ಮೈಸೂರು, ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : ಐವರ ಬಂಧನ
ಮೈಸೂರು, ಜನವರಿ 11 : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, ಮೂವರು ಮಹಿಳೆಯರನ್ನು ರಕ್ಷಿಸಿ, ಐವರು ಯುವಕರನ್ನು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಬಂಧಿತರನ್ನು ಕೇರಳ ಮೂಲದ ಕಣ್ಣನೂರು ತಾಲ್ಲೂಕಿನ ಅನು, ಅನಿಲ್ ಅಗಸ್ಟನ್, ಕೆ.ಪಿ.ರಫೀ, ಅಬ್ದುಲ್ ನಾಸೀರ್, ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಹುಣಸೂರು ಪಟ್ಟಣದ ಬಾಲಾಜಿ ಪ್ಯಾಲೇಸ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಮೂವರು ಮಹಿಳೆಯರನ್ನು ರಕ್ಷಣೆ ಮಾಡಿ, ಐವರು ಯುವಕರನ್ನು ಬಂಧಿಸಿದ್ದಾರೆ.[ಮಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, ಮೂವರ ಸೆರೆ]

ವೇಶ್ಯಾವಾಟಿಕೆ ನಡೆಸಲು ಸಹಕರಿಸಿದ ಲಾಡ್ಜ್ ಮಾಲೀಕ ಅಬ್ದುಲ್ ನಾಸೀರ್ ಹಾಗೂ ಮ್ಯಾನೇಜರ್ ಅನಿಲ್ ಕುಮಾರ್ ತಲೆಮರೆಸಿಕೊಂಡಿದ್ದು, ಇವರಿಬ್ಬರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಕಳುವು : ಚೋರ ಸೆರೆ
ಮೈಸೂರು: ಇಲ್ಲಿನ ದೇವರಾಜ ಠಾಣೆ ಪೊಲೀಸರು ದ್ವಿಚಕ್ರ ವಾಹನಗಳ ಕಳ್ಳನನ್ನು ಬಂಧಿಸಿ ಆತನಿಂದ ರು 80ಸಾವಿರ ಮೌಲ್ಯದ ಬೈಕ್ ಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಬಂಧಿತ ಬೆಂಗಳೂರು ಪೀಣ್ಯ 2ನೇ ಹಂತದ ನಿವಾಸಿ ಸಂತೋಷ್ ಅಲಿಯಾಸ್ ಸಂತು(23) ಎನ್ನಲಾಗಿದೆ. ಈತ ಮೂಲತಃ ಮಂಡ್ಯಜಿಲ್ಲೆಯ ಮಳ್ಳವಳ್ಳಿ ತಾಲ್ಲೂಕು ಹಲಗೂರು ನಿವಾಸಿಯಾಗಿದ್ದು. ಮಂಗಳವಾರ ಮೈಸೂರು ಮಿಷನ್ ಆಸ್ಪತ್ರೆ ರಸ್ತೆಯ ಎಲ್ಲಮ್ಮಾಂಬ ದೇವಸ್ಥಾನದ ಬಳಿ ಕಳವು ಮಾಡಿದ್ದ ಹೊಂಡ ಆಕ್ಟೀವಾ ದ್ವಿಚಕ್ರ ವಾಹನವನ್ನು ಮಾರುವ ವೇಳೆ ಪೊಲೀಸರಿಗೆ ಸಿಕಿಬಿದ್ದಿದ್ದಾನೆ.

ವಿಚಾರಣೆ ವೇಳೆ ಕೊಡಗಿನ ಶನಿವಾರ ಸಂತೆಯಲ್ಲಿ ಹೊಂಡಾ ಆಕ್ಟಿವಾವನ್ನು ಹಾಗೂ ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಜಾಜ್ ಡಿಸ್ಕವರ್ ಬೈಕ್ ಗಳನ್ನು ನಕಲಿ ಕೀ ಬಳಸಿ ಕಳವು ಮಾಡಿರುವುದಾಗಿ ಸತ್ಯ ನುಡಿದಿದ್ದಾನೆ. ಪೊಲೀಸರು ಕಳುವಾದ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಸ್ತುತ ಮೈಸೂರಿನಲ್ಲಿ ವಾಸಿಸುತ್ತಿರುವ ಈತ ಹೆಬ್ಬಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಉದ್ಯೋಗ ಮಾಡುತ್ತಿದ್ದು, ಈಚೆಗಷ್ಟೇ ಮದುವೆಯಾಗಿದ್ದ ಸಂಬಳ ಸಾಲದೇ ಬೈಕ್ ಕಳವಿನ ದಂಧೆಯನ್ನು ಶುರುಮಾಡಿದ್ದ ಎನ್ನಲಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications