ಪ್ರಜ್ವಲ್ರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯನ್ನು ಅಪಹರಣ ಮಾಡಿಸಿದರೇ ರೇವಣ್ಣ? ದಾಖಲಾದ ದೂರಿನಲ್ಲೇನಿದೆ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಇದೀಗ ಮೈಸೂರಿಗೂ ವ್ಯಾಪಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಆರೋಪವಿರುವ ಮಹಿಳೆ ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಸ್ವತಃ ಮಹಿಳೆಯ ಪುತ್ರ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಈಗಾಗಲೇ ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ಎರಡು ಪ್ರಕರಣ ದಾಖಲಾಗಿದೆ. ಜೊತೆಗೆ ಎಚ್.ಡಿ.ರೇವಣ್ಣ ಅವರು ನಿರೀಕ್ಷಣಾ ಜಮೀನು ಪಡೆದುಕೊಳ್ಳಲು ಕೋರ್ಟ್ ಮೊರೆ ಹೋಗಿದ್ದಾರೆ. ಈ ನಡುವೆ ತನ್ನ ತಾಯಿ ಅಪಹರಣವಾಗಿದೆ ಎಂದು ಪುತ್ರನೊಬ್ಬ ಆರೋಪಿಸಿ ದೂರು ದಾಖಲಿಸಿದ್ದಾನೆ.

ದೂರಿನಲ್ಲಿ ಏನಿದೆ?
ಕೆ.ಆರ್.ನಗರ ತಾಲೂಕಿನ ಮಹಿಳೆ ಅಪಹರಣಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದು, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಫೋಟೋಗಳು ಬಹಿರಂಗ ಆದ ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ ಎಂದು ಪುತ್ರ ದೂರಿದ್ದಾರೆ.
ಏಪ್ರಿಲ್ 29 ರಂದು ಘಟನೆ ನಡೆದಿದೆ ಎಂದು ಪ್ರಥಮ ಮಾಹಿತಿ ವರದಿ (ಎಫ್ಐಆರ್) ಯಲ್ಲಿ ಹೇಳಲಾಗಿದೆ. ಮಹಿಳೆ ಈ ಹಿಂದೆ ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ನಿವಾಸ ಮತ್ತು ಫಾರ್ಮ್ಹೌಸ್ನಲ್ಲಿ ಆರು ವರ್ಷಗಳ ಕಾಲ ಕೆಲಸ ಮಾಡಿದ್ದರು. ಮೂರು ವರ್ಷಗಳ ಹಿಂದೆ, ಕೆಲಸ ಮಾಡುವುದನ್ನು ಬಿಟ್ಟು ಮನೆಗೆ ಮರಳಿದ್ದರು ಎಂದು ದೂರಿನಲ್ಲಿ ದಾಖಲಿಸಲಾಗಿದೆ.
ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ ಸೂಚನೆ ಮೇರೆಗೆ ಸತೀಶ್ ಬಾಬು ಎಂಬುವರು ಕರದೊಯ್ದಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಎಫ್ಐಆರ್ ಪ್ರಕಾರ, ಬಾಬಣ್ಣ ಅವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ಪೊಲೀಸರೊಂದಿಗೆ ಮಾತನಾಡಬೇಡಿ ಎಂದು ಕುಟುಂಬದವರಿಗೆ ಹೇಳಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.
ಏಪ್ರಿಲ್ 29 ರಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಬಾಬಣ್ಣ ಅವರು ಮನೆಯವರ ಬಳಿಗೆ ಬಂದರು, ಮಹಿಳೆ ಪೊಲೀಸರಿಗೆ ಸಿಕ್ಕಿಬಿದ್ದರೆ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದು, ರೇವಣ್ಣ ತನಗೆ ಕರೆ ಮಾಡಿದ್ದಾರೆ ಎಂದು ತಿಳಿಸಿ ಅವರ ಜೊತೆ ಕರೆದೊಯ್ದರು ಎಂದು ಮಹಿಳೆಯ ಮಗ ಎಫ್ಐಆರ್ನಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಮಹಿಳೆಯ ಪತ್ತೆಗೆ ಮುಂದಾಗಿದ್ದಾರೆ.
ಈಗಾಗಲೇ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ.ರೇವಣ್ಣ ವಿರುದ್ದ ಎರಡು ಪ್ರಕರಣ ದಾಖಲಾಗಿದೆ. ಇದೀಗ ಮತ್ತೊಂದು ಪ್ರಕರಣ ದಾಖಲಾಗಿರುವುದು ಮತ್ತಷ್ಟು ಸಂಕಷ್ಟವನ್ನು ತಂದೊಡ್ಡುವ ಸಾಧ್ಯತೆ ಇದೆ.
ಎಸ್ಐಟಿ ತಂಡ ತನಿಖೆ ಬಳಿಕ ಮತ್ತಷ್ಟು ಆಘಾತಕಾರಿ ವಿಚಾರಗಳು ಬಹಿರಂಗವಾಗುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ. ಆರೋಪಗಳ ನಡುವೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದು, ಎಸ್ಐಟಿ ಲುಕೌಟ್ ನೋಟಿಸ್ ಜಾರಿ ಮಾಡಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications