ಬೇಬಿ ಬೆಟ್ಟ ನಮ್ಮ ಆಸ್ತಿ, ಟ್ರಯಲ್ ಬ್ಲಾಸ್ಟ್ ಮಾಡುವಾಗ ನಮ್ಮ ಅನುಮತಿ ಪಡೆಯಬೇಕಿತ್ತು: ಪ್ರಮೋದಾದೇವಿ
ಮೈಸೂರು, ಜುಲೈ 26: ''ಸರಕಾರಗಳು ರಾಜ ಮನೆತನಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ನಾವೇನೂ ಯಾರದೋ ಆಸ್ತಿ ಕಬಳಿಸಲು ಹೊರಟಿರುವಂತೆ ಯೋಚಿಸುತ್ತಿವೆ. ಇದು ನಮಗೆ ಕೊಡುತ್ತಿರುವ ಕಿರುಕುಳ. ದೇಶದ ಬೇರೆ ಯಾವ ರಾಜಮನೆತನಗಳಿಗೂ ಆಸ್ತಿಯ ವಿಚಾರದಲ್ಲಿ ಅಲ್ಲಿನ ಸರಕಾರಗಳು ಇಷ್ಟು ತೊಂದರೆ ಕೊಟ್ಟಿಲ್ಲ'' ಎಂದು ಮೈಸೂರು ಅರಸರ ಪ್ರಮೋದಾದೇವಿ ಒಡೆಯರ್ ಬೇಸರ ವ್ಯಕ್ತಪಡಿಸಿದರು.
ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ''ಮಂಡ್ಯ ಜಿಲ್ಲಾಡಳಿತ ಬೇಬಿ ಬೆಟ್ಟದಲ್ಲೇ ಟ್ರಯಲ್ ಮಾಡಬೇಕು ಅಂತೇನೂ ಇಲ್ಲ. ನಮ್ಮ ಜಾಗದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡುವಾಗ ಕನಿಷ್ಠ ನಮ್ಮ ಅನುಮತಿ ಪಡೆಯಬೇಕಿತ್ತು. ಆದರೂ ಯಾಕಿಷ್ಟು ನಮಗೆ ಹಿಂಸೆ ಕೊಡುತ್ತಾರೆ ಎಂಬುದು ಮಾತ್ರ ಗೊತ್ತಿಲ್ಲ. 10 ರೂಪಾಯಿ ಬೆಲೆ ಬಾಳುವುದನ್ನು 10 ಪೈಸೆಗೆ ತೆಗೆದು ಕೊಳ್ಳುವ ಮನಃಸ್ಥಿತಿ ಸರಕಾರ ಪ್ರದರ್ಶಿಸುತ್ತಿದೆ. ಸರಕಾರಕ್ಕೆ ನಾನು ಧನ್ಯವಾದ ಹೇಳಬೇಕು'' ಎಂದು ಕಿಡಿಕಾರಿದ್ದಾರೆ.
''ಸರಕಾರದ ನಡೆಯಿಂದ ನನ್ನ ಕಾನೂನು ಜ್ಞಾನ ಹೆಚ್ಚಾಯಿತು. ಬೇಬಿ ಬೆಟ್ಟದ ವಿಚಾರದಲ್ಲಿ ಈಗ ಕಾನೂನು ತಜ್ಞರ ಜೊತೆ ಚರ್ಚಿಸಿ ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ. ಮೈಸೂರಿನ ಕುರುಬಾರಹಳ್ಳಿ ಬಿ ಖರಾಬ್ ಜಾಗದ ವಿವಾದದಲ್ಲಿ ಸುಪ್ರೀಂಕೋರ್ಟ್ನಲ್ಲಿ ನಮಗೆ ಜಯ ಸಿಕ್ಕಿದೆ. ಆ ತೀರ್ಪು ಈ ಬೆಟ್ಟದ ಜಾಗಕ್ಕೂ ಅನ್ವಯವಾಗಲಿದೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿ
ರಾಜ್ಯ ವಿಲೀನ ಸಂದರ್ಭದಲ್ಲಿ ಭಾರತ ಸರಕಾರ ಮತ್ತು ರಾಜವಂಶದ ನಡುವೆ ಒಪ್ಪಂದ ಏರ್ಪಟ್ಟಿತ್ತು. ರಾಜ ಮನೆತನಕ್ಕೆ ಒಂದಷ್ಟು ಖಾಸಗಿ ಆಸ್ತಿಯನ್ನು ಪಟ್ಟಿ ಮಾಡಿ ಇನ್ನುಳಿದ ಎಲ್ಲಾ ಆಸ್ತಿಗಳನ್ನು ದೇಶದೊಂದಿಗೆ ವಿಲೀನ ಮಾಡಿದರು. ಈ ಸಂಬಂಧ 1950ರಲ್ಲಿ ಕೇಂದ್ರ ಸರಕಾರ ಮತ್ತು ರಾಜವಂಶಸ್ಥ ನಡುವೆ ಒಪ್ಪಂದ ಏರ್ಪಟ್ಟಿದೆ. ಇದರ ಮುಂದುವರಿದ ಭಾಗವಾಗಿ 1951ರಲ್ಲಿ ಖಾಸಗಿ ಆಸ್ತಿಗಳ ಪಟ್ಟಿಯನ್ನು ಸರಕಾರಿ ಆದೇಶದ ಮೂಲಕ ಖಚಿತಪಡಿಸಲಾಗಿದೆ. ಯಾವುದು ನಮ್ಮ ಖಾಸಗಿ ಆಸ್ತಿ, ಯಾವುದು ಸರಕಾರಿ ಆಸ್ತಿ ಎಂಬುದು ಅಧಿಕಾರ ನಡೆಸುವ ಎಲ್ಲರಿಗೂ ಗೊತ್ತಿದೆ. ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ಹೇಳಿದರು.

ಖಾಸಗಿ ಆಸ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ಯಾಕೆ?
''ಬೇಬಿ ಬೆಟ್ಟ ಹಾಗೂ ಸುತ್ತಮುತ್ತಲ 1,623 ಎಕರೆ ನಮ್ಮ ಖಾಸಗಿ ಆಸ್ತಿ. ಈ ಆಸ್ತಿಯನ್ನು ಸರಕಾರಿ ಅಧಿಕಾರಿಗಳು ಬಿ-ಖರಾಬ್ ಜಮೀನು ಎಂದು ಘೋಷಣೆ ಮಾಡಿದ್ದಾರೆ. ಇದರ ಪರಿಣಾಮ ಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿದೆ. ಆದರೆ, ದಾಖಲೆಗಳಲ್ಲಿ ಅದು ನಮಗೆ ಸೇರಿದ ಭೂಮಿಯಾಗಿದೆ. ಇಂತಹ ಸ್ಥಳದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಲು ಹೊರಟಿದ್ದಾರೆ. ಆ ಜಾಗ ನಮ್ಮ ವ್ಯಾಪ್ತಿಗೆ ಬಂದರೆ ನಾನು ಅಲ್ಲಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡುವುದಿಲ್ಲ'' ಎಂದು ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications