ಮೈಸೂರು: ಡಿಸಿಪಿ ಕಾಲಿಗೆ ಬಿದ್ದ ಪಟಾಕಿ ಮಾರಾಟಗಾರ
ಮೈಸೂರು, ನವೆಂಬರ್ 14: ಸರ್ಕಾರ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಶನಿವಾರ ಮೈಸೂರಿನ ಜೆ.ಕೆ ಮೈದಾನದಲ್ಲಿರುವ ಪಟಾಕಿ ಮಳಿಗೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರವೇ ಮಾರಾಟ ಮಾಡಲು ಮಾರಾಟಗಾರರಿಗೆ ಅನುಮತಿ ನೀಡಲಾಗಿದ್ದು, ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ತಾತ್ಕಾಲಿಕವಾಗಿ ಪಟಾಕಿ ವ್ಯಾಪಾರಕ್ಕೆ ತಡೆ ನೀಡಿದ್ದಾರೆ.
ಪರಿಶೀಲನೆ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. "ನಮಗೆ ಸರ್ಕಾರದ ಆದೇಶಗಳಲ್ಲಿ ಗೊಂದಲವಿದೆ, ಹಾಗಾಗಿ ಇದೊಂದು ಬಾರಿ ಮಾರಾಟಕ್ಕೆ ಅನುಮತಿ ನೀಡುವಂತೆ' ಪಟಾಕಿ ಮಾರಾಟಗಾರರು ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ.

ದೃಢೀಕರಣ ಪತ್ರ ನೀಡಬೇಕು
ಏತನ್ಮಧ್ಯೆ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಹಸಿರು ಪಟಾಕಿ ಮಾರಾಟ ಮಾಡುವುದಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಅಡ್ಡಿ ಇಲ್ಲ. ಆದರೆ ಮಾರಾಟಗಾರರು ತಾವು ಮಾರಾಟ ಮಾಡುತ್ತಿರುವುದು ಹಸಿರು ಪಟಾಕಿ ಎಂಬುದಕ್ಕೆ ದೃಢೀಕರಣ ಪತ್ರ ತರಬೇಕು. ದೃಢೀಕರಣ ಪತ್ರ ತಂದು ಪೊಲೀಸ್ ಇಲಾಖೆಗೆ ನೀಡಿದಲ್ಲಿ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದಿದ್ದಾರೆ.

ಟ್ರೇಡ್ ಮಾರ್ಕ್ ಇರುವ ಪಟಾಕಿ ಮಾತ್ರ ಮಾರಾಟ
ದೃಢೀಕರಣ ಪತ್ರ ನೀಡದಿದ್ದಲ್ಲಿ ಮಾರಾಟಕ್ಕೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಈ ನಡುವೆ ಇಂದು ಡಿಸಿಪಿ ಪ್ರಕಾಶ್ಗೌಡ ಅವರು ಶನಿವಾರ ಪಟಾಕಿ ಮಳಿಗೆಗಳನ್ನು ಪರಿಶೀಲಿಸಿದರು. ಟ್ರೇಡ್ ಮಾರ್ಕ್ ಇರುವ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಸೂಚನೆ ನೀಡಿದರು.

ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದೇವೆ
ಆ ಸಮಯದಲ್ಲಿ ಡಿಸಿಪಿ ಪ್ರಕಾಶ್ ಗೌಡ ಅವರ ಕಾಲಿಗೆ ಬಿದ್ದ ವ್ಯಾಪಾರಿಯೊಬ್ಬರು, ಈಗಾಗಲೇ ಲಕ್ಷಾಂತರ ರುಪಾಯಿ ಮೌಲ್ಯದ ಪಟಾಕಿ ಖರೀದಿಸಿ ತಂದಿದ್ದೇವೆ. ಇದೊಂದು ಬಾರಿ ಮಾರಾಟ ಮಾಡಲು ಅವಕಾಶ ನೀಡಿ, ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದೇವೆʼ ಎಂದು ಕೇಳಿಕೊಂಡರು.

ಹಣ ವಾಪಸ್ ಕೊಡಿಸುತ್ತೇವೆ
ಈ ವೇಳೆ ಮಾತನಾಡಿದ ಡಿಸಿಪಿ, ನೀವು ಪಟಾಕಿ ಖರೀದಿಸಿದ ರಸೀದಿ ತನ್ನಿ, ಖರೀದಿಸಿದ ಕಂಪೆನಿಗಳಿಂದ ಹಣ ವಾಪಸ್ ಕೊಡಿಸುತ್ತೇವೆ. ಕಾನೂನಿನನ್ವಯ ಖರೀದಿಸಿದ ಪಟಾಕಿಯನ್ನು ಹಿಂಪಡೆಯಬೇಕು. ಒಂದು ವೇಳೆ ಹಿಂಪಡೆಯದಿದ್ದರೆ ಕಾನೂನು ಕ್ರಮಕೈಗೊಳ್ಳಲಾಗುವುದುʼ ಎಂದು ತಿಳಿಸಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications