ಪಾಲಕರು ಹಣ ನೀಡಿಲ್ಲವೆಂದು ನೇಣಿಗೆ ಶರಣಾದ ಮೈಸೂರಿನ ವಿದ್ಯಾರ್ಥಿ
ಮೈಸೂರು, ಆಗಸ್ಟ್ 22: ತಂದೆ, ತಾಯಿ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹಿರೀಕ್ಯಾತನಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ನಿವಾಸಿ ಶಿವನಾಯಕ ಚಂದ್ರಮ್ಮ ದಂಪತಿ ಪುತ್ರ ಕೃಷ್ಣಮೂರ್ತಿ(16) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಈತ ಗಾವಡಗೆರೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ. ತಂದೆ, ತಾಯಿ ಬಡವರಾಗಿದ್ದು, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೂ ಮಗನನ್ನು ಚೆನ್ನಾಗಿ ಓದಿಸಬೇಕೆಂಬ ಕನಸು ಕಂಡಿದ್ದರು.

ಕಾಲೇಜಿಗೆ ತೆರಳುತ್ತಿದ್ದ ಕೃಷ್ಣಮೂರ್ತಿ ಇತರೆ ವಿದ್ಯಾರ್ಥಿಗಳಂತೆ ತಾನೂ ಹಣ ಖರ್ಚುಮಾಡುತ್ತ, ದುಬಾರಿ ವಸ್ತು ಖರೀದಿಸಿ, ಎಲ್ಲರಂತೇ ಅನುಕೂಲವಂತನಾಗಿ ಬದುಕಬೇಕೆಂಬ ಆಸೆ. ಆದರೆ ಮನೆಯಲ್ಲಿ ಬಡತನವಿದ್ದುದರಿಂದ ಮತ್ತು ಕೂಲಿ ಕೆಲಸ ಮಾಡಿಯೇ ಜೀವನ ಸಾಗಿಸಬೇಕಾದ ಅನಿವಾರ್ಯತೆ ಇದ್ದುದರಿಂದ ಮಗ ಕೇಳಿದಾಗಲೆಲ್ಲ ಹಣ ಹೊಂದಿಸಿ ಕೊಡುವುದು ಹೆತ್ತವರಿಗೆ ಕಷ್ಟವಾಗಿ ಪರಿಣಮಿಸಿತ್ತು.
ಈ ನಡುವೆ ತನಗೆ ಹಣ ಬೇಕೆಂದು ಹೆತ್ತವರಲ್ಲಿ ಕೃಷ್ಣಮೂರ್ತಿ ಕೇಳಿದ್ದಾನೆ. ಈ ಸಂದರ್ಭ ಆತನ ತಾಯಿ ಚಂದ್ರಮ್ಮ ಕೂಲಿ ಮಾಡಿದ ಹಣ ಇನ್ನೂ ಸಿಕ್ಕಿಲ್ಲ. ಹಣ ಸಿಕ್ಕಿದ ತಕ್ಷಣ ನೀಡುವುದಾಗಿ ಬುದ್ಧಿವಾದ ಹೇಳಿ ಕೆಲಸಕ್ಕೆ ತೆರಳಿದ್ದಾರೆ.
ಆದರೆ ಮಗ ಕೃಷ್ಣಮೂರ್ತಿ ಹಣವಿಲ್ಲದೆ ಕಾಲೇಜಿಗೆ ತೆರಳಲು ಸಾಧ್ಯವಿಲ್ಲ ಎಂದು ಮನೆಯ ಹಿಂಭಾಗದಲ್ಲಿದ್ದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications