ಮಹಿಷಾ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಪೊಲೀಸ್ ಇಲಾಖೆ
ಮೈಸೂರು, ಅಕ್ಟೋಬರ್ 10: ದಿನಕ್ಕೊಂದು ಸ್ವರೂಪ ಪಡೆದುಕೊಂಡಿದ್ದ ಮಹಿಷಾ ಆಚರಣೆಗೆ ಪೊಲೀಸರು ಬ್ರೇಕ್ ಹಾಕಿದ್ದು, ಅನುಮತಿ ನಿರಾಕರಿಸಿದ್ದಾರೆ. ಅ.13ರಂದು ಹಮ್ಮಿಕೊಂಡಿದ್ದ ಮಹಿಷ ದಸರಾ ಆಚರಣೆ ಹಾಗೂ ಬಿಜೆಪಿ ಪಕ್ಷದ ಚಲೋ ಚಾಮಂಡಿಬೆಟ್ಟ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಆಯುಕ್ತ ರಮೇಶ್.ಬಿ ಆದೇಶ ಹೊರಡಿಸಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರು ದಸರಾ ಹಿನ್ನೆಲೆಯಲ್ಲಿ ಮಧುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ. ರಸ್ತೆಗಳ ಗುಂಡಿ ಮುಚ್ಚಿಸಲಾಗುತ್ತಿದೆ. ಅರಮನೆ ಕಟ್ಟಡಗ ಬಲ್ಬ್ ಗಳನ್ನು ಬದಲಾಯಿಸಲಾಗುತ್ತಿದೆ. ಸರ್ಕಾರಿ ಕಟ್ಟಡಗಳಿಗೆ ಸುಣ್ಣಬಣ್ಣ ಬಳಿಯಲಾಗುತ್ತಿದೆ. ಆದರೆ, ಈ ನಡುವೆ ಮಹಿಷಾ ದಸರಾ ಹೆಚ್ಚು ಸದ್ದು ಮಾಡುತ್ತಿತ್ತು.

ಕಳೆದ ಎರಡು ವಾರದಿಂದ ಮಹಿಷಾ ದಸರಾ ಆಚರಣೆ ಸಂಬಂಧ ಮೈಸೂರು ನಗರದಲ್ಲಿ ಪರ-ವಿರೋಧ ಚರ್ಚೆ ಶುರುವಾಗಿತ್ತು. ಬಿಜೆಪಿ ಸಂಸದ ಪ್ರತಾಪಸಿಂಹ, ಮೇಯರ್ ಶಿವಕುಮಾರ್ ಹಾಗೂ ಶಾಸಕ ಟಿ.ಎಸ್.ಶ್ರೀವತ್ಸ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಮಹಿಷಾ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದರು.
"ನಾವು ಸಂಷರ್ಷಕ್ಕೂ ಸಿದ್ದರಿದ್ದೇವೆ. ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ" ಎಂದು ಪ್ರತಾಪಸಿಂಹ ಗುಡುಗಿದ್ದರು. ಜೊತೆಗೆ ಅ.13ರಂದು ಚಲೋ ಚಾಮುಂಡಿಬೆಟ್ಟ ನಡೆಸುವ ನಿರ್ಧಾರ ಪ್ರಕಟಿಸಿದ್ದರು. ಇತ್ತ ಮಹಿಷ ದಸರಾ ಆಚರಣೆ ಸಮಿತಿ ''ಇದು ನಮ್ಮ ಪೂರ್ವಿಕರ ಹಬ್ಬ. ಮಹಿಷನ ಪ್ರತಿಮೆಗೆ ಪುರ್ಷಾಚಣೆ ಮಾಡುತ್ತೇವೆ,'' ಎಂದಿದ್ದರು. ಇದೀಗ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಎರಡು ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.
"ಮಹಿಷ ದಸರಾ ಆಚರಣೆ ಅವಕಾಶ ನೀಡಲಾಗುವುದೋ ಇಲ್ಲವೋ ಎಂದು ಗಮನಿಸುತ್ತೇನೆ. ಅವಕಾಶ ನೀಡದೇ ಇದ್ದರೆ ಜಿಲ್ಲಾಡಳಿತಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಒಂದು ವೇಳೆ ಮಹಿಷ ದಸರಾ ನಡೆಸಿದರೆ ದಸರಾ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಪ್ರತಿಭಟನೆ ನಡೆಸಲಾಗುವುದು,'' ಎಂದು ಸಂಸದ ಪ್ರತಾಪಸಿಂಹ ತಿಳಿಸಿದ್ದಾರೆ.

ಮಹಿಷ ದಸರಾ ಆಚರಣೆ ವಿರೋಧಿಸಿ ಮೈಸೂರಿನ 8ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಸ್ನೇಹಮಹಿ ಕೃಷ್ಣ ಎಂಬುವರು ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಮಹಿಷ ದಸರಾ ಆಚರಣಾ ಸಮಿತಿ ಅಧ್ಯಕ್ಷರಿಗೆ ನೋಟಿಸ್ ಜಾರಿ ಮಾಡಿದ್ದು, ಅಕ್ಟೋಬರ್ 11ಕ್ಕೆ ಅರ್ಜಿ ವಿಚಾರಣೆ ನಿಗದಿಪಡಿಸಿದೆ.
ಮಹಿಷ ದಸರಾ ಆಚರಣೆಗೆ ನಾನಾ ಸಂಘಟನೆಗಳಿ ಬೆಂಬಲ ವ್ಯಕ್ತಪಡಿಸಿದರ ನಡುವೆ, ಬಿಜೆಪಿ ಕಾರ್ಯಕರ್ತರು, ನಗರದ ಕೆಲ ವಾರ್ಡ್ಗಳಲ್ಲಿ ಸಭೆ ನಡೆಸಿ ಮಹಿಷ ದಸರಾ ಆಚರಣೆಗೆ ವಿರೋಧ ವ್ಯಕ್ತಪಡಿಸುವುದರೊಂದಿಗೆ ಚಲೋ- ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸಾರ್ವಜನಿಕರನ್ನು ಮನವಿ ಮಾಡಿದ್ದರು.
ಏನಿದು ವಿವಾದ..?
2015 ರಿಂದ ದಲಿತ ಪರ ಸಂಘಟನೆಗಳು, ಪ್ರಗತಿಪರರು ಮೈಸೂರಿನಲ್ಲಿ ಮಹಿಷಾ ದಸರಾ ಆಚರಿಸಿಕೊಂಡು ಬರುತ್ತಿದ್ದಾರೆ. ಆದರೆ, ಬಿಜೆಪಿ ಸರ್ಕಾರ ಬಂದ ಮೇಲೆ ಮಹಿಷಾ ದಸರಾಕ್ಕೆ ಅವಕಾಶ ಸಿಕ್ಕಿರಲಿಲ್ಲ. ಇದೀಗ ನೂತನ ಸರ್ಕಾರ ಬಂದ ಮೇಲೆ ಮತ್ತೆ ಮಹಿಷಾ ದಸರಾ ಆಚರಣೆ ಮುನ್ನಲೆಗೆ ಬಂದಿದೆ.
ಇತ್ತ ಸಂಸದ ಪ್ರತಾಪಸಿಂಹ ಸೇರಿದಂತೆ ಇತರರು ಮಹಿಷಾ ದಸರಾ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಂಘರ್ಷವಾದರೂ ನಾವು ಮಹಿಷ ದಸರಾ ನಡೆಯಲು ಬಿಡುವುದಿಲ್ಲ ಎಂದು ಸವಾಲು ಹಾಕಿದ್ದಾರೆ. ಇತ್ತ ಮಹಿಷ ಸಮಿತಿಯವರು ಇದು ದಸರಾ ಆಗಲಿ ಅಥವಾ ಚಾಮುಂಡೇಶ್ವರಿ ಗಾಗಲಿ ವಿರೋಧಿ ಮಾಡುತ್ತಿರುವುದ್ದಲ್ಲ. ಕೇವಲ ಮಹಿಷಾ ಪ್ರತಿಮೆಗೆ ಪುಷ್ಪಾರ್ಚನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ.
ಪೋಸ್ಟರ್ ಬಿಡುಗಡೆ
2015ರಲ್ಲಿ ಆರಂಭವಾದ ಮಹಿಷ ದಸರಾ ಆಚರಣೆಗೆ ದಿಢೀರ್ 50 ವರ್ಷದ ಇತಿಹಾಸ ಸೃಷ್ಟಿಯಾಗಿದೆ. ಈ ಬಾರಿ 50ನೇ ವರ್ಷದ ಮಹಿಷ ದಸರಾ ಆಚರಣೆ ನಡೆಸಲಾಗುತ್ತಿದೆ ಎಂದು ಮಹಿಷ ದಸರಾ ಆಚರಣೆ ಸಮಿತಿಯಿಂದ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಅ.13ರಂದು ಮಹಿಷ ದಸರಾ ಆಚರಣೆ ಸಮಿತಿ ಹಾಗೂ ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘ ಮಹಿಷ ದಸರಾ ಆಚರಿಸಲು ನಿರ್ಧರಿಸಿತ್ತು. ಆಹ್ವಾನ ಪತ್ರಿಕೆಯನ್ನೂ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಚಾಮುಂಡಿ ಬೆಟ್ಟಕ್ಕೆ ಮಹಿಷ ಬೆಟ್ಟ ಅಂತಾ ನಮೂದು ಮಾಡಲಾಗಿದೆ. ಹಾಗಾಗಿ ಈ ಬಾರಿ ಮಹಿಷಾ ದಸರಾ ವಿವಾದದ ಸ್ವರೂಪ ಪಡೆದುಕೊಂಡಿತ್ತು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications