ಬೆಟ್ಟದಪುರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅಮಾನತು
ಮೈಸೂರು, ಮೇ 6: ಶಿಸ್ತಿನ ಇಲಾಖೆ ಎಂದೇ ಪರಿಗಣಿತವಾಗಿರುವ ಪೊಲೀಸ್ ಇಲಾಖೆ ದುಷ್ಟರ ಶಿಕ್ಷಕ, ಶಿಷ್ಟರ ರಕ್ಷಕನ ಕಾರ್ಯವನ್ನು ನಿರ್ವಹಿಸಬೇಕಿದೆ. ಆದರೆ ಇದಕ್ಕೆ ಅಪವಾದವೆಂಬಂತೆ ಅಲ್ಲೊಂದು ಇಲ್ಲೊಂದು ಪೊಲೀಸ್ ಇಲಾಖೆ ತಲೆ ತಗ್ಗಿಸುವ, ಮುಜುಗರ ಪಡುವ ಘಟನೆಗಳು ನಡೆಯುತ್ತಿವೆ. ಇಂತಹ ಘಟನೆಗಳಿಂದ ಇಲಾಖೆಯ ಘನತೆ, ಗೌರವಕ್ಕೆ ಕುಂದು ಉಂಟಾಗುತ್ತಿದೆ.
Recommended Video
ಖಾಕಿ ಗೌರವಕ್ಕೆ ಕುಂದು ಉಂಟಾಗುವ ಘಟನೆಯೊಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ತಡವಾಗಿ ವರದಿ ಆಗಿದೆ.
ಬೆಟ್ಟದಪುರ ಪೊಲೀಸ್ ಠಾಣೆಯ ಪಿಎಸ್ಐ ಲೋಕೇಶ್ ಅವರು ರೌಡಿಯೊಂದಿಗೆ ಮದ್ಯ ಸೇವಿಸಿ ಫೋಟೋಗೆ ಪೋಸ್ ನೀಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಣ್ಣಯ್ಯ ಎಂಬುವವರು ಹುಣಸೂರು ಡಿವೈಎಸ್ಪಿ, ಎಸ್ಪಿ, ಹಾಗೂ ಐಜಿಪಿ ಅವರಿಗೆ ದೂರು ನೀಡಿದ್ದಾರೆ.

ಸಬ್ ಇನ್ಸ್ ಪೆಕ್ಟರ್ ಪಿ.ಲೋಕೇಶ್ ಅವರು ಏಪ್ರಿಲ್ 17, 2020 ರಂದು ಸಂಜೆ 8 ಗಂಟೆಯಿಂದ ತಡರಾತ್ರಿ 2 ಗಂಟೆಯವರೆಗೆ ರೌಡಿ ಶೀಟರ್ ಬಿ.ಬಿ ದಿನೇಶ್ ಎಂಬಾತನ ಜೊತೆಯಲ್ಲಿ ಮದ್ಯಪಾನ ಮಾಡಿ ಇತರರೊಂದಿಗೆ ತಬ್ಬಿಕೊಂಡಿರುವ ಪೋಟೋವನ್ನು ತೆಗೆಸಿಕೊಂಡಿರುತ್ತಾರೆ.
ಶಿಸ್ತಿನ ಇಲಾಖೆಯಾದ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ತಂದು ಇಲಾಖೆ ನಿಯಮಕ್ಕೆ ವಿರುದ್ಧವಾಗಿ ರೌಡಿಗಳೊಂದಿಗೆ ಶಾಮೀಲಾಗಿರುವುದು ಕಂಡು ಬಂದಿದೆ. ಈ ಕುರಿತು ಸಮಗ್ರ ತನಿಖೆ ಮಾಡಿ ಇಲಾಖೆಯ ಗೌರವವನ್ನು ಎತ್ತಿ ಹಿಡಿದು ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಡಿವೈಎಸ್ಪಿ ಸುಂದರ್ ರಾಜ್ ಅವರನ್ನು "ಒನ್ಇಂಡಿಯಾ ಕನ್ನಡ' ಸಂಪರ್ಕಿಸಿದಾಗ, ಮದ್ಯಪಾನ ಮಾಡಿರುವ ಬಗ್ಗೆ ಸಾಕ್ಷ್ಯಗಳು ಸಿಕ್ಕಿಲ್ಲ ಎಂದರು.

ಎಸ್ಪಿ ಸಿ.ಬಿ ರಿಶ್ವಂತ್ ಅವರನ್ನು ಸಂಪರ್ಕಿಸಿದಾಗ, ಸಬ್ ಇನ್ಸ್ಪೆಕ್ಟರ್ ಅವರನ್ನು ಈಗಾಗಲೇ ಅಮಾನತು ಮಾಡಿರುವುದಾಗಿ ತಿಳಿಸಿದರು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications