ಮೈಸೂರು ರಾಜಮನೆತನದ ಕೊಡುಗೆ ಅಪಾರ: ಕೇಂಬ್ರಿಡ್ಜ್ ಪ್ರೊ.ಡೇವಿಡ್ ವಾಷ್
ಮೈಸೂರು, ಫೆಬ್ರವರಿ 17 : ದಕ್ಷಿಣ ಭಾರತವನ್ನಾಳಿದ ರಾಜಮನೆತನಗಳಲ್ಲಿ ಮೈಸೂರು ಹಾಗೂ ಹೈದರಾಬಾದ್ ರಾಜ ಮನೆತನಗಳು ಅತ್ಯಂತ ಪ್ರಮುಖವಾದವು ಎಂದು ಕೇಂಬ್ರಿಡ್ಜ್ ವಿಶ್ವವಿದ್ಯಾನಿಯಲದ ಪ್ರೊ.ಡೇವಿಡ್ ವಾಷ್ ಬ್ರೋಕ್ ಸಂತಸ ವ್ಯಕ್ತಪಡಿಸಿದರು.
ಮೈಸೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ವತಿಯಿಂದ ಶುಕ್ರವಾರ ರಾಣಿಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಿದ್ದ ದಕ್ಷಿಣ ಭಾರತದಲ್ಲಿ ರಾಜಮನೆತನಗಳ ಅಧಿಕಾರ, ಪ್ರತಿರೋಧ ಮತ್ತು ಸಾರ್ವಭೌಮತ್ವ ವಿಷಯ ಕುರಿತ ಎರಡು ದಿನಗಳ ಪ್ರೊ.ಅಚ್ಚುತರಾವ್ ಸ್ಮಾರಕ ಸಮ್ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಭವ್ಯ ಭಾರತದ ಇತಿಹಾಸದಲ್ಲಿ ನೂರಾರು ರಾಜ ಮನೆತನಗಳು ಆಡಳಿತ ನಡೆಸಿವೆ. ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಪರಂಪರೆ ಹಾಗೂ ಸಂಪ್ರದಾಯಗಳನ್ನು ಉಳಿಸಿ ಬೆಳೆಸಿವೆ ಎಂದರು.[ಮೈಸೂರು: ಫೆ. 23 ರಂದು ಯದುರಾಜ್ ಗೆ ಪಟ್ಟಾಭಿಷೇಕ]

ದಕ್ಷಿಣ ಭಾರತದ ಇತಿಹಾಸಕ್ಕೆ ಬಂದರೆ ಮೈಸೂರು ಹಾಗೂ ಹೈದರಾಬಾದ್ ಸಂಸ್ಥಾನಗಳು ಹೆಚ್ಚಿನ ಪ್ರಾಬಲ್ಯ ಹೊಂದಿದ್ದವು. ಮೈಸೂರಿನ ಅರಸರು, ಕೈಗಾರಿಕೆ, ಮೂಲಸೌಕರ್ಯ, ಉದ್ಯೋಗ, ಶಿಕ್ಷಣ, ಸಂಸ್ಕೃತಿ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಅಭಿವೃದ್ಧಿ ಸಾಧಿಸಲು ಶ್ರಮಿಸಿದರು. ಈ ಅವಧಿಯಲ್ಲಿ ಹೊಸ ಆವಿಷ್ಕಾರಗಳು, ಮೈನಿಂಗ್, ಎಲೆಕ್ಟ್ರಿಕಲ್ ಸೇರಿದಂತೆ ಹಲವು ಕೈಗಾರಿಕೆಗಳು ಆರಂಭವಾದವು.
ಹಿಂದುಳಿದವರಿಗೆ, ಶೋಷಿತರಿಗೆ ಮೀಸಲಾತಿ ಸೇರಿದಂತೆ ಹೆಚ್ಚಿನ ಅವಕಾಶಗಳು ಸಿಗಲಾರಂಭಿಸಿದವು. ಸ್ವಾತಂತ್ರ್ಯ ದೊರೆತ ಬಳಿಕ ವೈಜ್ಞಾನಿಕ ಬದಲಾವಣೆಗಳಾದವು. ಬೆಂಗಳೂರು ದೇಶದ 2ನೇ ಕೈಗಾರಿಕಾ ಪ್ರದೇಶವಾಗಿ ಗುರುತಿಸಲ್ಪಟ್ಟಿತು, ಇಂದು ನಾಗಲೋಟದಲ್ಲಿ ಬೆಳೆಯುತ್ತಿದೆ ಎಂದರು.

ಇದೇ ವೇಳೆ ಪ್ರೊ. ಅಚ್ಚುತರಾವ್ ಜೀವನ ಮತ್ತು ಕೃತಿಗಳ ಪ್ರದರ್ಶನವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಆರ್.ರಾಜಣ್ಣ ಉದ್ಘಾಟಿಸಿದರು. ಮೈಸೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಯಶವಂತ ಡೋಂಗ್ರೆ, ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಅಧ್ಯಕ್ಷ ಪ್ರೊ.ಕೆ.ಸದಾಶಿವ, ಡಿ.ಎ.ಪ್ರಸನ್ನ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications