ಮೈಸೂರಿನಲ್ಲಿ ನಕಲಿ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭಕ್ಕೆ ಪೊಲೀಸರ ದಾಳಿ; ಆಯೋಜಕ ಪರಾರಿ
ಮೈಸೂರು, ಸೆಪ್ಟೆಂಬರ್ 26: ನಗರದಲ್ಲಿ ನಕಲಿ ವಿಶ್ವವಿದ್ಯಾಲಯದ ಹೆಸರಿನಲ್ಲಿ ಡಾಕ್ಟರೇಟ್ ಪದವಿ ಪ್ರದಾನ ದಂಧೆ ನಡೆಯುತ್ತಿದೆ ಎಂಬ ಆರೋಪದ ಮೇರೆಗೆ ಇಂದು ಹುಣಸೂರು ರಸ್ತೆಯ ಹೋಟೆಲ್ ವೊಂದರಲ್ಲಿ ನಡೆಯುತ್ತಿದ್ದ ಪದವಿ ಪ್ರದಾನ ಕಾರ್ಯಕ್ರಮದ ವೇಳೆ ಡಿಸಿಪಿ ಪ್ರಕಾಶ್ ಗೌಡ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದೆ.
ಪೊಲೀಸರು ದಾಳಿ ನಡೆಸುತ್ತಿದ್ದಂತೆ ಕಾರ್ಯಕ್ರಮದ ಆಯೋಜಕರು ಪರಾರಿಯಾಗಿದ್ದಾರೆ. ಇನ್ನಿತರ ಮೂರಕ್ಕೂ ಹೆಚ್ಚು ಆಯೋಜಕರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಮುಖ್ಯ ಅತಿಥಿಯಾಗಿ ನಕಲಿ ಕಾರ್ಯಕ್ರಮದಲ್ಲಿ ಹರಿಹರ ಶಾಸಕ ರಾಮಪ್ಪ ಭಾಗಿಯಾಗಿದ್ದರು. ಇಂಟರ್ ನ್ಯಾಷನಲ್ ಗ್ಲೋಬಲ್ ಪೀಸ್ ಯುನಿವರ್ಸಿಟಿ ಹೆಸರಲ್ಲಿ ನಕಲಿ ಡಾಕ್ಟರೇಟ್ ಪದವಿ ಪ್ರದಾನ ಕಾರ್ಯಕ್ರಮ ನಡೆಯುತ್ತಿತ್ತು...

150ಕ್ಕೂ ಹೆಚ್ಚು ಜನರಿಂದ ಹಣ
ಈ ಡಾಕ್ಟರೇಟ್ ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಡಾಕ್ಟರೇಟ್ ಪದವಿ ನೀಡಲು ಕಾರ್ಯಕ್ರಮ ಆಯೋಜಕರು ಮುಂದಾಗಿದ್ದರು ಎನ್ನಲಾಗಿದೆ. ನಕಲಿ ಗೌರವ ಡಾಕ್ಟರೇಟ್ ಪದವಿ ನೀಡುತ್ತಿರುವ ಕುರಿತು ಹಲವಾರು ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಕ್ರಮ ಕೈಗೊಳ್ಳುವಂತೆ ಈ ಹಿಂದೆ ಸರ್ಕಾರವನ್ನು ಒತ್ತಾಯಿಸಿದ್ದರು.

ನೋಟೀಸ್ ನೀಡುವಂತೆ ಆದೇಶಿಸಿದ್ದ ಕೋರ್ಟ್
ಇಷ್ಟೇ ಅಲ್ಲದೆ ಹಣ ಪಡೆದು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ ಎಂದು ಆರೋಪಿಸಿ ಮದ್ದೂರಿನ ಸಿ.ಎಸ್.ಸುರೇಶ್ ಎಂಬುವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾವೆ ದಾಖಲಿಸಿದ್ದರು. ಈ ಕುರಿತು ಕೇಂದ್ರಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಹಾಗೂ ವಿವಿ ಅನುದಾನ ಆಯೋಗಕ್ಕೆ ನೋಟೀಸ್ ನೀಡುವಂತೆ ಕೋರ್ಟ್ ಆದೇಶಿಸಿತ್ತು.

ಬೆಂಗಳೂರಿನಲ್ಲೂ ಇಂಥದ್ದೇ ಕಾರ್ಯಕ್ರಮ ನಡೆದಿತ್ತು
ಕಳೆದ ವಾರ ಮದರ್ ಥೆರೇಸಾ ಹೆಸರಿನ ಯೂನಿವರ್ಸಿಟಿಯೊಂದು ಬೆಂಗಳೂರಿನಲ್ಲಿ ಇದೇ ರೀತಿಯ ಕಾರ್ಯಕ್ರಮ ಆಯೋಜಿಸಿ ನೂರಕ್ಕೂ ಹೆಚ್ಚು ಆಕಾಂಕ್ಷಿಗಳಿಗೆ ಗೌರವ ಡಾಕ್ಟರೇಟ್ ಪದವಿ ನೀಡಿತ್ತು. ಇಂದು ಮೈಸೂರಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶ, ತಮಿಳುನಾಡು ಮತ್ತಿತರ ರಾಜ್ಯಗಳಿಂದ ಡಾಕ್ಟರೇಟ್ ಪದವಿ ಆಕಾಂಕ್ಷಿಗಳು ಬಂದಿದ್ದು, ಪ್ರತಿಯೊಬ್ಬರಿಂದ 50 ಸಾವಿರದಿಂದ 1 ಲಕ್ಷ ರೂ.ಪಡೆದು ಪದವಿ ನೀಡಲಾಗುತ್ತಿತ್ತು.
Recommended Video

ಪ್ರಶಸ್ತಿ ಪತ್ರ, ಫಲಕಗಳು ಪೊಲೀಸರ ವಶಕ್ಕೆ
ಇಂದು ಸೇರಿದ್ದ ಡಾಕ್ಟರೇಟ್ ಪದವಿ ಆಕಾಂಕ್ಷಿಗಳಲ್ಲಿ ರಾಜಕಾರಣಿಗಳು, ಪತ್ರಕರ್ತರು, ಸಮಾಜ ಸೇವಕರು, ಮಠಾಧೀಶರುಗಳೂ ಇದ್ದರು. ಹಣ ಪಡೆದು ಗೌರವ ಡಾಕ್ಟರೇಟ್ ನೀಡುವ ಪದವಿ ಪ್ರದಾನ ಕಾರ್ಯಕ್ರಮ ರದ್ದಾಗಿದೆ. ಕಾರ್ಯಕ್ರಮದ ಪ್ರಶಸ್ತಿ ಪತ್ರ, ಫಲಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ,
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications