ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡ; ಪ್ರಮೋದಾ ದೇವಿ ಒಡೆಯರ್
ಮೈಸೂರು, ಏಪ್ರಿಲ್ 06; ಚಾಮುಂಡಿ ಬೆಟ್ಟಕ್ಕೆ ರೋಪ್ ಬೇಡ ಎಂದು ಪರಿಸರಾಸಕ್ತರು ವಾದಿಸುತ್ತಿರುವ ಬೆನ್ನಲೇ ಇದೀಗ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಕೂಡ ಧ್ವನಿಗೂಡಿಸಿದ್ದಾರೆ.
ಬುಧವಾರ ಅರಮನೆಯಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, "ಈ ಹಿಂದೆ ಬೆರಳೆಣಿಕೆಯಷ್ಟಿದ್ದ ಮನೆ ಇಂದು ಇಡೀ ಗ್ರಾಮವಾಗಿದೆ. ಚಾಮುಂಡಿ ಬೆಟ್ಟ ಒಂದು ಧಾರ್ಮಿಕ ಕ್ಷೇತ್ರವಾಗಿ ಉಳಿಯಬೇಕು" ಎಂದರು.
"ನಗರದಿಂದ ಬೆಟ್ಟಕ್ಕೆ ಹೋಗಲು ಕೇವಲ 20 ನಿಮಿಷ ಸಾಕು. ಹಾಗಾಗಿ ಪರಿಸರ ನಾಶ ಮಾಡಿ ರೋಪ್ ವೇ ಮಾಡುವ ಅಗತ್ಯವಿಲ್ಲ. ಅದನ್ನು ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಮಾಡಿದರೆ ಪರಿಸರ ನಾಶವಾಗುತ್ತದೆ" ಎಂದು ಹೇಳಿದರು.

"ಈಗಾಗಲೇ ಚಾಮುಂಡಿ ಬೆಟ್ಟದ ಪರಿಸರಕ್ಕೆ ಹಾನಿಯಾಗಿದೆ. ಇರುವುದನ್ನು ಉಳಿಸಿಕೊಳ್ಳಬೇಕಿದೆ. ಬೆಟ್ಟದ ಮೇಲೆಯೇ ನಗರ ಪ್ರದೇಶ ನಿರ್ಮಾಣವಾಗುತ್ತಿದೆ. ಚಾಮುಂಡಿ ಬೆಟ್ಟದ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು. ಅಲ್ಲಿ ವಾಣಿಜ್ಯ ಮಳಿಗೆಗಳ ಅವಶ್ಯಕತೆಯೂ ಇಲ್ಲ. ಮೂಲಭೂತ ಸೌಕರ್ಯಗಳನ್ನು ನೀಡಿದರೆ ಸಾಕು" ಎಂದು ಪಮೋದಾ ದೇವಿ ಒಡೆಯರ್ ತಿಳಿಸಿದರು.
"ಬೆಟ್ಟದ ಮೇಲೆ 120 ಅಡಿ ಎತ್ತರದಲ್ಲಿರೋ ರಾಜೇಂದ್ರ ವಿಲಾಸ ಅರಮನೆ ಬಹಳ ದಿನಗಳಿಂದ ಪ್ರವಾಸಿಗರಿಗೆ ಮುಚ್ಚಿತ್ತು. ಇದೀಗ ರಾಜೇಂದ್ರ ವಿಲಾಸ ಪುನಶ್ಚೇತನ ಕಾಮಗಾರಿ ಆರಂಭ ಮಾಡಲಾಗಿದೆ. ತಜ್ಞರ ಅಭಿಪ್ರಾಯ ಪಡೆದು ನವೀಕರಣ ಮಾಡಲಾಗುತ್ತಿದೆ. ಅರಮನೆಯ ಪುರಾತನ ಪಾರಂಪರಿಕ ಶೈಲಿಯಲ್ಲೇ ನವೀಕರಣ ಕಾರ್ಯ ನಡೆಯುತ್ತಿದೆ" ಎಂದರು.
"ಗೋಪುರದ ನವೀಕರಣ ಮಾಡುವುದು ಬಹಳ ಸವಾಲಾಗಿತ್ತು. ಎಲ್ಲವೂ ಒಂದು ಹಂತಕ್ಕೆ ಬಂದು ನಿಂತಿದೆ. ಮತ್ತೆ ಹೋಟೆಲ್ ಆಗಿ ಮುಂದುವರೆಸುವ ಉದ್ದೇಶವಿದೆ. 1975 ರಿಂದ ರಾಜೇಂದ್ರ ವಿಲಾಸ ಅರಮನೆ ಹೋಟೆಲ್ ಆಗಿ ನಡೆಯುತ್ತಿತ್ತು. ನಂತರ 1995 ರಲ್ಲಿ ರಾಜೇಂದ್ರ ವಿಲಾಸ ಅರಮನೆ ಮುಚ್ಚಲ್ಪಟ್ಟಿತ್ತು" ಎಂದು ಹೇಳಿದರು.
2022-23ರ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು. ಚಿಕ್ಕಬಳ್ಳಾಪುರದ ನಂದಿ ಗಿರಿಧಾಮಕ್ಕೆ ಸಹ ರೋಪ್ ವೇ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಮೈಸೂರು ಕನ್ನಡ ವೇದಿಕೆ, ಪರಿಸರ ಪ್ರೇಮಿಗಳು ರೋಪ್ ವೇ ನಿರ್ಮಾಣ ಮಾಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಚಾಮುಂಡಿ ಬೆಟ್ಟಕ್ಕೆ ಚತುಷ್ಪಥ ರಸ್ತೆ ನಿರ್ಮಾಣ ಮಾಡುವ ಪ್ರಸ್ತಾಪವಿತ್ತು. ಆದರೆ ವಿರೋಧ ವ್ಯಕ್ತವಾದ ಕಾರಣ ಯೋಜನೆ ಕೈ ಬಿಡಲಾಗಿತ್ತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications