ಪೊಲೀಸರ ತಪಾಸಣೆ: ಉತ್ತರ ಭಾರತ ಕಾರ್ಮಿಕರ ಪರದಾಟ
ಕೊಡಗು, ಜನವರಿ 27: ಕೊಡಗು ಹಚ್ಚ ಹಸಿರಿನ ಕಾಫಿ ತೋಟಗಳನ್ನು ಹೊಂದಿರುವ ಚಿಕ್ಕ ಜಿಲ್ಲೆಯಾಗಿದ್ದು, ಇಲ್ಲಿನ ಕಾಫಿ ತೋಟಗಳಲ್ಲಿ ವರ್ಷವಿಡೀ ಕೆಲಸ ಇದ್ದೇ ಇರುತ್ತದೆ. ಕಾಫಿ ಕೃಷಿಯು ಅಪಾರ ಮಾನವ ಶ್ರಮವನ್ನು ಬೇಡುವ ಕೃಷಿ ಅಗಿದೆ. ಇಲ್ಲಿ ಯಾವಾಗಲೂ ಕಾರ್ಮಿಕರ ಕೊರತೆ ಇದ್ದೇ ಇರುತ್ತದೆ.
ಕಾಫಿ ಕೊಯ್ಲಿನ ಸಂದರ್ಭಗಳಲ್ಲಿ ಈ ಕೊರತೆ ತೀವ್ರವಾಗಿರುತ್ತದೆ. ಈ ಕೊರತೆಯನ್ನು ನೀಗಿಸಲೆಂದೇ ಮೊದಲು ಉತ್ತರ ಕರ್ನಟಕ ಭಾಗದಿಂದ ಕಾರ್ಮಿಕರನ್ನು ಕರೆಸಲಾಗುತಿತ್ತು. ವರ್ಷದ ನವೆಂಬರ್ ತಿಂಗಳಿನಲ್ಲಿ ಇಲ್ಲಿಗೆ ಬರುತಿದ್ದ ಕಾರ್ಮಿಕರು ಫೆಬ್ರುವರಿ, ಮಾರ್ಚ್ ತಿಂಗಳಿನವರೆಗೆ ತೋಟಗಳ ಮಾಲೀಕರು ನೀಡುವ ತೋಟದ ಮನೆಗಳಲ್ಲಿ ಇದ್ದು ಕೊಯ್ಲು ಮುಗಿಸಿ ತಮ್ಮ ಊರುಗಳಿಗೆ ಹಿಂತಿರುಗುತಿದ್ದರು.
ಕಳೆದೆರಡು ದಶಕಗಳಿಂದ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ, ಬೆಳೆ ಚೆನ್ನಾಗಿ ಆಗುತ್ತಿರುವುದರಿಂದ ಕಾರ್ಮಿಕರ ವಲಸೆ ಕಡಿಮೆ ಆಯಿತು. ಬೆಂಗಳೂರಿನಲ್ಲಿ ಕಟ್ಟಡ ಕಾರ್ಮಿಕರ ಕೊರತೆಯಿಂದ ಅಲ್ಲಿ ಕೊಡಗಿಗಿಂತ ಹೆಚ್ಚು ದಿನಗೂಲಿ ಸಿಗುವುದರಿಂದ ಉತ್ತರ ಕರ್ನಟಕ ಭಾಗದ ಜನರು ಬೆಂಗಳೂರಿಗೆ ವಲಸೆ ಹೋದರು. ಆಗ ಶುರುವಾದದ್ದೇ ಹಿಂದಿ ,ಅಸ್ಸಾಮಿ, ಬೋಜ್ ಪುರಿ ಮಾತನಾಡುವ ಉತ್ತರ ಭಾರತ ಕಾರ್ಮಿಕರ ವಲಸೆ.

ಉತ್ತರ ಭಾರತ ಕಾರ್ಮಿಕರ ವಿರುದ್ಧ ಸ್ಥಳೀಯರ ವಿರೋಧ
ಇವರು ವರ್ಷದಲ್ಲಿ ಒಂದೆರಡು ತಿಂಗಳು ಮಾತ್ರ ತಮ್ಮ ಊರಿಗೆ ತೆರಳುತ್ತಾರೆ ಮತ್ತು ವರ್ಷವಿಡೀ ತೋಟಗಳಲೇ ದುಡಿಯುತ್ತಾರೆ. ಇವರನ್ನು ಇಲ್ಲಿಗೆ ಕರೆತರಲು ಇಲ್ಲಿಯವರೇ ಆಗಿರುವ ದಲ್ಲಾಲಿಗಳು ಉತ್ತರ ಭಾರತದ ದಲ್ಲಾಳಿಗಳೊಂದಿಗೆ ಸಂಪರ್ಕವನ್ನೂ ಹೊಂದಿದ್ದಾರೆ.
ಆದರೆ ಇತ್ತೀಚೆಗೆ ಕೊಡಗಿನಲ್ಲಿ ಉತ್ತರ ಭಾರತದ ಕಾರ್ಮಿಕರಿಂದ ಹೆಚ್ಚು ಅಪರಾಧ ಕೃತ್ಯಗಳು ನಡೆದಿರುವ ಹಿನ್ನೆಲೆಯಲ್ಲಿ ಸ್ಥಳೀಯ ಕಾರ್ಮಿಕರೂ ಇವರ ವಿರುದ್ದ ಅಸಮಾಧಾನಗೊಂಡಿದ್ದರು. ಏಕೆಂದರೆ ಇವರು ಸ್ಥಳೀಯ ಕಾರ್ಮಿಕರಿಗಿಂತಲೂ ಕಡಿಮೆ ಕೂಲಿಗೆ ಕೆಲಸ ಮಾಡುತಿದ್ದರು. ಇದಲ್ಲದೇ ಕಳೆದ ವರ್ಷ ಸಿದ್ದಾಪುರ ಸಮೀಪದ ಕಾಫಿ ತೋಟವೊಂದರಲ್ಲಿ ಸ್ಥಳಿಯ ಕಾರ್ಮಿಕ ಕುಟುಂಬವೊಂದರ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು.

ಉಗ್ರ ಚಟುವಟಿಕೆ ಹಿನ್ನೆಲೆಯಲ್ಲಿ ಪೊಲೀಸ್ ತಪಾಸಣೆ
ಈ ಹತ್ಯೆಯ ಅರೋಪಿಗಳು ಉತ್ತರ ಭಾರತದ ವಲಸೆ ಕಾರ್ಮಿಕರಾಗಿದ್ದು, ಕೂಡಲೇ ಪೋಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದರು. ಇದು ಸಿದ್ದಾಪುರದಲ್ಲಿ ನಡೆದ ದೊಡ್ಡ ಮಟ್ಟದ ಪ್ರತಿಭಟನೆಗೂ ಕಾರಣವಾಗಿತ್ತು. ಇದಕ್ಕೂ ಮುನ್ನವೇ ಪೋಲೀಸ್ ಇಲಾಖೆ ಉತ್ತರ ಭಾರತದಿಂದ ವಲಸೆ ಬಂದಿರುವ ಕಾರ್ಮಿಕರ ಗುರುತನ್ನು, ಆಯಾ ವ್ಯಾಪ್ತಿಯ ಪೋಲೀಸ್ ಠಾಣೆಗಳಲ್ಲಿ ತೋಟಗಳ ಮಾಲೀಕರು ನೀಡಬೇಕೆಂದೂ, ಠಾಣೆಗಳಲ್ಲಿ ಠಾಣಾಧಿಕಾರಿಗಳು ರಿಜಿಸ್ಟರ್ ನಿರ್ವಹಣೆ ಮಾಡಬೇಕೆಂದೂ ಸುತ್ತೋಲೆ ಹೊರಡಿಸಿತ್ತು.
ಆದರೆ ತೋಟಗಳ ಮಾಲೀಕರು ಸರಿಯಾದ ಮಾಹಿತಿ ನೀಡಿರಲಿಲ್ಲ. ಇತ್ತೀಚೆಗೆ ಬೆಂಗಳೂರಿನಲ್ಲಿ ಬಂಧಿತರಾದ ಶಂಕಿತ ಉಗ್ರರು ನೀಡಿರುವ ಸುಳಿವಿನ ಮೇರೆಗೆ ಗೋಣಿಕೊಪ್ಪ ಸಮೀಪದ ಅರಣ್ಯದಲ್ಲಿ ಉಗ್ರ ಚಟುವಟಿಕೆ ಮತ್ತು ತರಬೇತಿ ನಡೆಸಲು ಯೋಜನೆ ರೂಪಿಸಲಾಗಿತ್ತು ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಪೋಲೀಸರೇ ತೋಟಗಳ ಮಾಲೀಕರಿಗೆ ಮೌಕಿಕ ಸೂಚನೆ ನೀಡಿ ಉತ್ತರ ಭಾರತದ ಕಾರ್ಮಿಕರ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಸಂಪೂರ್ಣ ದಾಖಲಾತಿ ತರುವಂತೆ ಪೊಲೀಸರ ನಿರ್ದೇಶನ
ಈ ದಿಢೀರ್ ಬೆಳವಣಿಗೆಯಿಂದ ಅನೇಕ ಬೆಳೆಗಾರರು ಗಲಿಬಿಲಿಗೆ ಒಳಗಾದರೆ, ಕಾರ್ಮಿಕ ವರ್ಗ ದಾಖಲಾತಿಗಾಗಿ ಹೆಣಗಾಡುತ್ತಿದ್ದ ದೃಶ್ಯ ಗೋಚರಿಸಿತು. ಇಂದು ಜಿಲ್ಲೆಯ ಮೂರು ಪೊಲೀಸ್ ಉಪವಿಭಾಗಗಳ ವ್ಯಾಪ್ತಿಯ ತೋಟದ ಕಾರ್ಮಿಕರನ್ನು ಸಂಬಂಧಿಸಿದ ಮಾಲೀಕರು ಪೊಲೀಸರ ಮುಂದೆ "ಪೆರೇಡ್' ನಡೆಸಬೇಕಾಯಿತು.
ಅಲ್ಲದೆ ತಮ್ಮ ತೋಟಗಳಲ್ಲಿ ನೆಲೆಸಿರುವ ಕಾರ್ಮಿಕ ಕುಟುಂಬಗಳ ಸಂಪೂರ್ಣ ವಿವರಗಳೊಂದಿಗೆ ದಾಖಲಾತಿ ಪ್ರದರ್ಶಿಸಬೇಕಾಯಿತು. ತೋಟದ ಮಾಲೀಕರು ಹಾಗೂ ಇಂತಹ ಕಾರ್ಮಿಕರನ್ನು ಕೊಡಗಿನಲ್ಲಿ ನೋಡಿಕೊಳ್ಳುತ್ತಿರುವ ಮಧ್ಯವರ್ತಿಗಳು ಸಾಕಷ್ಟು ಕಾರು, ಪಿಕಪ್ ವಾಹನ, ಲಾರಿಗಳಲ್ಲಿ ತುಂಬಿಸಿಕೊಂಡು ಬಂದು, ತಪಾಸಣಾ ಕೇಂದ್ರದಲ್ಲಿ ಇಳಿಸುತ್ತಿದ್ದ ಚಿತ್ರಣ ಕಂಡುಬಂತು.

ಸಿಎಎಯೊಂದಿಗೆ ತಳುಕು ಹಾಕಬೇಡಿ ಎಂದ ಕೊಡಗು ಎಸ್ಪಿ
ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು ಹೆಚ್ಚಾಗಿ ನೆಲೆಸಿರುವುದು ವೀರಾಜಪೇಟೆ ಹಾಗೂ ಮಡಿಕೇರಿ ತಾಲ್ಲೂಕಿನಲ್ಲಿ ಮಾತ್ರ. ಎರಡೂ ತಾಲ್ಲೂಕುಗಳಲ್ಲಿ ಅಂದಾಜು 10,000 ಕ್ಕೂ ಅಧಿಕ ಕಾರ್ಮಿಕರು ನೆಲೆಸಿರಬಹುದೆಂದು ಅಂದಾಜಿಸಲಾಗಿದೆ. ಪೋಲೀಸರ ತಪಾಸಣೆ ಜಿಲ್ಲೆಯಲ್ಲಿ ಒಂದಷ್ಟು ಆತಂಕವನ್ನೂ ಸೃಷ್ಟಿಸಿದೆ. ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ದೇಶದಾದ್ಯಂತ ಬಹು ಚರ್ಚಿತವಾಗುತ್ತಿದ್ದು, ತೋಟ ಕಾರ್ಮಿಕರು ಇದನ್ನೂ ಕೂಡ ಎನ್ಆರ್ಸಿ ಎಂದೇ ಭಾವಿಸಿದ್ದಾರೆ. ಅಲ್ಲದೇ ದಾಖಲಾತಿಗಳು ಇಲ್ಲದವರು ಪೋಲೀಸ್ ವಶದಲ್ಲಿ ಇರಬೇಕಾಗುತ್ತದೆ ಎಂಬ ವದಂತಿಗಳೂ ಹರಿದಾಡುತ್ತಿವೆ.
ಆದರೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ ಅವರು ""ಕೊಡಗಿನ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದ ಜಿಲ್ಲೆಯಲ್ಲಿ ನೆಲೆಸಿರುವ ಹೊರರಾಜ್ಯಗಳ ಕಾರ್ಮಿಕರ ಗುರುತಿನ ಚೀಟಿ ಪರಿಶೀಲನಾ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ವತಿಯಿಂದ ಮೂರು ತಾಲ್ಲೂಕುಗಳಲ್ಲಿ ನಡೆಸಲಾಗಿದೆ. ಈ ಕಾರ್ಯಕ್ರಮವನ್ನು ಸಿಎಎ ಅಥವಾ ಎನ್ಆರ್ಸಿಯೊಂದಿಗೆ ತಳುಕು ಹಾಕಿ ಅಪಪ್ರಚಾರ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ'' ಎಂದು ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ತಪಾಸಣೆಗೆ ಕೆಲವರ ವಿರೋಧ
ಪತ್ರಕರ್ತರೊಂದಿಗೆ ಮಾತನಾಡಿದ ಎಸ್ಪಿ ಸುಮನ್ ಪನ್ನೇಕರ್, ಸುಮಾರು 5 ಸಾವಿರ ಕಾರ್ಮಿಕರು ಸರಿಯಾದ ದಾಖಲೆಗಳನ್ನು ನೀಡಿದ್ದಾರೆ, ಅಂದಾಜು 500 ಮಂದಿ ಅಪೂರ್ಣ ದಾಖಲೆ ಹೊಂದಿರುವ ಕಾರ್ಮಿಕರಿದ್ದು, ಇವರಿಗೆ ಮುಂದಿನ ಒಂದು ವಾರದ ಒಳಗೆ ದಾಖಲೆಯನ್ನು ಹಾಜರುಪಡಿಸುವಂತೆ ತಿಳಸಲಾಗಿದೆ ಎಂದರು. ಜಿಲ್ಲೆಯಲ್ಲಿ ಹೊರರಾಜ್ಯದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ಅವಲೋಕಿಸಿ ಜನರಲ್ಲಿ ಮೂಡಿರುವ ಆತಂಕವನ್ನು ದೂರಮಾಡಲು ಕಾರ್ಮಿಕರಿಂದ ಮಾಹಿತಿ ಪಡೆಯಲಾಗಿದೆಯಷ್ಟೇ ಎಂದು ಸ್ಪಷ್ಟಪಡಿಸಿದರು.
ಈ ತಪಾಸಣೆ ಕುರಿತು ಕೊಡಗು ಪ್ರಗತಿಪರ ಜನಾಂದೋಲನ ವೇದಿಕೆಯ ಸಂಚಾಲಕ ವಿ.ಪಿ.ಶಶಿಧರ್ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಯಾರ ಅಣತಿಯ ಮೇರೆಗೆ ಪೋಲೀಸರು ದಿಢೀರ್ ತಪಾಸಣೆ ನಡೆಸುತಿದ್ದಾರೋ ಗೊತ್ತಿಲ್ಲ. ಅದರೆ ಎಲ್ಲ ಹಿಂದಿ ಮಾತನಾಡುವ ಕಾರ್ಮಿಕರನ್ನು ಬಾಂಗ್ಲಾ ದೇಶದವರೆಂದು ಸಂಶಯಪಡುವುದು ಸರಿಯಲ್ಲ ಎಂದರು. ಒಟ್ಟಿನಲ್ಲಿ ಜಿಲ್ಲೆಯ ಪೋಲೀಸ್ ಇಲಾಖೆ ಕೈಗೊಂಡಿರುವ ತಪಾಸಣೆ ಉತ್ತರ ಭಾರತದ ಕಾರ್ಮಿಕರಲ್ಲಿ ಅತಂಕ ಸೃಷ್ಟಿಸಿರುವುದು ಸುಳ್ಳಲ್ಲ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications