌದು, ಬೇರೆ ಬೇರೆ ಜಾತಿಗೆ ಸೇರಿದ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ತಿ.ನರಸೀಪುರ ಸಿದ್ದರಾಮಯ್ಯನ ಹುಂಡಿ ಗ್ರಾಮದ ಎಂ.ಸಿದ್ಧರಾಜು ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಾತನಹಳ್ಳಿಯ ಟಿ.ಜಿ.ಶ್ವೇತರಾಣಿ ಬೆಂಗಳೂರಿನ ವಿವೇಕಾನಂದನಗರ ಠಾಣೆಯಲ್ಲಿ ಕಾನ್ಸ್ಟೇಬಲ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮೂರು ವರ್ಷಗಳ ಹಿಂದೆ ಇವರಿಬ್ಬರ ಮಧ್ಯೆ ಪ್ರೀತಿ ಚಿಗುರೊಡೆದಿತ್ತು. ಆದರೆ, ಶ್ವೇತರಾಣಿ ಪೋಷಕರು ವಿವಾಹಕ್ಕೆ ಒಪ್ಪದೆ, ಇದೇ ತಿಂಗಳು ಬೇರೊಬ್ಬ ಯುವಕನ ಜತೆ ಮದುವೆಗೆ ನಿಶ್ಚಯಿಸಿದ್ದರು.

ಆದರೆ ಈಗ ಇವರಿಬ್ಬರೂ ನಾಡಿ ಸಂಸ್ಥೆಯಲ್ಲಿ ಕೊಳ್ಳೇಗಾಲದ ಬೌದ್ಧಿಪೀಠದ ಬಂತೇಜಿ ರತ್ನ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ನಾವಿಬ್ಬರೂ ಸರಳವಾಗಿ ಇದ್ದೆವು. ಹೀಗಾಗಿ ಇಬ್ಬರು ಪರಸ್ಪರ ಇಷ್ಟಪಟ್ಟಿದ್ದು, ಸರಳವಾಗಿ ಮದುವೆಯಾಗಿದ್ದೇವೆ ಎಂದು ವರ ಸಿದ್ದರಾಜು ಸಂತಸದಿಂದ ಹೇಳಿದರು.

ಇದೊಂದು ಮಾನವೀಯ ಮದುವೆಯಾಗಿದೆ. ಮದುವೆಗೆ ಯಾವುದೇ ಜಾತಿ ಮುಖ್ಯವಲ್ಲ, ಬದಲಿಗೆ ಪ್ರೀತಿ ಮುಖ್ಯ. ಆದರೆ ಇನ್ನೂ ಈ ಸಮಾಜದಲ್ಲಿ ಜಾತಿ ವಿಚಾರ ಇರುವುದನ್ನು ಕಂಡು ಬೇಸರವಾಗುತ್ತದೆ. ನಾವು ನೂರಾರು ಜೋಡಿಯ ಮದುವೆಯನ್ನು ಮಾಡಿಸಿದ್ದೇವೆ ಎಂದು ಒಡನಾಡಿ ಸಂಸ್ಥೆ ಸಂಚಾಲಕ ಸ್ಟ್ಯಾನ್ಲಿ ನವ ವಧು ವರರಿಗೆ ಶುಭ ಕಾಮನೆ ತಿಳಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications