ನಿಧಿಗಾಗಿ ಬಾಲಕನ ಬಲಿ ನೀಡಲು ಮುಂದಾದವರ ವಿಚಾರಣೆ ರಹಸ್ಯ ಸ್ಥಳದಲ್ಲಿ
ಮೈಸೂರು, ನವೆಂಬರ್ 11 : ನಿಧಿ ಆಸೆಗಾಗಿ ಜಮೀನಿನಲ್ಲಿ 11 ವರ್ಷದ ಬಾಲಕನನ್ನು ಬಲಿ ಕೊಡಲು ಮುಂದಾದ ಘಟನೆ ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ನಂಜನಗೂಡು ತಾಲೂಕಿನ ನೇರಳೆ ಮತ್ತು ಹೆಮ್ಮರಗಾಲದ ಮುಖ್ಯ ರಸ್ತೆಯಲ್ಲಿರುವ ಶಿವಪ್ಪ ಎಂಬುವರ ಜಮೀನಿನಲ್ಲಿ ಘಟನೆ ನಡೆದಿದ್ದು, ಮಾಲೀಕನ ಪುತ್ರ ಸುಧೀಂದ್ರ ನಿಧಿಯಾಸೆಗೆ ಇಂತಹ ಕೃತ್ಯಕ್ಕೆ ಮುಂದಾಗಿದ್ದ.
ತನ್ನ ಜಮೀನಿನಲ್ಲಿ ನಿಧಿ ಇದೆ ಎಂದು ಗುಂಡಿ ತೋಡಿ, ಬಾಲಕನನ್ನು ಮುಚ್ಚುತ್ತಿದ್ದಾಗ ಪಕ್ಕದ ಜಮೀನಿನವರು ಪೊಲೀಸರಿಗೆ ದೂರವಾಣಿ ಮಾಡಿ, ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಮೂವರು ಸ್ಥಳೀಯರು ಹಾಗೂ ನಿಧಿ ಪೂಜೆ ಮಾಡಲು ಬಂದಿದ್ದ ಕೇರಳದ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಗುಂಪಿನಲ್ಲಿ ಪ್ರಸಿದ್ಧ ಜ್ಯೋತಿಷಿಯೂ ಸೇರಿದ್ದಾನೆ.

ಜಮೀನಿನಲ್ಲಿ ನಿಧಿ ಇದೆ ಎಂದು ಗುಂಡಿ ತೋಡಿ, ಬಾಲಕನನ್ನು ಮುಚ್ಚಲು ಆರೋಪಿಗಳು ಸಿದ್ಧರಾಗಿದ್ದರು. ದಾಳಿ ವೇಳೆ ಬಲಿ ನೀಡುವ ಮುನ್ನ ನಡೆಸುವ ಪೂಜೆಗೆ ಬಳಸುವ ಹಲವಾರು ವಸ್ತುಗಳು ಸ್ಥಳದಲ್ಲಿ ಪತ್ತೆಯಾಗಿದ್ದು, ಬಲಿ ನೀಡಲು ಕರೆತಂದಿದ್ದ ಕೇರಳ ಮೂಲದ ಬಾಲಕನನ್ನು ರಕ್ಷಣೆ ಮಾಡಲಾಗಿದೆ.

ಈ ವಿಚಾರವಾಗಿ ಕೇರಳ ಮೂಲದ ಯುವಕರು ಹಾಗೂ ಸ್ಥಳೀಯರನ್ನು ಬಂಧಿಸಿರುವ ನಂಜನಗೂಡು ಪೊಲೀಸರು, ಗುಪ್ತ ಸ್ಥಳದಲ್ಲಿ ವಿಚಾರಣೆ ಮುಂದುವರೆಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications