ಮೈಸೂರು ಸಂಸ್ಥಾನದ ಉತ್ತರಾಧಿಕಾರಿ ಘೋಷಣೆ
ಮೈಸೂರು, ಫೆ. 12: ರಾಜ್ಯದ ಪ್ರತಿಷ್ಠಿತ ಮೈಸೂರು ಸಂಸ್ಥಾನದ ಉತ್ತರಾಧಿಕಾರಿ ಆಯ್ಕೆ ವಿವಾದ ಅಂತ್ಯಗೊಂಡಿದೆ. ದಿವಂಗತ ಶ್ರೀಕಂಠದತ್ತ ಒಡೆಯರ್ ಅವರ ಹಿರಿಯ ಸಹೋದರಿ ಗಾಯತ್ರಿ ಅವರ ಮೊಮ್ಮಗ ಯದುವೀರ್ ಗೋಪಾಲರಾಜೇ ಅರಸ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸಿರುವುದಾಗಿ ಮಹಾರಾಣಿ ಪ್ರಮೋದಾದೇವಿ ಅವರು ಘೋಷಿಸಿದ್ದಾರೆ.
ಈ ಕುರಿತು ಮೈಸೂರಿನ ಅರಮನೆಯಲ್ಲಿ ಗುರುವಾರ ಪ್ರಮೋದಾ ದೇವಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ರಾಜಮನೆತನದ ಸಂಪ್ರದಾಯದಂತೆ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ್ದೇವೆ. ಅರಮನೆ ಕುರಿತು ಮಾಹಿತಿ ಹೊಂದಿರುವ ವ್ಯಕ್ತಿಗಳನ್ನು ಉತ್ತರಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ಪ್ರಮೋದಾ ದೇವಿ ತಿಳಿಸಿದರು. [ಯದುರಾಜ್ ಗೆ ಪಟ್ಟಾಭಿಷೇಕ]

ಉತ್ತರಾಧಿಕಾರಿ ನೇಮಿಸುವ ಮೊದಲು ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ಉತ್ತರಾಧಿಕಾರಿಯಾಗಿ ಯದುವೀರ್ ಗೋಪಾಲರಾಜೇ ಅರಸ್ ಅವರನ್ನು ನೇಮಿಸಿರುವ ಕುರಿತು ದಾಖಲೆ ಪ್ರದರ್ಶಿಸಿದರು.
ಫೆ. 23ರಂದು ದತ್ತು ಸ್ವೀಕಾರ : ಸನಾತನ ಧರ್ಮದ ಪ್ರಕಾರ ಯದುವೀರ್ ಅವರನ್ನು ಪ್ರಮೋದಾದೇವಿ ದತ್ತು ಪಡೆಯಲಿದ್ದಾರೆ. ಫೆ. 23ರಂದು ಯದುವೀರ್ ಅವರನ್ನು ದತ್ತು ಸ್ವೀಕರಿಸಲಾಗುವುದು. ರಾಜಗುರು ಪರಕಾಲ ಮಠದ ಶ್ರೀಗಳು ಸಮಾರಂಭದ ನೇತೃತ್ವ ವಹಿಸುವರು. [ಮೈಸೂರು ಯದುವಂಶದ ವಂಶಾವಳಿ]

ಕುಟುಂಬದವರು ಹಾಗೂ ವಿಶೇಷ ಆಹ್ವಾನಿತರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಸಂಜೆ ಸಾರ್ವಜನಿಕ ಮೆರವಣಿಗೆ ನಡೆಸುವ ಉದ್ದೇಶವಿದೆ. ಸಂಪೂರ್ಣ ಕಾರ್ಯಕ್ರಮದ ರೂಪುರೇಷೆಯನ್ನು ಇನ್ನೂ ಸಿದ್ಧಪಡಿಸಿಲ್ಲ ಎಂದು ಪ್ರಮೋದಾದೇವಿ ತಿಳಿಸಿದರು. [ಉತ್ತರಾಧಿಕಾರಿ ಯಾರು?]
ಮೈಸೂರು ಯದುವಂಶದ ಕುಟುಂಬ ಸದಸ್ಯರು, ಉತ್ತರಾಧಿಕಾರಿಯಾಗಿ ನೇಮಕಗೊಂಡಿರುವ ಯದುವೀರ್ ಅರಸ್ ಅವರ ತಂದೆ ಹಾಗೂ ತಾಯಿ ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications