ದೇವೇಗೌಡರ ವಂಶದಕುಡಿ ಹುಣಸೂರಿಂದ ಕಣಕ್ಕೆ?
ಮುಂದಿನ ವಿಧಾನಸಭಾ ಚುನಾವಣೆಗೆ ಹುಣಸೂರು ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ ಅಲ್ಲಿಂದಲೇ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮೈಸೂರು, ಮೇ 04: 2018 ವಿಧಾನ ಸಭಾ ಚುನಾವಣೆಗೆ ದೇವೇಗೌಡರ ವಂಶದ ಕುಡಿಯನ್ನು ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದ್ದು, ಅದರ ಸೂಚನೆ ಎಂಬಂತೆ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗಿರುವುದು ಕಂಡುಬಂದಿದೆ.
ಮುಂದಿನ ವಿಧಾನಸಭಾ ಚುನಾವಣೆಗೆ ಹುಣಸೂರು ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ ಅಲ್ಲಿಂದಲೇ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಳೆದ ಐದು ವರ್ಷಗಳಿಂದ ಈ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯಲ್ಲಿ ಶಾಸಕ ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ.ಹರೀಶ್ ಗೌಡ ತೊಡಗಿಸಿಕೊಂಡಿದ್ದರು. 2018ರ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸುವ ಬಯಕೆ ಅವರದ್ದಾಗಿತ್ತು.[ಜಿಲ್ಲಾಧಿಕಾರಿಗೆ ಧಮ್ಕಿ: ಸಿಎಂ ಆಪ್ತ ಮರಿಗೌಡ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕ]
ಆದರೆ ಇದೀಗ ಪ್ರಜ್ವಲ್ ರೇವಣ್ಣ ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದರಿಂದಾಗಿ ಎಲ್ಲವೂ ಅದಲು ಬದಲಾಗುವ ಸಾಧ್ಯತೆ ಕಂಡು ಬರುತ್ತಿದೆ. ಪಕ್ಷದ ಮೂಲಗಳು ಹೇಳುವ ಪ್ರಕಾರ ಜಿ.ಡಿ.ಹರೀಶ್ ಗೌಡರಿಗೆ ಮೈಸೂರು ಚಾಮರಾಜ ಕ್ಷೇತ್ರದಿಂದ ಟಿಕೆಟ್ ನೀಡಲಾಗುತ್ತದೆ ಎನ್ನಲಾಗಿದೆ. ಈ ಕ್ಷೇತ್ರದಿಂದ ಈ ಹಿಂದೆ ಶಾಸಕ ಶಂಕರಲಿಂಗೇಗೌಡರು ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ವಾಸು ಅವರ ಎದುರು ಪರಾಭವಗೊಂಡಿದ್ದರು.
ಇದೀಗ ಶಂಕರಲಿಂಗೇಗೌಡರು ನಿಧನರಾಗಿರುವ ಹಿನ್ನಲೆಯಲ್ಲಿ ಜಿ.ಡಿ.ಹರೀಶ್ ಗೌಡರಿಗೆ ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟು ಹುಣಸೂರು ಕ್ಷೇತ್ರಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸುವುದು ದೇವೇಗೌಡರ ಕುಟುಂಬದ ಆಲೋಚನೆಯಾಗಿದೆ.

ಸಂಘಟನೆಯಲ್ಲಿ ತಲ್ಲೀನರಾದ ಪ್ರಜ್ವಲ್
ಹೀಗಾಗಿ ಚುನಾವಣೆಗೆ ಇನ್ನೂ ವರ್ಷವಿರುವಾಗಲೇ ಎಲ್ಲ ಸಿದ್ಧತೆಗಳನ್ನು ಮಾಡುತ್ತಿರುವ ಜೆಡಿಎಸ್ ಚುನಾವಣಾ ತಂತ್ರಗಳನ್ನು ಈಗಿನಿಂದಲೇ ಆರಂಭಿಸಿದೆ. ಪ್ರಜ್ವಲ್ ರೇವಣ್ಣ ಹುಣಸೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಮುಖಂಡರನ್ನು ಭೇಟಿ ಮಾಡಿ ಸಂಘಟನೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರಲ್ಲದೆ, ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಾ ಮುಂದಿನ ಚುನಾವಣೆಗೆ ಜೆಡಿಎಸ್ ನಿಂದ ನಾನೇ ಅಭ್ಯರ್ಥಿ ಎಂಬುದನ್ನು ಮನವರಿಕೆ ಮಾಡಿಕೊಡುತ್ತಿದ್ದಾರೆ.

ಪ್ರಜ್ವಲ್ ಅಚ್ಚರಿಯ ಮಾತು
ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರಾಡಿದ ಮಾತುಗಳು ಅಚ್ಚರಿಯನ್ನುಂಟು ಮಾಡಿದೆ. "[ದೇವೇಗೌಡರಿಗೆ ಮತ್ತೊಮ್ಮೆ ಸಿದ್ದು ಕೃತಜ್ಞತೆ ಹೇಳಿದ್ದೇಕೆ?]

ಪ್ರಜ್ವಲ್ ಹೇಳಿದ್ದೇನು?
ಹುಣಸೂರು ತಾಲೂಕಿನ ಜೆಡಿಎಸ್ ಪಕ್ಷದ ಕಾರ್ಯಕರ್ತರಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುವ ಅಭ್ಯರ್ಥಿ ಬಗ್ಗೆ ಗೊಂದಲ ಇರುವುದು ನಿಜ. ಆದರೆ ಈ ತಾಲೂಕಿನ ಇಬ್ಬರು ಮಾಜಿ ಶಾಸಕರು ಹಾಗೂ ಹಾಲಿ ಶಾಸಕರಾಗಿರುವ ಜಿ.ಟಿ.ದೇವೇಗೌಡರು ಮರಳಿ ಪಕ್ಷ ಸೇರಲು ಹಾಗೂ ಎಸ್ ಚಿಕ್ಕಮಾದು ಅವರು ಪಕ್ಷಕ್ಕೆ ಸೇರ್ಪಡೆಗೊಂಡಾಗ ವಿಧಾನ ಪರಿಷತ್ ಸದಸ್ಯ ರನ್ನಾಗಿ ಆಯ್ಕೆ ಮಾಡಲು ನನ್ನ ತಾಯಿ ಭವಾನಿ ಅವರು ಶ್ರಮಿಸಿದ್ದಾರೆ. ಅದರ ಋಣವನ್ನು ತೀರಿಸಲು ಅವರು ಹುಣಸೂರು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಲ್ಲದೆ ನನ್ನ ಗೆಲುವಿಗೂ ಶ್ರಮಿಸಲಿದ್ದಾರೆ" ಎಂಬ ಅವರ ಮಾತು ಕ್ಷೇತ್ರದ ಜನರಲ್ಲಿ ಅಚ್ಚರಿ ಹುಟ್ಟಿಸಿದೆ.[ಜೆಡಿಎಸ್ ನಂತೆ ಕಾಂಗ್ರೆಸ್ ಕೂಡ ಅಪ್ಪ-ಮಕ್ಕಳ ಪಕ್ಷ: ವಿಶ್ವನಾಥ್]

ಗೆಲ್ಲುವ ವಿಶ್ವಾಸ
ಪ್ರಜ್ವಲ್ ರೇವಣ್ಣ ಅವರ ಈ ಮಾತುಗಳನ್ನು ಕೇಳಿದ ಬಳಿಕ ಹುಣಸೂರು ಕ್ಷೇತ್ರದಿಂದ ಅವರು ಜೆಡಿಎಸ್ ಅಭ್ಯರ್ಥಿ ಎನ್ನುವುದು ಖಚಿತವಾದಂತೆಯೇ. ಬಹಳಷ್ಟು ಹುಮ್ಮಸ್ಸಿನಲ್ಲಿರುವ ಅವರು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸದಲ್ಲಿಯೂ ಇದ್ದಾರೆ.

ಸೂಕ್ತ ಸವಾಲೆಸೆಯುತ್ತಾರಾ ಪ್ರಜ್ವಲ್?
ರಾಜಕೀಯವಾಗಿ ಅನುಭವ ಹೊಂದಿರುವ ಮತ್ತು ಜನರ ಒಡನಾಟದಲ್ಲಿರುವ ಹಾಲಿ ಶಾಸಕ ಕಾಂಗ್ರೆಸ್ ನ ಎಚ್.ಪಿ. ಮಂಜುನಾಥ್ ಮುಂದೆ ಪ್ರಜ್ವಲ್ ರೇವಣ್ಣ ಯಾವ ರೀತಿ ಸ್ಪರ್ಧೆವೊಡ್ಡಿ ಗೆಲುವು ಸಾಧಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications