ನನಗೆ ರಾಜಕೀಯ ಗೊತ್ತು, ಆದರೆ ರಾಜಕಾರಣ ಬರಲ್ಲ; ಪ್ರಮೋದಾದೇವಿ
ಮೈಸೂರು, ಜೂನ್ 28: ಮೈಸೂರಿನ ದೊಡ್ಡಕೆರೆ ಸಮೀಪದ ಜಾಗದ ಖಾತೆ ಕುರಿತಾದ ಆಸ್ತಿ ವ್ಯಾಜ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡಕೆರೆ ಪಕ್ಕದ ಜಾಗದ ಖಾತೆ ಮಾಡಿಸಲು ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೋರ್ಟ್ ಆದೇಶ ನಮ್ಮ ಪರವಾಗಿದ್ದರೂ ಅದನ್ನು ಸರ್ಕಾರ ಉಲ್ಲಂಘನೆ ಮಾಡುತ್ತಿದೆ. ಹಳಬರು ಒಂದು ರೀತಿ ತೊಂದರೆ ಕೊಟ್ಟರೆ, ಹೊಸಬರಿಂದ ಮತ್ತೊಂದು ರೀತಿ ತೊಂದರೆ ಆಗುತ್ತಿದೆ. ನನಗೆ ರಾಜಕೀಯ ಗೊತ್ತು. ಆದರೆ ರಾಜಕಾರಣ ಮಾಡಲು ಬರಲ್ಲ. ಅದಕ್ಕಾಗಿ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದರು.
ಈ ಹಿಂದೆ ಶ್ರೀಕಂಠದತ್ತ ಒಡೆಯರ್ ಚುನಾವಣೆ ಎದುರಿಸಿದಾಗ ನಾನು ಕೂಡ ಜನರ ಬಳಿ ಹೋಗಿದ್ದೇನೆ. ಮುಂದಿನ ದಿನಗಳಲ್ಲಿ ಅವರ ಇಚ್ಛೆಯಂತೆ ಗ್ರಾಮ ದತ್ತು ಪಡೆದು ಅಭಿವೃದ್ಧಿ ಮಾಡುವತ್ತ ಗಮನ ಹರಿಸುತ್ತೇವೆ. ಅರಮನೆ ಕಡೆಯಿಂದ ಕೈಲಾದಷ್ಟು ಸಮಾಜ ಕಾರ್ಯಗಳನ್ನು ರೂಪಿಸುತ್ತೇವೆ. ರಾಜಕೀಯೇತರವಾಗಿಯೂ ಜನರ ಸೇವೆ ಮಾಡಬಹುದು ಎಂದರು.

ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಕೀಯ ಪ್ರವೇಶ ವಿಚಾರದ ಕುರಿತು ಪ್ರತಿಕ್ರಿಯಿಸಿ, ಅದು ಅವರ ಸ್ವಾತಂತ್ರ್ಯಕ್ಕೆ ಬಿಟ್ಟ ವಿಚಾರ. ನಾನು ನನ್ನ ಅನಿಸಿಕೆಯನ್ನು ಮಾತ್ರ ಹೇಳಬಲ್ಲೆ. ನನಗೆ ರಾಜಕೀಯಕ್ಕೆ ಬರಲು ಇಷ್ಟವಿಲ್ಲ. ರಾಜಕೀಯ ಪ್ರವೇಶ ಕುರಿತು ಮುಂದಿನ ದಿನಗಳಲ್ಲಿ ಯದುವೀರ್ ನನ್ನ ಬಳಿ ವಿಷಯ ಪ್ರಸ್ತಾಪಿದರೆ ನಾನು ಸಲಹೆ ನೀಡುತ್ತೇನೆ ಎಂದರು.
ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವದ ಕುರಿತು ಮಾತನಾಡಿ, ಈ ಕಾರ್ಯಕ್ರಮ ಮೈಸೂರು ಅರಮನೆಯಲ್ಲಿ ಜುಲೈ 18ರಂದು ಹಾಗೂ ಜುಲೈ 2 ರಂದು ಬೆಂಗಳೂರು ಅರಮನೆಯಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಸೇರಿದಂತೆ ಹಲವು ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ದೆಹಲಿ, ಮುಂಬೈ ಸೇರಿದಂತೆ ಹಲವು ರಾಜ್ಯದ ರಾಜವಂಶಸ್ಥರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಮಾರಂಭದಲ್ಲಿ ಒಡೆಯರ್ ಬಗ್ಗೆ ಚರ್ಚಾಗೋಷ್ಠಿ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications