ರಾಜವಂಶದ ವಿಶಾಲಾಕ್ಷಿದೇವಿ ಸ್ಥಿತಿ ಚಿಂತಾಜನಕ: ಬೆಂಗಳೂರಿಗೆ ಹೊರಟ ರಾಜಮಾತೆ ಪ್ರಮೋದಾದೇವಿ
Recommended Video

ಪ್ರಮೋದಾ ದೇವಿ ಒಡೆಯರ್ ಆಯುಧ ಪೂಜೆ ಬಿಟ್ಟು ಬೆಂಗಳೂರಿಗೆ ಬರಲು ಕಾರಣ | Oneindia Kannada
ಮೈಸೂರು, ಅಕ್ಟೋಬರ್.18: ಜಯಚಾಮರಾಜೇಂದ್ರ ಒಡೆಯರ್ ಅವರ ಕೊನೆಯ ಪುತ್ರಿ ಅನಾರೋಗ್ಯ ಹಿನ್ನೆಲೆಯಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ದಿಢೀರ್ ಬೆಂಗಳೂರಿಗೆ ಹೊರಟಿದ್ದಾರೆ.
ವಿಶಾಲಾಕ್ಷಿ ದೇವಿಯವರ ಸ್ಥಿತಿ ಚಿಂತಾಜನಕವಾಗಿದ್ದು, ಸಾಂಪ್ರದಾಯಿಕ ಆಯುಧ ಪೂಜೆ ಕೈ ಬಿಟ್ಟು ರಾಜಮಾತೆ ಪ್ರಮೋದಾದೇವಿ ಬೆಂಗಳೂರಿಗೆ ಹೊರಟಿದ್ದಾರೆ. ಸದ್ಯ ಆಯುಧ ಪೂಜೆಗೆ ರಾಜಮಾತೆ ಗೈರಾಗಿದ್ದು, ರಾಜವಂಶಸ್ಥರ ಗೈರಿನಲ್ಲಿಯೇ ಯದುವೀರ್ ಒಡೆಯರ್ ಪೂಜೆ ಸಲ್ಲಿಸುತ್ತಿದ್ದಾರೆ.

ವಿಶಾಲಾಕ್ಷಿದೇವಿ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈಗ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ಪುಟ್ಟ ಚಿನ್ನಮ್ಮಣ್ಣಿ (86) ಅವರ ಆರೋಗ್ಯದಲ್ಲೂ ಏರುಪೇರಾಗಿದ್ದು, ಅವರನ್ನು ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಗೆ ದಾಖಲಿಸಲಾಗಿದೆ.












Click it and Unblock the Notifications