ಅಪ್ಪನ ಹೆಗಲೇರಿ ಜಾತ್ರೆ ನೋಡುವ ಮಗುವಂತೆ ಕೃತಿ ಬರೆದಿದ್ದೇನೆ:ಪ್ರಕಾಶ್ ರೈ
ಮೈಸೂರು, ಅಕ್ಟೋಬರ್. 8: ನಾನು ಚೆನ್ನಾಗಿದ್ದರೆ ನನ್ನ ಪ್ರಪಂಚ ಚೆನ್ನಾಗಿರುತ್ತದೆ ಎಂದುಕೊಳ್ಳುತ್ತಿದ್ದೆ. ಆದರೆ ನಾನಿರುವ ಪ್ರಪಂಚ ಚೆನ್ನಾಗಿದ್ದರೆ ಮಾತ್ರ ನಾನು ಚೆನ್ನಾಗಿರುತ್ತೇನೆ ಎಂದು ಅರ್ಥ ಮಾಡಿಕೊಂಡಿದ್ದೇನೆ; ನಂಬಿದ್ದೇನೆ' ಇದು ಪ್ರಕಾಶ್ ರೈ ಅವರ ಅಂಕಣವೊಂದರ ಸಾಲುಗಳು.
ಆ ಸಾಲುಗಳ ಆಶಯ ಸಾಕಾರಗೊಳಿಸುವ ಚರ್ಚೆಯ ಮೂಲಕ ಖ್ಯಾತ ನಟ ಪ್ರಕಾಶ್ ರೈ ಅವರ ಅಂಕಣಗಳ ಬರಹ ಅವರವರ ಭಾವಕ್ಕೆ' ಕೃತಿ ಲೋಕಾರ್ಪಣೆಗೊಂಡಿತು.
ನೆಲೆ ಹಿನ್ನೆಲೆ, ಜನಮನ ಮೈಸೂರು ಮತ್ತು ಸಾವನ್ನಾ ಪ್ರಕಾಶನದ ಸಹಯೋಗದಲ್ಲಿ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಕೃತಿ ಬಿಡುಗಡೆ ಕಾರ್ಯಕ್ರಮವು ಸಮಾಜ ಕಟ್ಟುವ ಚಿಂತನೆಯನ್ನು ಬಿತ್ತುವ ಮೂಲಕ ವಿಶಿಷ್ಟವಾಗಿ ನಡೆಯಿತು.
ಪ್ರಕಾಶ್ ರೈ ಅವರ ಅಭಿಮಾನಿಗಳು, ಚಿಂತಕರು, ವಿಚಾರವಂತರಿಂದ ಭರ್ತಿಯಾಗಿದ್ದ ಸಭಾಂಗಣವು ಪ್ರಕಾಶ್ ರೈ ಕಲಾವಿದರಾಗಿ ಅವರಿಗಿರುವ ಮಾನವೀಯ ತುಡಿತಕ್ಕೆ ಸಹಮತ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಗಣ್ಯರು ಕೃತಿ ಕುರಿತು ಏನು ಹೇಳಿದರು? ಇಲ್ಲಿದೆ ನೋಡಿ ವಿವರ.

ಹಲವು ಮುಖಗಳ ಪರಿಚಯ
ಸಾಹಿತಿ ಪ್ರೊ.ಸಿ.ನಾಗಣ್ಣ, ರಂಗಕರ್ಮಿ ಕೆ.ಆರ್.ಸುಮತಿ, ಮಂಡ್ಯ ರಮೇಶ್ ಅವರವರ ಭಾವಕ್ಕೆ' ಕೃತಿಯಲ್ಲಿನ ಒಂದೊಂದು ಅಂಕಣ ಓದುವ ಮೂಲಕ ಪ್ರಕಾಶ್ ರೈ ನಟರಾಗಿಯೂ ಅವರಲ್ಲಿರುವ ಮಾನವೀಯ ಅಂತಃಕರಣದ ಹಲವು ಮುಖಗಳನ್ನು ಪರಿಚಯಿಸಿದ್ದಾರೆ ಎಂದರು.

ನುಡಿದಂತೆ ನಡೆಯುತ್ತಿರುವ ರೈ
ವಿಮರ್ಶಕ ಪ್ರೊ.ಓ.ಎಲ್.ನಾಗಭೂಷಣ ಸ್ವಾಮಿ ಅವರು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ಕೃತಿ ಹಸ್ತಾಂತರಿಸಿ ಮಾತನಾಡಿ, ಜೀವನ ಪ್ರವಾಸವಾಗಿರದೆ ಪ್ರಯಾಣವಾಗಿರಬೇಕೆಂಬ ಮಾತಿನಂತೆ ಪ್ರಕಾಶ್ ರೈ ನಡೆದುಕೊಳ್ಳುತ್ತಿದ್ದಾರೆ. ಇಮೇಜ್ ಇರುವ ವ್ಯಕ್ತಿಗಳು ಬದುಕನ್ನು ಹೇಗೆ ನೋಡಿದ್ದಾರೆ ಎಂಬುದನ್ನು ಈ ಪುಸ್ತಕದಲ್ಲಿ ತಿಳಿಯಬಹುದು ಎಂದರು.

ಗೆಳೆಯರ ಪ್ರೋತ್ಸಾಹ
ನಟ ಪ್ರಕಾಶ್ ರೈ ಮಾತನಾಡಿ, ಬರವಣಿಗೆ ಕೆಲಸ ನನ್ನ ಮರು ಹುಟ್ಟಾಯಿತು. ಸಂಕೋಲೆಗಳಿಂದ ಬಿಡಿಸಿಕೊಂಡು ಹೊರಬಂದು ಸ್ವಾತಂತ್ರ್ಯ ಗಳಿಸಿಕೊಂಡ ಗಳಿಗೆ ಇದು. ಗೆಳೆಯರಾದ ಕಟ್ಟೆ ಗುರುರಾಜ್, ಜೋಗಿ ಅಂತಹವರು ಬರೆಯಲು ಪ್ರೋತ್ಸಾಹಿಸಿದರು ಎಂದರು.

ನೆನಪುಗಳು ಬರವಣಿಗೆಗೆ ಇಳಿದ ಕ್ಷಣ
ಎತ್ತರದಲ್ಲಿದ್ದವರು ಬರೆದಾಗ ನೆನಪು, ಅನುಭವ ಬರವಣಿಗೆಯಲ್ಲಿ ಮೂಡುತ್ತದೆ ಎನ್ನುವುದಕ್ಕಿಂತ ನಾನು ಜಾತ್ರೆಯನ್ನು ಅಪ್ಪನ ಹೆಗಲ ಮೇಲೆ ಕುಳಿತು ನೋಡುವ ಮಗುವಿನ ರೀತಿ ಬರೆಯುತ್ತಿದ್ದೇನೆ. ಆಗಲೇ ಲಂಕೇಶ್, ತೇಜಸ್ವಿ, ಚಿತ್ತಾಲರ ಒಡನಾಟ, ನೆನಪುಗಳು ಬರವಣಿಗೆಗೆ ಇಳಿದವು.
ನನ್ನೊಂದಿಗೆ ಶ್ರೀಮಂತಿಕೆ ಕನ್ನಡ ಸಾಹಿತ್ಯ, ರಂಗಭೂಮಿ ಅನುಭವ, ಸಿನೆಮಾ ಹೀಗೆ ಅನೇಕ ಗ್ರಹಿಕೆ, ಅಂತಃಕರಣ ಸುತ್ತಲ ವಾತಾವರಣ ನಿರ್ಮಿಸಿಕೊಟ್ಟಿತು ಎಂದು ಪ್ರಕಾಶ್ ರೈ ತಿಳಿಸಿದರು.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications